ಆ್ಯಪ್ನಗರ

ಮಾಜಿ ಡಿಸಿಎಂ ಪರಮೇಶ್ವರ್‌ ಮನೆಯಲ್ಲಿ ಮುಂದುವರಿದ ಐಟಿ ದಾಳಿ: ಮಹತ್ವದ ದಾಖಲೆಗಳ ಪರಿಶೀಲನೆ

ರಾಜ್ಯದಲ್ಲಿ ಡಿಕೆ ಶಿವಕುಮಾರ್ ಪ್ರಕರಣದ ಬಳಿಕ ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್‌ ಹಾಗೂ ಆರ್‌.ಎಲ್‌. ಜಾಲಪ್ಪಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದ್ದು, ಇಂದೂ ಕೂಡ ದಾಳಿ ಮುಂದುವರಿದಿದೆ. ಈ ಕುರಿತು ಒಂದು ವರದಿ.

Vijaya Karnataka Web 11 Oct 2019, 10:30 am
ಬೆಂಗಳೂರು: ತೆರಿಗೆ ವಂಚನೆ, ಸಿದ್ದಾರ್ಥ ವೈದ್ಯ ಕಾಲೇಜಿನಲ್ಲಿ ನಿಯಮಬಾಹಿರ ಸೀಟು ಹಂಚಿಕೆ ಅಥವಾ ಮಾರಾಟ ಆರೋಪ ಸಂಬಂಧ ಎರಡನೇ ದಿನವೂ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಸದಾಶಿವನಗರದ ಮನೆಯಲ್ಲಿ ಐಟಿ ಅಧಿಕಾರಿಗಳು ಶೋಧ, ಪರಿಶೀಲನೆ ಮುಂದುವರೆಸಿದ್ದಾರೆ. ಹತ್ತಕ್ಕೂ ಹೆಚ್ಚು ಅಧಿಕಾರಿಗಳ ತಂಡ ಪರಮೇಶ್ವರ್ ನಿವಾಸದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
Vijaya Karnataka Web parameshwar


ಆಸ್ತಿ, ವಹಿವಾಟು ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಪರಮೇಶ್ವರ್ ಅವರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆಂದು ತಿಳಿದು ಬಂದಿದೆ. ಗುರುವಾರ ರಾತ್ರಿ 11ರವರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದರು.

ಈ ಸುದ್ದಿ ಓದಿ: ಪರಂ, ಜಾಲಪ್ಪಗೆ ಐಟಿ ಶಾಕ್: ದಾಳಿ ವೇಳೆ ಸಿಕ್ತು ಕಂತೆ ಕಂತೆ ನೋಟು!

ಇನ್ನು, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅವರ ನಿವಾಸ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಗುರುವಾರವೇ ಐಟಿ ಇಲಾಖೆ ದಾಳಿ ನಡೆಸಿದ್ದು ತಪಾಸಣೆಯ ವೇಳೆ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ದಾಳಿ ವೇಳೆ ಒಟ್ಟು 4 ಕೋಟಿ 50 ಲಕ್ಷ ರೂಪಾಯಿ ಪತ್ತೆಯಾಗಿದ್ದು, ಜಿ ಪರಮೇಶ್ವರ್ ನಿವಾಸದಲ್ಲಿ 70 ಲಕ್ಷ, ನೆಲಮಂಗಲದಲ್ಲಿರುವ ಪುರಸಭೆ ಸದಸ್ಯ ಶಿವಕುಮಾರ್ ಮನೆಯಲ್ಲಿ 1.80 ಕೋಟಿ ನಗದನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಪರಮೇಶ್ವರ್‌, ಜಾಲಪ್ಪಗೆ ಐಟಿ ಶಾಕ್‌: ದಿನದ ಪ್ರಮುಖ 10 ಬೆಳವಣಿಗೆಗಳು

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ಸಂಸ್ಥೆಯ ಹಣಕಾಸು ವ್ಯವಹಾರಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ತುಮಕೂರು ನಗರದ ಕುಣಿಗಲ್‌ ರಸ್ತೆಯಲ್ಲಿರುವ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ, ಪದವಿ ಕಾಲೇಜು ಹಾಗೂ ಹೆಗ್ಗೆರೆಯಲ್ಲಿನ ಸಿದ್ಧಾರ್ಥ ಮೆಡಿಕಲ್‌ ಕಾಲೇಜಿನ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು, ಮಹತ್ವದ ದಾಖಲೆಪತ್ರಗಳನ್ನು ಪರಿಶೀಲಿಸಿದ್ದಾರೆ.

ಕೋಲಾರದಲ್ಲಿ ಮುಂದುವರಿದ ಐಟಿ ದಾಳಿ: ಆರ್‌.ಎಲ್‌. ಜಾಲಪ್ಪ ಆಸ್ಪತ್ರೆಯಲ್ಲಿ ಐಟಿ ಅಧಿಕಾರಿಗಳಿಂದ ತಪಾಸಣೆ

ಇನ್ನೊಂದೆಡೆ, ಆರ್.ಎಲ್‌.ಜಾಲಪ್ಪ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೂ ಇಂದೂ ಕೂಡ ದಾಳಿ ಮುಂದುವರಿದಿದೆ. ಕೋಲಾರ ಹೊರವಲಯದ ಟಮಕದಲ್ಲಿರುವ ಆರ್‌.ಎಲ್‌. ಜಾಲಪ್ಪ ಆಸ್ಪತ್ರೆ, ದೇವರಾಜ ಅರಸ್‌ ಸಂಶೋಧನಾ ಕೇಂದ್ರದಲ್ಲಿ ಐಟಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.

ಪರಮೇಶ್ವರ್, ಜಾಲಪ್ಪ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ: ತಿಂಗಳ ಹಿಂದೆಯೇ ನಡೆದಿತ್ತು ತಯಾರಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ