ಆ್ಯಪ್ನಗರ

ಅಖಂಡ ಶ್ರೀನಿವಾಸ್ ಮನೆ ಮೇಲಿನ ದಾಳಿ ಪ್ರಕರಣ ದುರದೃಷ್ಟಕರ, ಎಚ್‌ಡಿ ದೇವೇಗೌಡ

ಅಖಂಡ ಶ್ರೀನಿವಾಸ್ ಮನೆ ಮೇಲಿನ ದಾಳಿ ಪ್ರಕರಣ ದುರದೃಷ್ಟಕರ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 13 Aug 2020, 3:21 pm
ಬೆಂಗಳೂರು: ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಯ ಮೇಲೆ ಕಿಡಿಗೇಡಿಗಳು ನಡೆಸಿದ ದಾಳಿ ಪ್ರಕರಣ ದುರದೃಷ್ಟಕರ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.
Vijaya Karnataka Web hd devegwoda


ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಯಾವ ಭಾಗದಲ್ಲೂ ಇಂಥ ಪ್ರಕರಣ ನಡೆಯಬಾರದು, ದೊಂಬಿ ಗಲಾಟೆ ಘಟನೆ ಸಂಬಂಧ 150 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಇವರಲ್ಲಿ ನಿಜವಾದ ಅಪರಾಧಿಗಳು ಎಷ್ಟು? ಇವರಲ್ಲಿ ಎಲ್ಲರೂ ಅಪರಾಧಿಗಳು ಇರಲಿಕ್ಕೆ ಸಾಧ್ಯವಿಲ್ಲ ಅದರಿಂದ ತಪ್ಪಿತಸ್ಥರನ್ನು ಮಾತ್ರ ಘಟನೆಗೆ ಹೊಣೆಗಾರರನ್ನಾಗಿ ಮಾಡಿ ಅಂತವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ನಿರಪರಾಧಿಗಳಿಗೆ ಶಿಕ್ಷೆ ಆಗುವುದು ಬೇಡ ಎಂದು ಮನವಿ ಮಾಡಿದರು.

ಡಿಜೆ ಹಳ್ಳಿ ಗಲಭೆ: ನವೀನ್ ಕಾಂಗ್ರೆಸ್ ಕಾರ್ಯಕರ್ತ, ಡಿಕೆಶಿಗೆ ಅಶ್ವತ್ಥನಾರಾಯಣ ತಿರುಗೇಟು

ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಅಂತ ಶಾಸಕ ಅಖಂಡ ಶ್ರೀನಿವಾಸ್ ಹೇಳಿದ್ದಾರೆ. ಈಗಿರೋ ಆಯುಕ್ತರು ಸಿಬಿಐನಲ್ಲಿ ಕೆಲಸ ಮಾಡಿದ್ದಾರೆ, ಹೀಗಾಗಿ ಅವರುತಾರತಮ್ಯ ಮಾಡೊಲ್ಲ ಅನ್ನುವುದು ನನ್ನ ಭಾವನೆ. ಅಂತಿಮ ನಿರ್ಧಾರ ಸರ್ಕಾರವೇ ತೆಗೆದುಕೊಳ್ಳಲಿ. ನಿಜವಾದ ಕಿಡಿಗೇಡಿಗಳ ವಿರುದ್ದ ಸರ್ಕಾರ ಕ್ರಮ ತಗೋಬೇಕು ಎಂದು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದರು.

ಮನೆ ಸುಡುವುದು, ಕಾರು ಸುಡುವುದು, ಮನೆ ದೋಚುವುದು ಎಂದೂ ಈ ರಾಜ್ಯದಲ್ಲಿ ನಡೆದದ್ದು ನಾನು ನೋಡಿಲ್ಲ ಎಂ ಎಲ್ ಎ ಮನೆಯನ್ನು ಹೀಗೆ ಸುಟ್ಟಿರುವುದು ಇದೇ ಮೊದಲ ಬಾರಿ. ಅಖಂಡ ಶ್ರೀನಿವಾಸ ಅವರಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಸಿಗಬೇಕು ಆಗಿರುವ ಆಸ್ತಿ ಪಾಸ್ತಿ ನಷ್ಟವನ್ನು ಸರಕಾರ ತನಿಖೆ ನಡೆಸಬೇಕು. ಅಖಂಡ ಶ್ರೀನಿವಾಸ್ ಅವರಿಗೆ ಧೈರ್ಯ ತುಂಬುವ ಕೆಲಸಕ್ಕೆ ಸರಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಶಾಸಕರು ಕಣ್ಣೀರು ಹಾಕಿರೋದು ಟಿವಿಯಲ್ಲಿ ನೋಡಿದ್ದೇನೆ. ಹೆಂಡತಿ‌ ಮಕ್ಕಳ ನೋವನ್ನೂ ನೋಡಿದ್ದೇನೆ. ಅವ್ರಿಗೆ ಆಗಿರೋ ಅನ್ಯಾಯ ಸರಿ ಪಡಿಸಲು, ಪರಿಹಾರ ಕೊಡಲು ಸರ್ಕಾರ ಎಲ್ಲಾ ಕ್ರಮ ತಗೋಬೇಕು. ಅಖಂಡ ಅವರು ಯಾರಿಗೂ ಅನ್ಯಾಯ ಮಾಡಿಲ್ಲ. ನಮ್ಮ ಪಕ್ಷದಲ್ಲಿ ಇದ್ದರು ಅನ್ನೋದ ಬೇರೆ ವಿಷಯ.ಆದ್ರೆ ಯಾರಿಗೂ ಅವ್ರು ಅನ್ಯಾಯ ಮಾಡಿಲ್ಲ ಎಂದರು.

ಭೂ ಸುಧಾಕರಣೆ ಕಾಯ್ದೆ,ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ; ರಾಜ್ಯಾದ್ಯಂತ ಪ್ರತಿಭಟನೆಗೆ ಜೆಡಿಎಸ್‌ ನಿರ್ಧಾರ

ಗಲಾಟೆ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ರಾಜಕೀಯ ಚೆಲ್ಲಾಟ ಬೇಡ. ಯಾರೂ ಮನಸ್ಸಿಗೆ ಬಂದ ಹಾಗೆ ಮಾತನಾಡುವುದು ಸರಿಯಲ್ಲ. ಬಿಜೆಪಿ ಸಚಿವರ ಮಾತುಗಳನ್ನೂ ಕೇಳಿದ್ದೇನೆ, ಕಾಂಗ್ರೆಸ್ ಅಧ್ಯಕ್ಷರು ಮತ್ತು ಸಿ ಎಲ್ ಪಿ ನಾಯಕರ ಮಾತುಗಳನ್ನು ಗಮನಿಸಿದ್ದೇನೆ. ಅಧಿಕಾರಿಗಳು ತಮ್ಮ ಜವಾಬ್ದಾರಿ ನಿರ್ವಹಣೆ ಮಾಡುವಾಗ ರಾಜಕೀಯ ಪಕ್ಷಗಳು ಮಧ್ಯ ಪ್ರವೇಶ ಮಾಡಬಾರದು. ಬಿಜೆಪಿ ಸರಕಾರವೇ ರಾಜ್ಯದಲ್ಲಿ ಅಧಿಕಾರದಲ್ಲಿ ಇದೆ. ಘಟನೆ ಕುರಿತು ಈಗಾಗಲೇ ಸಿಎಂ ಮಾತನಾಡಿದ್ದಾರೆ. ಇದಾದ ಮೇಲೂ ಕೆಲವು ಸಚಿವರು ಮಾತನಾಡುತ್ತಿದ್ದಾರೆ. ಹೀಗಾದರೆ ಸಿಎಂ ಮಾತಿಗೆ ಅರ್ಥವೇ ಇರುವುದಿಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ