ಆ್ಯಪ್ನಗರ

ದೋಸ್ತಿಗಳಿಗೇ ಹೆಚ್ಚು ಮತ ಸಿದ್ದು ಸಮರ್ಥನೆ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ಗೇ ಹೆಚ್ಚು ಮತ ಬಂದಿದೆ ಹಾಗಾಗಿ ಸಮ್ಮಿಶ್ರ ಸರಕಾರ ರಚಿಸಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ...

Vijaya Karnataka Web 10 Jul 2019, 5:00 am
ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ಗೇ ಹೆಚ್ಚು ಮತ ಬಂದಿದೆ. ಹಾಗಾಗಿ ಸಮ್ಮಿಶ್ರ ಸರಕಾರ ರಚಿಸಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
Vijaya Karnataka Web 0907-2-2-0230 (10)


ಸಿಎಲ್‌ಪಿ ಸಭೆ ಬಳಿಕ ಮಾತನಾಡಿದ ಅವರು, ''ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶೇ.37, ಕಾಂಗ್ರೆಸ್‌ಗೆ ಶೇ.38 ಹಾಗೂ ಜೆಡಿಎಸ್‌ಗೆ ಶೇ.18ರಷ್ಟು ಮತ ಬಂದಿದೆ. ಕಾಂಗ್ರೆಸ್‌-ಜೆಡಿಎಸ್‌ ಸೇರಿದರೆ ಬಿಜೆಪಿಗಿಂತಲೂ ಹೆಚ್ಚು ಮತ ಬಂದಂತಾಗಿದೆ. ಬಿಜೆಪಿ ಹೆಚ್ಚು ಸ್ಥಾನ ಗಳಿಸಿದ್ದರಿಂದ ರಾಜ್ಯಪಾಲರ ಆಹ್ವಾನದ ಮೇರೆಗೆ ಸರಕಾರ ರಚಿಸಿ 3 ದಿನ ಸಿಎಂ ಆಗಿದ್ದ ಯಡಿಯೂರಪ್ಪ ಅವರಿಗೆ ವಿಶ್ವಾಸಮತ ಸಾಬೀತು ಪಡಿಸಲು ಆಗಲಿಲ್ಲ. ಬಳಿಕ ನಾವು ಸಂವಿಧಾನಬದ್ಧವಾಗಿ ಸಮ್ಮಿಶ್ರ ಸರಕಾರ ರಚಿಸಿದ್ದೇವೆ,'' ಎಂದರು.

''ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಅಸ್ಥಿರಗೊಳಿಸುವ ಕೆಲಸಕ್ಕೆ ಬಿಜೆಪಿ ಕೈಹಾಕಿದೆ. ಈ ಬಾರಿ ಬಿಜೆಪಿಯ ಕೇಂದ್ರ ನಾಯಕರ ನಿರ್ದೇಶನದಂತೆ ಸರಕಾರ ಅಭದ್ರಗೊಳಿಸುವ ಕಾರ್ಯ ನಡೆಯುತ್ತಿದ್ದು ಇದರಲ್ಲಿ ನರೇಂದ್ರ ಮೋದಿ, ಅಮಿತ್‌ ಶಾ ಅವರ ನೇರ ಪಾತ್ರವಿದೆ. ಶಾಸಕರಿಗೆ ಸ್ಥಾನಮಾನ, ಹಣದ ಆಮಿಷವೊಡ್ಡಲಾಗುತ್ತಿದೆ. ಇದೆಲ್ಲವೂ ಸಂವಿಧಾನ ವಿರೋಧಿ. ಇಷ್ಟೆಲ್ಲ ದುಡ್ಡು ಎಲ್ಲಿಂದ ಬರುತ್ತದೆ. ಅದು ಇಲ್ಲೀಗಲ್‌ ಅಲ್ಲವಾ?,'' ಎಂದು ವಾಗ್ದಾಳಿ ನಡೆಸಿದರು.

ಸಂಪುಟವಿದೆ!
ಡಿಸಿಎಂ ಸೇರಿ ಎಲ್ಲ ಸಚಿವರ ರಾಜೀನಾಮೆ ತೆಗೆದುಕೊಳ್ಳಲಾಗಿದ್ದರೂ ಇನ್ನೂ ಅಂಗೀಕಾರವಾಗಿಲ್ಲ. ಕಾಂಗ್ರೆಸ್‌ ಸಚಿವರ ರಾಜೀನಾಮೆ ನಮ್ಮ ಅಧ್ಯಕ್ಷರ ಬಳಿಯಿದೆ. ಹಾಗಾಗಿ ಸಂಪುಟವಿನ್ನೂ ಅಸ್ತಿತ್ವದಲ್ಲಿದೆ. ಸಂಪುಟ ಸಭೆಯನ್ನೂ ನಡೆಸಬಹುದು. ಮಂತ್ರಿಮಂಡಲವೇ ಇಲ್ಲದ ಸರಕಾರವೆಂಬ ವ್ಯಾಖ್ಯಾನ ಸರಿಯಲ್ಲವೆಂದು ಸಿದ್ದರಾಮಯ್ಯ ಸ್ಪಷ್ಟ ಪಡಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ