ಆ್ಯಪ್ನಗರ

ನಾಲ್ವರು ಬಿಜೆಪಿ ಶಾಸಕರಿಗೆ ಜೆಡಿಎಸ್‌ ಗಾಳ

ಬಿಜೆಪಿ ತೊರೆದು ಜೆಡಿಎಸ್‌ ಸೇರುವಂತೆ ತಮಗೆ ಸಿಎಂ ಕುಮಾರಸ್ವಾಮಿ ಅವರು ಆಮಿಷವೊಡ್ಡಿ ಒತ್ತಡ ಹಾಕುತ್ತಿದ್ದಾರೆ ಎಂದು ಬಿಜೆಪಿಯ ನಾಲ್ವರು ಶಾಸಕರು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೂರು ಸಲ್ಲಿಸಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಜೆಪಿ ತಮ್ಮ ಶಾಸಕರ ರಕ್ಷಣೆಗೆ ಮುಂದಾಗಿದೆ.

Vijaya Karnataka 31 Jan 2019, 5:00 am
ಬೆಂಗಳೂರು : ಬಿಜೆಪಿ ತೊರೆದು ಜೆಡಿಎಸ್‌ ಸೇರುವಂತೆ ತಮಗೆ ಸಿಎಂ ಕುಮಾರಸ್ವಾಮಿ ಅವರು ಆಮಿಷವೊಡ್ಡಿ ಒತ್ತಡ ಹಾಕುತ್ತಿದ್ದಾರೆ ಎಂದು ಬಿಜೆಪಿಯ ನಾಲ್ವರು ಶಾಸಕರು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೂರು ಸಲ್ಲಿಸಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಜೆಪಿ ತಮ್ಮ ಶಾಸಕರ ರಕ್ಷಣೆಗೆ ಮುಂದಾಗಿದೆ.
Vijaya Karnataka Web jds aproach bjp mlas
ನಾಲ್ವರು ಬಿಜೆಪಿ ಶಾಸಕರಿಗೆ ಜೆಡಿಎಸ್‌ ಗಾಳ


ಕುಮಾರಸ್ವಾಮಿ ಸಂಪರ್ಕಿಸಿದರೆನ್ನಲಾದ ನಾಲ್ವರು ಬಿಜೆಪಿ ಶಾಸಕರೇ ಈ ವಿಷಯವನ್ನು ಬಿಎಸ್‌ವೈಗೆ ತಿಳಿಸಿದ್ದು, ಜೆಡಿಎಸ್‌ನವರು ಯಾವುದೇ ಆಮಿಷವೊಡ್ಡಿದರೂ ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ. ನಿಮ್ಮ ನಾಯಕತ್ವದಲ್ಲಿ ಚುನಾವಣೆ ಗೆದ್ದು ಬಂದಿದ್ದೇವೆ, ನಿಮ್ಮ ನಾಯಕತ್ವದಲ್ಲೇ ಮುಂದುವರಿಯುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ. ಆದರೂ ಈ ಶಾಸಕರ ಚಲನವಲನಗಳ ಬಗ್ಗೆ ನಿಗಾವಹಿಸುವಂತೆ ಬಿಜೆಪಿಯ ಇಬ್ಬರು ಹಿರಿಯ ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ.

ಜೆಡಿಎಸ್‌ ಇಲ್ಲವೇ ಕಾಂಗ್ರೆಸ್‌ನವರು ಸಂಪರ್ಕಿಸಿದರೆ ತಕ್ಷಣವೇ ಆ ಮಾಹಿತಿಯನ್ನು ತಮಗೆ ನೀಡಬೇಕೆಂದು ಪಕ್ಷದ ಎಲ್ಲಾ ಶಾಸಕರಿಗೂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಮಧ್ಯೆ ಬೆಂಗಳೂರಿನ ಯಡಿಯೂರಪ್ಪ ನಿವಾಸದಲ್ಲಿ ಸಭೆ ನಡೆಸಿದ ಮಾಜಿ ಸಚಿವರಾದ ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಮತ್ತಿತರರು ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚಿಸಿದ್ದಾರೆ. 'ರಿವರ್ಸ್‌ ಆಪರೇಷನ್‌' ಆಗದಂತೆ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ