ಆ್ಯಪ್ನಗರ

ಅನರ್ಹರ ಕ್ಷೇತ್ರಗಳಿಗೆ ಚುನಾವಣೆಗೆ ಜೆಡಿಎಸ್‌ ಆಗ್ರಹ

ಅನರ್ಹ ಶಾಸಕರು ಪ್ರತಿನಿಧಿಸುತ್ತಿದ್ದ 17 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡುವಂತೆ ಜೆಡಿಎಸ್‌ ಆಗ್ರಹಿಸಿದೆ...

Vijaya Karnataka 31 Aug 2019, 5:00 am
ಬೆಂಗಳೂರು: ಅನರ್ಹ ಶಾಸಕರು ಪ್ರತಿನಿಧಿಸುತ್ತಿದ್ದ 17 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡುವಂತೆ ಜೆಡಿಎಸ್‌ ಆಗ್ರಹಿಸಿದೆ.
Vijaya Karnataka Web jds symbol


ಈ ಸಂಬಂಧ ಜೆಡಿಎಸ್‌ ಮುಖಂಡ ಟಿ.ಆರ್‌.ಪ್ರಸಾದ್‌ಗೌಡ ಅವರು ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

''ಕಾಂಗ್ರೆಸ್‌ ಪಕ್ಷದ 14 ಹಾಗೂ ಜೆಡಿಎಸ್‌ನ 3 ಶಾಸಕರನ್ನು ಅನರ್ಹಗೊಳಿಸಿ ವಿಧಾನಸಭಾಧ್ಯಕ್ಷರು ಆದೇಶ ಹೊರಡಿಸಿದ್ದು, ಹಲವು ದಿನಗಳಿಂದ ಈ 17 ವಿಧಾನಸಭಾ ಕ್ಷೇತ್ರಗಳು ಖಾಲಿ ಉಳಿದಿವೆ. ಸ್ಪೀಕರ್‌ ಆದೇಶ ಪ್ರಶ್ನಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್‌ ಈವರೆಗೆ ವಿಚಾರಣೆಗೆ ಕೈಗೆತ್ತಿಕೊಂಡಿಲ್ಲ. ಹೀಗಾಗಿ ಚುನಾವಣೆ ಘೋಷಿಸಬೇಕು,'' ಎಂದು ಅವರು ಮನವಿ ಮಾಡಿದ್ದಾರೆ.

ಮತ್ತೊಂದೆಡೆ, ಕೆಲವು ಅನರ್ಹ ಶಾಸಕರು ಆಯೋಗಕ್ಕೆ ಈಗಾಗಲೇ ಕೋರಿಕೆ ಸಲ್ಲಿಸಿ, ಸ್ಪೀಕರ್‌ ಆದೇಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದೇವೆ. ಕೋರ್ಟ್‌ನಲ್ಲಿ ಇತ್ಯರ್ಥವಾಗುವ ವರೆಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ