ಆ್ಯಪ್ನಗರ

ರೈತರ ಸಂಕಷ್ಟ ಬಗೆಹರಿಸಿ, ಬಿಎಸ್‌ವೈಗೆ ಎಚ್.ಡಿ ದೇವೇಗೌಡ ಪತ್ರ

ಕೊರೊನಾ ಲಾಕ್‌ಡೌನ್‌ನಿಂದಾಗಿ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಅವರ ರಕ್ಷಣೆಗೆ ಸರ್ಕಾರ ಧಾವಿಸಬೇಕು ಎಂದು ಒತ್ತಾಯಿಸಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದಿದ್ದಾರೆ.

Vijaya Karnataka Web 10 Apr 2020, 1:20 pm
ಬೆಂಗಳೂರು : ಕೊರೊನಾ ಲಾಕ್‌ಡೌನ್‌ ಕಾರಣದಿಂದಾಗಿ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ರೈತರ ಸಹಾಯಕ್ಕೆ ಧಾವಿಸಬೇಕು ಎಂದು ಒತ್ತಾಯಿಸಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಬಿಎಸ್‌ವೈ ಅವರಿಗೆ ಪತ್ರ ಬರೆದಿದ್ದಾರೆ.
Vijaya Karnataka Web hd devegwoda


ಪ್ರತಿವರ್ಷ ತೋಟಗಾರಿಕಾ ಬೆಳೆ ವ್ಯಾಪ್ತಿ ಹೆಚ್ಚಾಗುತ್ತಿದ್ದು,ಲಾಕ್ ಡೌನ್ ಹಿನ್ನೆಲೆಯಲ್ಲಿ ಮಾರುಕಟ್ಟೆ ಸಿಗದೆ ರೈತರ ಬದುಕು ಉರಿಯುವ ಬೆಂಕಿಯಲ್ಲಿ ಬಿದ್ದಂತಾಗಿದೆ. ರೈತರ ಪಾಲಿಗೆ ಲಾಕ್ ಡೌನ್ ಆತುರದ ನಿರ್ಧಾರದಂತೆ ಕಾಣಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಾಣಿ, ಪಕ್ಷಿಗಳಿಗೂ ತಟ್ಟಿವೆ ಲಾಕ್‌ಡೌನ್ ಬಿಸಿ, ಜನ್ರಲ್ಲಿ ಬಿಎಸ್‌ವೈ ಮನವಿ ಏನು ?

ವೈರಾಣು ಕಾಣಿಸಿಕೊಂಡಿದ್ದರೂ ಎರಡು ತಿಂಗಳು‌ ಸುಮ್ಮನಿದ್ದು, ಮುಂದಾಲೋಚನೆ ಇಲ್ಲದೆ ತರಾತುರಿಯಲ್ಲಿ ಲಾಕ್ ಡೌನ್ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ರಾಜ್ಯ ಹಾಗೂ ದೇಶದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.


ಕೊರೊನಾ ನಿಯಂತ್ರಣ: ರಾಜ್ಯದಲ್ಲಿ ‘ಸೀಲ್‌ ಡೌನ್‌ಗೆ’ ನಡೆಯುತ್ತಿದ್ಯಾ ಪ್ಲಾನ್?

ಲಾಕ್ ಡೌನ್ ವೇಳೆ ಗ್ರಾಮ ಮಟ್ಟದಲ್ಲೆ ಹಾಲು ಸಂಗ್ರಹಿಸುವಂತೆ, ತರಕಾರಿಯನ್ನು ಸರ್ಕಾರವೇ ಸಂಗ್ರಹಿಸಿ ಮಾರುಕಟ್ಟೆಗೆ ತರಬೇಕಿತ್ತು. ಹಾಪ್ ಕಾಮ್ಸ್, ಸಫಲ್, ನ್ಯಾಪೆಡ್, ಎಪಿಎಂಸಿ ಮೂಲಕ ತರಕಾರಿ‌ ಕೊಳ್ಳುವ ವ್ಯವಸ್ಥೆ ಮಾಡಬೇಕಿತ್ತು ಎಂದಿರುವ ಎಚ್‌ಡಿಡಿ, ತರಕಾರಿ ಸಂಗ್ರಹಣೆ ಸಾಗಾಟ, ಮಾರಾಟ ನಿರ್ಬಂಧಿಸಬಾರದು ಹಾಗೂ ಸಂಸ್ಕರಣಾ ಘಟಕಗಳಿಗೆ ಪೂರ್ಣ ವಿನಾಯತಿ‌ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ದೇಶದ ಯಾವುದೇ ಪ್ರದೇಶಕ್ಕೆ ಅಡೆತಡೆಗಳಿಲ್ಲದೆ ಸಾಗಾಟಕ್ಕೆ ಮತ್ತು ಮಾರಾಟಕ್ಕೆ ಅನುವು ಮಾಡಿಕೊಡಬೇಕು. ತೋಟಗಾರಿಕೆ ಉತ್ಪನ್ನ ಮತ್ತು ಸಂಸ್ಕರಿಸಿದ ಪದಾರ್ಥಗಳ ರಫ್ತಿಗೆ ನಿರ್ಬಂಧ ಇರಬಾರದು ಹಾಗೂ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರಕೂಡದು ಎಂದಿರುವ ಅವರು, ತರಕಾರಿ ಮಾರುಕಟ್ಟೆಗೆ ನ್ಯಾಷನಲ್ ಗ್ರಿಡ್ ರಚಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಪ್ರಧಾನಿ ಪತ್ರದ ಮೂಲಕ‌ ಸಲಹೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ