ಆ್ಯಪ್ನಗರ

ಅತ್ತ ದೋಸ್ತಿ ಸಂಕಟ, ಇತ್ತ ಜೆಡಿಎಸ್‌ ನಾಯಕರ ಬಾಡೂಟ

ಅತೃಪ್ತರ ಶಾಸಕರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಂಕಷ್ಟದಲ್ಲಿರುವ ಮೈತ್ರಿ ಸರಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ...

Vijaya Karnataka 11 Jul 2019, 5:00 am
ಬೆಂಗಳೂರು ಗ್ರಾಮಾಂತರ: ಅತೃಪ್ತರ ಶಾಸಕರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಂಕಷ್ಟದಲ್ಲಿರುವ ಮೈತ್ರಿ ಸರಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಹಗಲಿರುಳು ನಾನಾ ಸರ್ಕಸ್‌ ಮಾಡುತ್ತಿದ್ದಾರೆ. ಮತ್ತೊಂದೆಡೆ ಸರಕಾರಕ್ಕೂ ತಮಗೂ ಸಂಬಂಧವೇ ಇಲ್ಲವೆಂಬಂತೆ ಜೆಡಿಎಸ್‌ ಶಾಸಕರು ಬಾಡೂಟ ಸವಿದು ಸಂಭ್ರಮಿಸುತ್ತಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Vijaya Karnataka Web baduta


ದೇವನಹಳ್ಳಿ ಸಮೀಪದ ಪ್ರೆಸ್ಟೀಜ್‌ ಗಾಲ್ಫ್‌ ಶೇರ್‌ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ 23 ಜೆಡಿಎಸ್‌ ಶಾಸಕರ ಪೈಕಿ ಕೆಲವರು ಬುಧವಾರ ತಾಲೂಕಿನ ಕೋಡಗುರ್ಕಿಯ ಮಾರಮ್ಮ ದೇವಿ ಜಾತ್ರೆಯಲ್ಲಿ ಭಾಗವಹಿಸಿ ಬಾಡೂಟದ ಬ್ಯಾಟಿಂಗ್‌ನಲ್ಲಿ ತೊಡಗಿದ್ದರು. ದೇವನಹಳ್ಳಿ ತಾಲೂಕಿನ ಕೋಡಗುರ್ಕಿಯಲ್ಲಿ 15 ವರ್ಷದ ಬಳಿಕ ನಡೆದ ಮಾರಮ್ಮ ಜಾತ್ರೆಯಲ್ಲಿ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ, ಸಚಿವ ಬಂಡೆಪ್ಪ ಕಾಶೆಂಪೂರ್‌, ನೆಲಮಂಗಲ ಶಾಸಕ ಡಾ.ಶ್ರೀನಿವಾಸಮೂರ್ತಿ, ಮಾಗಡಿ ಶಾಸಕ ಮಂಜು ಅವರು ಗ್ರಾಮದೇವತೆಗೆ ಪೂಜೆ ಸಲ್ಲಿಸಿ ಬಳಿಕ ಸ್ಥಳೀಯ ಜೆಡಿಎಸ್‌ ನಾಯಕರೊಂದಿಗೆ ಬಾಡೂಟ ಸವಿದು ಸಂಭ್ರಮಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ