ಆ್ಯಪ್ನಗರ

'ಜೆಡಿಎಸ್‌ ಶಾಸಕರು ಫೆಬ್ರವರಿ ಅಂತ್ಯಕ್ಕೆ ಕಾಂಗ್ರೆಸ್‌ಗೆ'

ವಿಕ ಸುದ್ದಿಲೋಕ ಬೆಂಗಳೂರು ವಿಧಾನಮಂಡಲ ಅಧಿವೇಶನದ ಬಳಿಕ ಫೆಬ್ರವರಿ ಕೊನೇ ವಾರದಲ್ಲಿ ಜೆಡಿಎಸ್‌ ಬಂಡಾಯ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಇಂಧನ ಸಚಿವ ಡಿಕೆ...

Vijaya Karnataka Web 10 Jan 2018, 7:31 am

ಬೆಂಗಳೂರು: ವಿಧಾನಮಂಡಲ ಅಧಿವೇಶನದ ಬಳಿಕ ಫೆಬ್ರವರಿ ಕೊನೇ ವಾರದಲ್ಲಿ ಜೆಡಿಎಸ್‌ ಬಂಡಾಯ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ.

ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಪುಲಿಕೇಶಿ ನಗರ ಕ್ಷೇತ್ರದ ಜೆಡಿಎಸ್‌ ಬಂಡಾಯ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್‌ ''ಅಖಂಡ ಶ್ರೀನಿವಾಸಮೂರ್ತಿ ಸೇರಿದಂತೆ ಜೆಡಿಎಸ್‌ ಬಂಡಾಯ ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ನನ್ನೊಟ್ಟಿಗೆ ಸಹಕರಿಸಿದ್ದರು. ಈ ಕೃತಜ್ಞತೆಯಿಂದ ಭೇಟಿ ಮಾಡಿದ್ದೇನೆ'' ಎಂದರು.

''ಜೆಡಿಎಸ್‌ ಬಂಡಾಯ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದು, ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಈ ವಿಚಾರದಲ್ಲಿ ಹೈಕಮಾಂಡ್‌ ಕೂಡ ಭರವಸೆ ನೀಡಿದೆ'' ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜೆಡಿಎಸ್‌ ಬಂಡಾಯ ಶಾಸಕರ ಮುಖಂಡ ಜಮೀರ್‌ ಅಹ್ಮದ್‌ ಖಾನ್‌ ''ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಫೆ.27 ರಂದು ನಾವೆಲ್ಲ ಏಳು ಮಂದಿ ಒಟ್ಟಿಗೆ ಕಾಂಗ್ರೆಸ್‌ ಸೇರುತ್ತೇವೆ. ಟಿಕೆಟ್‌ ಕೊಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ