ಆ್ಯಪ್ನಗರ

ಜೆಡಿಎಸ್‌ ಅಭ್ಯರ್ಥಿಗಳ ನಾಮಪತ್ರ ವಾಪಸ್‌, 12ರಲ್ಲಿ ಮಾತ್ರ ಹೋರಾಟ, ಹೊಸಕೋಟೆಯಲ್ಲಿ ಶರತ್‌ಗೆ ಬೆಂಬಲ

ಕರ್ನಾಟಕದಲ್ಲಿ ಶಾಸಕರ ರಾಜೀನಾಮೆಯಿಂದಾಗಿ ಉಪ ಚುನಾವಣೆ ವೇದಿಕೆ ಸಿದ್ಧವಾಗಿದೆ. ಬಿಜೆಪಿಯನ್ನು ಕಟ್ಟಿ ಹಾಕಲೇಬೇಕು ಎಂದು ಕಾಂಗ್ರೆಸ್‌, ಜೆಡಿಎಸ್‌ ಈಗ ಪಣತೊಟ್ಟಿದೆ.

Vijaya Karnataka Web 21 Nov 2019, 9:01 pm
ಬೆಂಗಳೂರು: ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶರತ್ ಬಚ್ಚೇಗೌಡ ಅವರಿಗೆ ತಮ್ಮ ಪಕ್ಷ ಬೆಂಬಲ ನೀಡಲಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
Vijaya Karnataka Web ಎಚ್‌ಡಿ ದೇವೇಗೌಡ
ಎಚ್‌ಡಿ ದೇವೇಗೌಡ


ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಥಣಿ, ಹಿರೇಕೆರೂರು ಮತ್ತು ಹೊಸಕೋಟೆ ಹೊರತುಪಡಿಸಿ ಇನ್ನುಳಿದ 12 ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದು, ಅವರ ಗೆಲುವಿಗೆ ಪಕ್ಷ ಶ್ರಮಿಸಲಿದೆ ಎಂದರು.

ಹೊಸಕೋಟೆಯಲ್ಲಿಪಕ್ಷೇತರ ಅಭ್ಯರ್ಥಿ ಶರತ್‌ ಬಚ್ಚೇಗೌಡರಿಗೆ ಬೆಂಬಲ, ಹಿರೇಕೆರೂರು ಹಾಗೂ ಅಥಣಿಯಲ್ಲಿಪಕ್ಷದ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿರುವುದರೊಂದಿಗೆ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿಜೆಡಿಎಸ್‌ ಹೋರಾಟ 12 ಕ್ಷೇತ್ರಗಳಿಗೆ ಸೀಮಿತವಾಗಿದೆ. ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆದಿರುವುದು ಜೆಡಿಎಸ್‌ಗೆ ಆರಂಭಿಕ ಆಘಾತವಾಗಿದೆ.

ವಸತಿ ಸಚಿವರಾಗಿದ್ದ ಎಂ.ಟಿ.ಬಿ.ನಾಗರಾಜ್‌ ಮನವೊಲಿಕೆ ಬಳಿಕವೂ ಸಮ್ಮಿಶ್ರ ಸರಕಾರ ಪತನಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಹೊಸಕೋಟೆಯಲ್ಲಿಜೆಡಿಎಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್‌ ಬಚ್ಚೇಗೌಡರಿಗೆ ಬೆಂಬಲ ನೀಡಿದ್ದಾರೆ.

ನಮ್ಮ ಪಕ್ಷದ ಅಭ್ಯರ್ಥಿಗಳ ನಾಮಪತ್ರ ವಾಪಸ್‌ ಪಡೆಯುವಂತೆ ಒತ್ತಡ ಹಾಕಿರುವುದು ಸರಿಯಲ್ಲ, ಆದರೂ ಉಳಿದ 12 ಕ್ಷೇತ್ರಗಳಲ್ಲಿಹೋರಾಟ ಮಾಡುವೆ, ಪಕ್ಷವನ್ನು ದುರ್ಬಲಗೊಳಿಸಲು ಬಿಡುವುದಿಲ್ಲ.
-ಎಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ

ಶರತ್‌ ಬಚ್ಚೇಗೌಡರ ತಂದೆ ಚಿಕ್ಕಬಳ್ಳಾಪುರ ಸಂಸದ ಬಿ.ಎನ್‌.ಬಚ್ಚೇಗೌಡರೊಂದಿಗಿನ ರಾಜಕೀಯ ವೈಷಮ್ಯವನ್ನು ಬದಿಗಿಟ್ಟು ಕುಮಾರಸ್ವಾಮಿ ಅವರು ಶರತ್‌ಗೆ ಬೆಂಬಲ ಸೂಚಿಸುವ ಮೂಲಕ ಅಚ್ಚರಿ ನಡೆ ಅನುಸರಿಸಿದ್ದರು.

ಈ ಮಧ್ಯೆ ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿ ರಟ್ಟೇಹಳ್ಳಿ ಕಬ್ಬಿಣಕಂತೆ ಮಠದ ಶಿವಲಿಂಗ ಶಿವಚಾರ್ಯಸ್ವಾಮೀಜಿ ಹಾಗೂ ಅಥಣಿ ಕ್ಷೇತ್ರದಿಂದ ಡಿಸಿಎಂ ಲಕ್ಷ್ಮಣ ಸವದಿ ಆಪ್ತ ಬೆಳಗಾವಿ ಜಿಪಂ ಬಿಜೆಪಿ ಸದಸ್ಯ ಗುರು ದಾಶ್ಯಾಳ ಕೆಲವು ಹೈಡ್ರಾಮಾದ ಬಳಿಕ ಗುರುವಾರ ನಾಮಪತ್ರ ವಾಪಸ್‌ ಪಡೆಯುವುದರೊಂದಿಗೆ ಜೆಡಿಎಸ್‌ ಸ್ಪರ್ಧೆ ಈಗ 15 ಕ್ಷೇತ್ರಗಳಲ್ಲಿ 12ಕ್ಕೆ ಸೀಮಿತಗೊಂಡಂತೆ ಆಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ