ಆ್ಯಪ್ನಗರ

ಬಿಜೆಪಿಗೆ ಸೇರ್ಪಡೆಗೊಳ್ಳಿ! ಸಿ.ಪಿ ಯೋಗೇಶ್ವರ್‌ ಆಹ್ವಾನಕ್ಕೆ ಎಚ್‌ಡಿಕೆ ಕೊಟ್ಟ ಪ್ರತಿಕ್ರಿಯೆ ಏನು?

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಿ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್‌ ನೀಡಿದ ಆಹ್ವಾನಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಅವರು ಏನಂದರು ಎಂಬ ಕುರಿತಾಗಿ ಇಲ್ಲಿದೆ ಮಾಹಿತಿ.

Vijaya Karnataka Web 30 Jul 2020, 3:41 pm
ಬೆಂಗಳೂರು: ಸರ್ಕಾರಕ್ಕೆ ಪರೋಕ್ಷವಾಗಿ ಸಹಕಾರ ನೀಡುವ ಬದಲಾಗಿ ನೇರವಾಗಿ ಪಕ್ಷಕ್ಕೆ ಸೇರ್ಪಡೆಗೊಳ್ಳಿ ಎಂಬ ಅರ್ಥದಲ್ಲಿ ನೂತನ ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್‌ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿಗೆ ಬಿಜೆಪಿ ಸೇರ್ಪಡೆಗೊಳ್ಳುವಂತೆ ಆಹ್ವಾನ ನೀಡಿದ್ದಾರೆ.
Vijaya Karnataka Web hd kumaraswamy


ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆಯಲ್ಲಿ ನೆಲೆ ಕಳೆದುಕೊಳ್ಳುವ ಆತಂಕ ಕುಮಾರಸ್ವಾಮಿಗೆ ಎದುರಾಗಿದೆ. ಜಿಲ್ಲೆಯಲ್ಲಿ ಡಿಕೆಶಿ ಸಹೋದರರ ಹಾವಳಿ ಹೆಚ್ಚಾಗಿದೆ. ಪರಿಣಾಮ ಎಚ್‌ಡಿ ಕುಮಾರಸ್ವಾಮಿಯವರು ಬಿಜೆಪಿಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂದಿದ್ದರು.

'ರಾಜಾಹುಲಿ ಬಿಎಸ್‌ವೈ ಸರ್ಕಾರ ಅನೈತಿಕ ಕೂಸು ಇದ್ದಂತೆ' ಸಿದ್ದು ಗುದ್ದು

ಅಲ್ಲದೆ ನಮ್ಮ ಪಕ್ಷದಿಂದಲೂ ಹಲವು ಪ್ರಯೋಜನಗಳು ಅವರಿಗೆ ಆಗಿದೆ. ಕುಮಾರಸ್ವಾಮಿಗೆ ಅವರಿಗೆ ನಮ್ಮ ಪಕ್ಷದಿಂದಲೂ ಸಹಕಾರ ಲಭಿಸುತ್ತಿದೆ. ರಾಮನಗರ ಜಿಲ್ಲೆಯಲ್ಲಿ ಅವರು ಹೇಳಿದಂತೆ ವರ್ಗಾವಣೆ ಹಾಗೂ ನಾಮ ನಿರ್ದೇಶನಗಳು ನಡೆಯುತ್ತಿದೆ ಎಂದೂ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಚ್‌ಡಿಕೆ, ಸಿ.ಪಿ ಯೋಗೇಶ್ವರ್‌ ಇವಾಗ ಏನೋ ಎಂಎಲ್‌ಸಿ ಆಗಿದ್ದಾರೆ. ಹಾಗಂತ ಆಕಾಶಕ್ಕೆ ಏರಬಾರದು. ರಾಜಕಾರಣದಲ್ಲಿ ತಗ್ಗಿ ಬಗ್ಗಿ ನಡೆಯಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಹೋರಾಟ, ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ; ಸಿದ್ದರಾಮಯ್ಯ

ಕೊರೊನಾ ಸಮಯದಲ್ಲಿ ಜನರು ಸಂಕಷ್ಟದಲ್ಲಿದ್ದಾಗ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡಲ್ಲ. ಇದರ ಪರಿಣಾಮ ಜನರ ಮೇಲಾಗುತ್ತದೆ. ಇದು ಆಗಬಾರದು ಎಂಬ ನಿಟ್ಟಿನಲ್ಲಿ ಸಹಕಾರ ನೀಡುತ್ತಿದ್ದೇನೆ ಹೊರತು ಅನ್ಯ ಉದ್ದೇಶ ಇಲ್ಲ ಎಂದಿದ್ದಾರೆ.

ಸರ್ಕಾರ ಇರೋದು ಎಲ್ಲಾ ಕ್ಷೇತ್ರಗಳ ಶಾಸಕರಿಗಾಗಿ. ನನ್ನ ಕಾಲದಲ್ಲಿ ಮಂಜೂರಾದ ಅನುದಾನವನ್ನು ಕ್ಷೇತ್ರದ ಕಾಮಗಾರಿ ನಡೆಸಲು ಬಿಡುಗಡೆ ಮಾಡಲು ಮನವಿ ಮಾಡಿದ್ದೇನೆ ಇದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡರು. ಸದ್ಯ ಬಿಜೆಪಿಯೊಳಗೆ ನಡೆಯುತ್ತಿರುವುದು ಬೆಳವಣಿಗೆಗಳು ಜನರಿಗೆ ತಪ್ಪು ಸಂದೇಶವನ್ನು ರವಾನೆ ಮಾಡುತ್ತಿವೆ. ಇದರ ಪರಿಣಾಮ ನಾಡಿದ ಜನರ ಮೇಲಾಗುತ್ತದೆ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ