ಆ್ಯಪ್ನಗರ

ರಾಜ್ಯಸಭೆ ಚುನಾವಣೆ: ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ ಎಚ್‌.ಡಿ ದೇವೇಗೌಡ

ರಾಜ್ಯಸಭೆ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಮಂಗಳವಾರ ನಾಮಪತ್ರ ಸಲ್ಲಿಸಿದರು. ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು.

Vijaya Karnataka Web 9 Jun 2020, 1:43 pm
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್‌.ಡಿ ದೇವೆಗೌಡರು ಮಂಗಳವಾರ ಮಧ್ಯಾಹ್ಮ ನಾಮಪತ್ರ ಸಲ್ಲಿಸಿದರು. ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಗಳಾದ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.
Vijaya Karnataka Web jds


ಮಂಗಳವಾರ ಮಧ್ಯಾಹ್ಮ 1.15 ಕ್ಕೆ ದೇವೇಗೌಡರು ನಾಮಪತ್ರವನ್ನು ಸಲ್ಲಿಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ, ಪಕ್ಷದ ಅಧ್ಯಕ್ಷ ಕುಮಾರಸ್ವಾಮಿ, ಎಚ್‌ಡಿ. ರೇವಣ್ಣ, ಬಂಡ್ಯಪ್ಪ ಖಾಶಂಪೂರ್ ಅವರು ಉಪಸ್ಥಿತರಿದ್ದರು.

ರಾಜ್ಯಸಭಾ ಚುನಾವಣೆ: ಬಿ-ಫಾರಂ ಪಡೆದುಕೊಂಡ ಬಿಜೆಪಿಯ ಈರಣ್ಣ ಕಡಾಡಿ, ಅಶೋಕ್‌ ಗಸ್ತಿ

ಜೂನ್ 19 ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರವನನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹೆಚ್ಚುವರಿ ಮತಗಳನ್ನು ಜೆಡಿಎಸ್‌ ಅಭ್ಯರ್ಥಿ ಎಚ್‌ಡಿ ದೇವೇಗೌಡರಿಗೆ ನೀಡುವ ಕುರಿತಾಗಿ ಹೈಕಮಾಂಡ್‌ ಮಟ್ಟದಲ್ಲಿ ನಿರ್ಧರಿಸಲಾಗಿದೆ.

ರಾಜ್ಯಸಭೆ ಚುನಾವಣೆಗೆ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್‌, ಬಿಎಸ್‌ವೈ ಪ್ರತಿಕ್ರಿಯೆ ಏನು?

ಈ ನಿಟ್ಟಿನಲ್ಲಿ ದೇವೇಗೌಡರ ರಾಜ್ಯಸಭೆ ಪ್ರವೇಶದ ಹಾದಿ ಸುಗಮವಾಗಿದೆ. ಆರಂಭದಲ್ಲಿ ಸ್ಪರ್ಧೆಗೆ ದೇವೇಗೌಡರು ಹಿಂದೇಟು ಹಾಕಿದ್ದರು. ಆದರೆ ಜೆಡಿಎಸ್‌ ಶಾಸಕಾಂಗ ಸಭೆಯಲ್ಲಿ ದೇವೇಗೌಡರ ಆಯ್ಕೆಗೆ ಶಾಸಕರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಬಳಿಕ ಸ್ಪರ್ಧೆಗೆ ಒಪ್ಪಿಗೆಯನ್ನು ಸೂಚಿಸಿದರು ಎಂದು ಮಾಜಿ ಸಿಎಂ ಎಚ್‌ಡಿಕೆ ಸೋಮವಾರ ಟ್ವೀಟ್ ಮಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ