ಆ್ಯಪ್ನಗರ

ಬೆಂಗಳೂರು, ಮಂಗಳೂರು, ಹುಬ್ಬಳ್ಳಿಯಲ್ಲೂ ಇಂದು ಜನಾಗ್ರಹ ಸಭೆ

ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ನಿಂದ ಭಾನುವಾರ ...

Vijaya Karnataka 25 Nov 2018, 5:00 am
ಬೆಂಗಳೂರು: ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ನಿಂದ ಭಾನುವಾರ ಬೆಂಗಳೂರು, ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಬೃಹತ್‌ ಜನಾಗ್ರಹ ಸಭೆ ನಡೆಯಲಿದೆ. ಇದಕ್ಕೂ ಮುನ್ನ ನಾನಾ ಭಾಗಗಳಲ್ಲಿ ಶ್ರೀರಾಮ, ಹನುಮಂತ ಕಲಾಕೃತಿಗಳನ್ನೊಳಗೊಂಡ ಮೆರವಣಿಗೆ ನಡೆಯಲಿದೆ.
Vijaya Karnataka Web janagra summit
ಬೆಂಗಳೂರು, ಮಂಗಳೂರು, ಹುಬ್ಬಳ್ಳಿಯಲ್ಲೂ ಇಂದು ಜನಾಗ್ರಹ ಸಭೆ


ಅಯೋಧ್ಯೆಯಲ್ಲಿ ಭಾನುವಾರ ಧರ್ಮಸಭೆ ನಡೆಯಲಿದ್ದು, ಸುಗ್ರೀವಾಜ್ಞೆ ಮೂಲಕ ಮಂದಿರ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಕೇಂದ್ರ ಸರಕಾರವನ್ನು ಆಗ್ರಹಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ರಾಜ್ಯದಲ್ಲೂ ಸಭೆ ಆಯೋಜಿಸಲಾಗಿದೆ.

ಬೆಂಗಳೂರಿನ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಸಂಜೆ 4 ಕ್ಕೆ ಜನಾಗ್ರಹ ಸಭೆ ನಡೆಯಲಿದೆ. ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಆಶೀರ್ವಚನ ಮಾಡಲಿದ್ದಾರೆ. ಹರಿದ್ವಾರದ ಪರಮಾರ್ಥ ಆಶ್ರಮದ ಅಧ್ಯಕ್ಷ ಚಿನ್ಮಯಾನಂದ ಸರಸ್ವತಿ ಮಹಾರಾಜ್‌, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರಕಾರ್ಯವಾಹ ಭಾಗಯ್ಯಾಜಿ, ವಿಹಿಪ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಿಲಿಂದ ಪರಾಂಡೆ ಭಾಷಣ ಮಾಡಲಿದ್ದಾರೆ. ಒಂದು ಲಕ್ಷ ರಾಮಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಪರಿಷದ್‌ ತಿಳಿಸಿದೆ.

ಬೆಂಗಳೂರು, ಮಂಗಳೂರು ಮತ್ತು ಹುಬ್ಬಳ್ಳಿಯ ನಾನಾ ಭಾಗಗಳಲ್ಲಿ ಶನಿವಾರ ಸಂಘ ಪರಿವಾರದ ಸಾವಿರಾರು ಕಾರ್ಯಕರ್ತರು ಬೈಕ್‌ ರಾರ‍ಯಲಿ ನಡೆಸಿದರು.

ಉಡುಪಿಯಲ್ಲಿ ಮಾತೃ ಸಮಾವೇಶ

ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಂದೋಲನದ ಜತೆಗೆ ದೇಶವ್ಯಾಪಿ ಶಾಲಾ ಕಾಲೇಜುಗಳಲ್ಲಿ ಸಂಸ್ಕೃತವನ್ನು ಒಂದು ಭಾಷೆಯನ್ನಾಗಿ ಕಡ್ಡಾಯವಾಗಿ ಕಲಿಸುವ ಹಕ್ಕೊತ್ತಾಯದ ಆಂದೋಲನಕ್ಕೆ ವೇದಿಕೆ ಸಜ್ಜಾಗಲಿ ಎಂದು ಅದಮಾರು ಮಠದ ಕಿರಿಯ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು ಹೇಳಿದ್ದಾರೆ.

ಜನಾಗ್ರಹ ಸಭೆ ಪೂರ್ವಭಾವಿಯಾಗಿ ಶನಿವಾರ ನಡೆದ ಮಾತೃ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ