ಆ್ಯಪ್ನಗರ

ಜೆಡಿಎಸ್‌ನ ಕೃಷ್ಣಾರೆಡ್ಡಿ ಡೆಪ್ಯುಟಿ ಸ್ಪೀಕರ್‌ ?

ವಿಧಾನಸಭೆ ಉಪಸಭಾಧ್ಯಕ್ಷರಾಗಿ ಚಿಂತಾಮಣಿ ಕ್ಷೇತ್ರದ ಜೆಡಿಎಸ್‌ ಶಾಸಕ ಕೃಷ್ಣಾರೆಡ್ಡಿ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ.

Vijaya Karnataka 6 Jul 2018, 12:31 pm
ಬೆಂಗಳೂರು: ವಿಧಾನಸಭೆ ಉಪಸಭಾಧ್ಯಕ್ಷರಾಗಿ ಚಿಂತಾಮಣಿ ಕ್ಷೇತ್ರದ ಜೆಡಿಎಸ್‌ ಶಾಸಕ ಕೃಷ್ಣಾರೆಡ್ಡಿ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ.
Vijaya Karnataka Web krishnareddy jds


ಶುಕ್ರವಾರ ನಿಗದಿಯಾಗಿರುವ ಡೆಪ್ಯುಟಿ ಸ್ಪೀಕರ್‌ ಸ್ಥಾನಕ್ಕೆ ಕೃಷ್ಣಾರೆಡ್ಡಿ ಗುರುವಾರ ನಾಮಪತ್ರ ಸಲ್ಲಿಸಿದರು. ಸ್ಪೀಕರ್‌ ಆಗಿ ಕಾಂಗ್ರೆಸ್‌ನ ಕೆ.ಆರ್‌.ರಮೇಶ್‌ಕುಮಾರ್‌ ಆಯ್ಕೆಯಾಗಿದ್ದು, ಉಪಸಭಾಧ್ಯಕ್ಷ ಸ್ಥಾನ ಜೆಡಿಎಸ್‌ಗೆ ದೊರಕಿದೆ.

ಜೆಡಿಎಸ್‌ -ಕಾಂಗ್ರೆಸ್‌ ಮೈತ್ರಿಕೂಟದಿಂದ ಕೃಷ್ಣಾರೆಡ್ಡಿ ಸ್ಪರ್ಧಿಸಿದ್ದು, ಪ್ರತಿಪಕ್ಷ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಸದ ಕಾರಣ ಅವಿರೋಧ ಆಯ್ಕೆ ಸ್ಪಷ್ಟವಾಗಿದೆ. ಇದರೊಂದಿಗೆ, ಸ್ಪೀಕರ್‌ ಮತ್ತು ಡೆಪ್ಯುಟಿ ಸ್ಪೀಕರ್‌ ಎರಡೂ ಹುದ್ದೆಗಳು ಕೋಲಾರ ಜಿಲ್ಲೆಗೆ ದೊರೆತಂತಾಗಲಿದೆ.

ಉಪಸಭಾಧ್ಯಕ್ಷ ಸ್ಥಾನಕ್ಕೆ ಎ.ಟಿ.ರಾಮಸ್ವಾಮಿ, ಎಚ್‌.ವಿಶ್ವನಾಥ್‌ ಹಾಗೂ ಎಚ್‌.ಕೆ.ಕುಮಾರಸ್ವಾಮಿ ಅವರಿಗೆ ಅವಕಾಶವಿತ್ತು. ಆದರೆ, ಈ ಮೂವರೂ ಹಿರಿಯ ಶಾಸಕರು ಹುದ್ದೆ ಒಪ್ಪದ ಕಾರಣ ಕೃಷ್ಣಾರೆಡ್ಡಿ ಹಾದಿ ಸುಸೂತ್ರವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ