ಆ್ಯಪ್ನಗರ

ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ: ಲಿಂಗಾಯತರಿಗೆ ಡಿಸಿಎಂ ಪಟ್ಟಕ್ಕೆ ಪಟ್ಟು

ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ರಚನೆಗೆ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಲಿಂಗಾಯತ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಹುದ್ದೆ ಕೊಡಬೇಕೆಂಬ ಕೂಗು ಬಲವಾಗಿ ಕೇಳಿ ಬರುತ್ತಿದೆ.

Vijaya Karnataka 20 May 2018, 9:13 am
ಬೆಂಗಳೂರು: ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ರಚನೆಗೆ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಲಿಂಗಾಯತ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಹುದ್ದೆ ಕೊಡಬೇಕೆಂಬ ಕೂಗು ಬಲವಾಗಿ ಕೇಳಿ ಬರುತ್ತಿದೆ.
Vijaya Karnataka Web basavanna


ಕಾಂಗ್ರೆಸ್‌ನಿಂದ 17 ಮಂದಿ ವೀರಶೈವ-ಲಿಂಗಾಯತ, ಒಕ್ಕಲಿಗರು ಹಾಗೂ ಒಬಿಸಿಯಿಂದ ತಲಾ 14 ಮಂದಿ, ಪರಿಶಿಷ್ಟ ಜಾತಿಯಿಂದ 12, ಪರಿಶಿಷ್ಟ ಪಂಗಡದಿಂದ 9 ಮಂದಿ ಆಯ್ಕೆಯಾಗಿದ್ದಾರೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾದ ಈ ಸಮುದಾಯಕ್ಕೆ ಸಮ್ಮಿಶ್ರ ಸರಕಾರದ ಕಾಂಗ್ರೆಸ್‌ ಕೋಟಾದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಈಗಾಗಲೇ ಕೆಲವರು ಕಾಂಗ್ರೆಸ್‌ ವರಿಷ್ಠರ ಮೇಲೆ ಒತ್ತಡ ಹಾಕತೊಡಗಿದ್ದಾರೆ.

ಕಾಂಗ್ರೆಸ್‌ ಪಕ್ಷಕ್ಕೆ ಅಂಟಿರುವ ಲಿಂಗಾಯತ ವಿರೋಧಿ ಹಣೆಪಟ್ಟೆ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮದ ಶಿಫಾರಸ್ಸಿನ ಬಗ್ಗೆ ಸಮುದಾಯದಲ್ಲಿ ಉಂಟಾಗಿರುವ ಅಸಮಾಧಾನ ನಿವಾರಿಸಲು ಡಿಸಿಎಂ ಹುದ್ದೆ ನೀಡಿದರೆ ಲಿಂಗಾಯತರು ತಮ್ಮ ಬೆಂಬಲವನ್ನು ಕಾಂಗ್ರೆಸ್‌ಗೆ ಮುಂದುವರಿಸುತ್ತಾರೆ ಎಂಬ ಲೆಕ್ಕಾಚಾರ ನಡೆದಿದೆ. ವೀರಶೈವ ಮಹಾಸಭಾದ ಅಧ್ಯಕ್ಷರು, ಸಮಾಜದ ಹಿರಿಯರು ಹಾಗೂ ಶಾಸಕರೂ ಆಗಿರುವ ಶಾಮನೂರು ಶಿವಶಂಕರಪ್ಪ ಅವರನ್ನು ಡಿಸಿಎಂ ಆಗಿ ನೇಮಿಸಬೇಕೆಂದು ಸಮಾಜದ ಮುಖಂಡರು ಕಾಂಗ್ರೆಸ್‌ ನಾಯಕರ ಮೇಲೆ ಒತ್ತಡ ಹಾಕುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ