ಆ್ಯಪ್ನಗರ

ಪಂಚಾಯತ್‌ ಚುನಾವಣೆ: ಕಾಂಗ್ರೆಸ್ ಬೆನ್ನಲ್ಲೇ ಜೆಡಿಎಸ್‌ನಿಂದಲೂ ಚುನಾವಣಾ ಆಯೋಗಕ್ಕೆ ಮನವಿ

ಪಂಚಾಯತ್‌ ಚುನಾವಣೆಯನ್ನು ಮುಂದೂಡಿ ಸದಸ್ಯರ ನಾಮನಿರ್ದೇಶನ ಮಾಡುವ ಸರ್ಕಾರ ಚಿಂತನೆಗೆ ಜೆಡಿಎಸ್‌ ಕೂಡಾ ವಿರೋಧ ವ್ಯಕ್ತಪಡಿಸಿದ್ದು ಚುನಾವಣಾ ಆಯೋಗಕ್ಕೆ ಮನವಿಯನ್ನು ಸಲ್ಲಿಸಿದೆ. ಇದರ ವಿವರ ಇಲ್ಲಿದೆ.

Vijaya Karnataka Web 22 May 2020, 4:58 pm
ಬೆಂಗಳೂರು: ಪಂಚಾಯತ್‌ ಚುನಾವಣೆಯನ್ನು ಮುಂದೂಡಿ ಸಮಸ್ಯರನ್ನು ನಾಮನಿರ್ದೇಶನ ಮಾಡುವ ಸರ್ಕಾರದ ಚಿಂತನೆಗೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಸರ್ಕಾರ ನಡೆಯನ್ನು ವಿರೋಧಿಸಿ ಕೂಡಲೇ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮುಖಂಡರ ನಿಯೋಗ ಮನವಿ ಸಲ್ಲಿಸಿದ ಬೆನ್ನಲ್ಲೇ ಜೆಡಿಎಸ್‌ ಕೂಡಾ ಮನವಿ ಸಲ್ಲಿಸಿದೆ.
Vijaya Karnataka Web hd kumaraswamy


ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರ ಅಧಿಕಾರವಧಿ ಮುಗಿಯುವ ಹಂತಕ್ಕೆ ಬಂದಿದ್ದು, ಸದ್ಯಕ್ಕೆ ಚುನಾವಣೆ ನಡೆಸುವ ಸಾಧ್ಯತೆ ಇಲ್ಲದಿರುವ ಕಾರಣ ಹಾಲಿ ಸದಸ್ಯರನ್ನೇ 6 ತಿಂಗಳು ಮುಂದುವರಿಸಬೇಕು ಎಂದು ಒತ್ತಾಯಿಸಿ ಮಾಜಿ ಸಿಎಂ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಹಾಗೂ ಮಾಹಿ ಸಚಿವ ಎಚ್‌ಡಿ ರೇವಣ್ಣ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ, ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್ ಮನವಿ

ಕೊರೊನಾ ಕಾರಣ ನೀಡಿ ಪಂಚಾಯತ್‌ಗಳನ್ನು ವಿಸರ್ಜನೆ ಮಾಡಿ ತಮ್ಮ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಆಡಳಿತ ಸಮಿತಿಗೆ ನಾಮನಿರ್ದೇಶನ ಮಾಡುವ ಮೂಲಕ ಸ್ಥಳೀಯ ಸಂಸ್ಥೆಗಳನ್ನು ಹತೋಟಿಗೆ ತೆಗೆದುಕೊಳ್ಳಲು ಬಿಜೆಪಿ ಹುನ್ನಾರ ನಡೆಸುತ್ತಿದೆ.

ರಾಜ್ಯದಲ್ಲಿರುವ ಪಂಚಾಯತ್‌ ರಾಜ್ ಕಾಯಿದೆಯಡಿಯಲ್ಲಿ ಆಡಳಿತ ಸಮಿತಿಗಳಿಗೆ ನಾಮನಿರ್ದೇಶನ ಮಾಡುವ ಅವಕಾಶವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಹಾಲಿ ಸದಸ್ಯರನ್ನೇ 6 ತಿಂಗಳು ಮುಂದುವರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ