ಆ್ಯಪ್ನಗರ

ಮಹಿಳೆಯರಿಗೆ ಮಣೆ ಹಾಕಲು ಜೆಡಿಎಸ್‌ ಪ್ಲ್ಯಾನ್‌: ನಾರಿ ಶಕ್ತಿಗೆ ದಳಪತಿಗಳ ಸಂಕಲ್ಪ

ಜೆಡಿಎಸ್‌ ಪಕ್ಷದಲ್ಲಿ ಮಹಿಳೆಯರಿಗೆ ಮೀಸಲು ನೀಡುವ ಮೂಲಕ ಕರ್ನಾಟಕದಿಂದಲೇ ಮಹಿಳಾ ಮೀಸಲು ಧ್ವನಿ ಎತ್ತುವ ಕೆಲಸ ಮಾಡುತ್ತೇವೆ. 2023 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 33% ಮೀಸಲಾತಿ ವಿಧೇಯಕಕ್ಕೆ ಜೀವ ತುಂಬುತ್ತೇವೆ

Vijaya Karnataka Web 29 Sep 2021, 11:43 pm
ಬಿಡದಿ: ಮಹಿಳೆಯರಿಗೆ ಶೇ.33 ಮೀಸಲು ಧ್ವನಿಗೆ ಜೀವ ತುಂಬಲು ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ 30 ರಿಂದ 35 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ನೀಡಲಿದೆ ಎಂದು ಜೆಡಿಎಸ್‌ ವರಿಷ್ಠರೂ ಆದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.
Vijaya Karnataka Web ಜೆಡಿಎಸ್‌
ಜೆಡಿಎಸ್‌


ಜನತಾ ಪರ್ವ 1.0 ಹಾಗೂ ಮಿಷನ್‌-123 ಗುರಿಯೊಂದಿಗೆ ಬಿಡದಿಯ ತೋಟದ ಮನೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಗಾರದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಾಜಿ ಪ್ರಧಾನಿ ದೇವೇಗೌಡರು ಮಹಿಳೆಯರಿಗೆ ಚುನಾವಣೆಯಲ್ಲಿ ಶೇ.33 ರಷ್ಟು ಮೀಸಲು ಕೊಡಬೇಕು ಅಂತ ಧ್ವನಿ ಎತ್ತಿದ್ದರು. ಆದರೆ ಕಾಂಗ್ರೆಸ್‌, ಬಿಜೆಪಿ ಸರಕಾರಗಳು ಜಾರಿ ಮಾಡಲಿಲ್ಲ. ಹೀಗಾಗಿ ಜೆಡಿಎಸ್‌ ಪಕ್ಷದಲ್ಲಿ ಮಹಿಳೆಯರಿಗೆ ಮೀಸಲು ನೀಡುವ ಮೂಲಕ ಕರ್ನಾಟಕದಿಂದಲೇ ಮಹಿಳಾ ಮೀಸಲು ಧ್ವನಿ ಎತ್ತುವ ಕೆಲಸ ಮಾಡುತ್ತೇವೆ. 2023 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 33% ಮೀಸಲಾತಿ ವಿಧೇಯಕಕ್ಕೆ ಜೀವ ತುಂಬುತ್ತೇವೆ'' ಎಂದು ಕುಮಾರಸ್ವಾಮಿ ಹೇಳಿದರು.

ಮಿಷನ್‌ 123: ಹಂಗಿನ ಸರಕಾರ ಬೇಡ, ಸ್ವಂತವಾಗಿ ಸರಕಾರ ರಚಿಸೋಣ ಎಂದ ಎಚ್‌ಡಿಕೆ
''ಈಗಾಗಲೇ ಮೊದಲ ಹಂತದಲ್ಲಿ 7-8 ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಮಹಿಳೆಯರಿಗೂ ಹೆಚ್ಚಿನ ಶಕ್ತಿ ತುಂಬಲು ಈ ಬಾರಿ 30-35 ಸೀಟು ಮೀಸಲಿಟ್ಟಿದ್ದೇವೆ. ಬಿಜೆಪಿ, ಕಾಂಗ್ರೆಸ್‌ ಪಕ್ಷಗಳಿಗೆ ಹೋಲಿಕೆ ಮಾಡಿದರೆ ನಮ್ಮ ಮಹಿಳಾ ಘಟಕ ಸ್ವಲ್ಪ ಹಿಂದೆ ಉಳಿದಿದೆ. ಈಗ ಈ ಘಟಕಕ್ಕೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಪ್ರಾರಂಭ ಮಾಡುತ್ತೇವೆ'' ಎಂದರು.

ಮಹಿಳೆಯರಿಗೂ ಟಾಸ್ಕ್‌

ಮಹಿಳಾ ಘಟಕಕ್ಕೆ ಶಕ್ತಿ ಹೆಚ್ಚಿಸಲು ಬೂತ್‌ ಮಟ್ಟದಿಂದ ಟಾಸ್ಕ್‌ ಕೊಡಲಾಗುವುದು. ನಾಯಕಿಯರಿಗೆ ಸೂಕ್ತ ತರಬೇತಿ ಕೊಡುವ ಜತೆಗೆ ಪ್ರತಿ ಕ್ಷೇತ್ರದಲ್ಲಿ ಸುಮಾರು 100 ಕುಟುಂಬಗಳ ಸಮಸ್ಯೆಗೆ ಪರಿಹಾರ ನೀಡುವ ಜವಾಬ್ದಾರಿಯನ್ನೂ ನೀಡಲಾಗುತ್ತದೆ. 30 ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದಿರುವ ಮಹಿಳಾ ಸದಸ್ಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ,'' ಎಂದು ತಿಳಿಸಿದರು.

ಮಹಿಳಾ ಕಾರ್ಯಾಗಾರಕ್ಕೆ ಚಾಲನೆ

ಇದೇ ವೇಳೆ ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ಮಹಿಳಾ ಜೆಡಿಎಸ್‌ ರಾಜ್ಯಾಧ್ಯಕ್ಷೆ ಲೀಲಾದೇವಿ ಆರ್‌.ಪ್ರಸಾದ್‌ ಅವರು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಗಾರವನ್ನು ಉದ್ಘಾಟಿಸಿದರು.

ಜೆಡಿಎಸ್‌ ಮಹಿಳಾ ನಾಯಕಿ ಕೆ. ಷರೀಫಾ ಅವರು ಮಹಿಳೆಯರನ್ನು ಕುರಿತು ಪ್ರಧಾನ ಭಾಷಣ ಮಾಡಿದರು. ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲೀಲಾದೇವಿ ಆರ್‌. ಪ್ರಸಾದ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವದುರ್ಗದ ಅಭ್ಯರ್ಥಿ ಕರಿಯಮ್ಮ, ಬೆಂಗಳೂರು ನಗರ ಘಟಕದ ಅಧ್ಯಕ್ಷೆ ರುತ್‌ ಮನೋರಮಾ ವೇದಿಕೆಯಲ್ಲಿದ್ದರು.

ರಾಜ್ಯದ ಎಲ್ಲಾ ಜಿಲ್ಲೆಗಳ ಮಹಿಳಾ ಪ್ರತಿನಿಧಿಗಳು ಭಾಗಿ

ಕಾರ್ಯಾಗಾರದಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಿಂದ ಸುಮಾರು 200ಕ್ಕೂ ಹೆಚ್ಚು ಮಹಿಳಾ ಪ್ರತಿನಿಧಿಗಳು ಆಗಮಿಸಿದ್ದರು. ಪುರಸಭೆ, ನಗರಸಭೆ, ಪಾಲಿಕೆ ಸದಸ್ಯರು, ಅಧ್ಯಕ್ಷೆ-ಉಪಾಧ್ಯಕ್ಷೆಯರು, ಗ್ರಾಪಂ ಅಧ್ಯಕ್ಷರು, ಜಿಪಂ ಮತ್ತು ತಾಪಂ ಮಾಜಿ ಸದಸ್ಯರು ಸೇರಿದಂತೆ ಪ್ರತಿ ವಿಧಾನಸಭೆ ಕ್ಷೇತ್ರದಿಂದ ತಲಾ ಇಬ್ಬರು ಸಂಭಾವ್ಯ ಮಹಿಳಾ ಅಭ್ಯರ್ಥಿಗಳು ಕಾರ್ಯಾಗಾರದಲ್ಲಿ ಭಾಗಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ