ಆ್ಯಪ್ನಗರ

ಲಾಕ್‌ಡೌನ್ ಎಫೆಕ್ಟ್‌: ಕೈಗಾರಿಕೋದ್ಯಮಿಗಳ ನಿಯೋಗದ ಜೊತೆ ಎಚ್‌ಡಿಕೆ ಚರ್ಚೆ

ಕೊರೊನಾ ಲಾಕ್‌ಡೌನ್ ಪರಿಣಾಮ ಸಣ್ಣ ಕೈಗಾರಿಕೆಗಳು ಸಂಕಷ್ಟದಲ್ಲಿದ್ದು ಅವರಿಗೆ ಸರ್ಕಾರ ಸ್ಪಂದಿಸುವಂತೆ ಒತ್ತಡ ಹೇರಬೇಕು ಎಂದು ಕೈಗಾರಿಕೋದ್ಯಮಿಗಳ ನಿಯೋಗ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

Vijaya Karnataka Web 15 May 2020, 3:54 pm
ಬೆಂಗಳೂರು: ಕೊರೊನಾ ಲಾಕ್‌ಡೌನ್ ಪರಿಣಾಮ ರಾಜ್ಯದ ಸಣ್ಣ ಕೈಗಾರಿಕೆಗಳ ಅತಂತ್ರ ಪರಿಸ್ಥಿತಿಯಲ್ಲಿದ್ದು ಸರ್ಕಾರವನ್ನು ಕೂಡಲೇ ಸ್ಪಂದಿಸುವಂತೆ ಒತ್ತಾಯಿಸಬೇಕೆಂದು ಕೈಗಾರಿಕೆಗಳ ಒಕ್ಕೂಟ ಸಂಘಟನೆಗಳ ಪ್ರಮುಖರು ಶುಕ್ರವಾರ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
Vijaya Karnataka Web hdk meeting


ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕಳೆದ ಎರಡು ತಿಂಗಳಿಂದ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದಾಗಿ ಕೈಗಾರಿಕಾ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದೆ. ಅದರಲ್ಲೂ ಸಣ್ಣ ಕೈಗಾರಿಕೆಗಳು ಭಾರೀ ನಷ್ಟದಲ್ಲಿವೆ. ಲಾಕ್‌ಡೌನ್ ಸಡಿಲಗೊಂಡರೂ ಕಾರ್ಮಿಕರ ಕೊರತೆ ಹಾಗೂ ಇನ್ನಿತರ ಸಮಸ್ಯೆಗಳಿಂದ ಕೈಗಾರಿಕಾ ವಲಯ ಸಂಕಷ್ಟದಲ್ಲಿದೆ.

ಹೊಸದಾಗಿ 45 ಜನರಿಗೆ ಕೊರೊನಾ, ರಾಜ್ಯದಲ್ಲೀಗ 'ಸಹಸ್ರ' ಸೋಂಕಿತರು!

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಣ್ಣ ಕೈಗಾರಿಕೆಗಳ ನೆರವಿಗೆ ಬರುವಂತೆ ಒತ್ತಡ ಹೇರಬೇಕು ಎಂದು ಕೈಗಾರಿಕೋದ್ಯಮಿಗಳು ಎಚ್‌ಡಿಕೆಗೆ ಮನವಿ ಸಲ್ಲಿಸಿದರು. ತಮ್ಮನ್ನು ಭೇಟಿಯಾದ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಒಕ್ಕೂಟ, ಪೀಣ್ಯ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು ಮತ್ತು ವಿವಿಧ ಕೈಗಾರಿಕಾ ಸಂಘಟನೆಗಳ ಪ್ರಮುಖರು ಜೊತೆಗೆ ಕುಮಾರಸ್ವಾಮಿ ಕೆಲ ಹೊತ್ತು ಸಮಾಲೋಚನೆಯನ್ನು ನಡೆಸಿ ಮಾಹಿತಿಯನ್ನು ಪಡೆದುಕೊಂಡರು.

ಕೈಗಾರಿಕ ಸಂಘಟನೆಗಳ ಪ್ರಮುಖರಾದ ಆರ್ ರಾಜು, ಹನುಮಂತೇಗೌಡ, ರಾಜಗೋಪಾಲ್, ಬೋರೇಗೌಡ, ಕೆಎನ್ ನರಸಿಂಹಮೂರ್ತಿ, ಶ್ರೀನಿವಾಸ್ ಹಾಗೂ ಮಲ್ಲೇಶಗೌಡ ಸೇರಿದಂತೆ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿದ್ದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ