ಆ್ಯಪ್ನಗರ

ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಬರೆದ ಫಲಿತಾಂಶ 4 ವಾರಗಳಲ್ಲಿ ಪ್ರಕಟಿಸಲು ಹೈಕೋರ್ಟ್‌ ಆದೇಶ

ಸಿವಿಲ್‌ ನ್ಯಾಯಾಧೀಶ ಎಸ್‌ಎಂ...

Vijaya Karnataka 11 Jul 2019, 5:00 am
ಬೆಂಗಳೂರು: ಸಿವಿಲ್‌ ನ್ಯಾಯಾಧೀಶ ಎಸ್‌.ಎಂ.ಶಿವಬೀರಯ್ಯ ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಬರೆದ ಪರೀಕ್ಷೆಯ ಫಲಿತಾಂಶವನ್ನು 4 ವಾರಗಳಲ್ಲಿ ಪ್ರಕಟಿಸಿ, ನೇಮಕ ಪ್ರಕ್ರಿಯೆ ಕೈಗೊಳ್ಳುವಂತೆ ಹೈಕೋರ್ಟ್‌ ಆದೇಶಿಸಿದೆ.
Vijaya Karnataka Web hamer


ಎಸ್‌.ಎಂ. ಶಿವಬೀರಯ್ಯ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾ. ಪಿ.ಬಿ. ಭಜಂತ್ರಿ ಅವರಿದ್ದ ಏಕಸದಸ್ಯಪೀಠ, ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ಗೆ ಈ ಆದೇಶ ನೀಡಿತು.

2014ರ ಮಾ.18ರಂದು ಶಿವಬೀರಯ್ಯ ಉಡುಪಿ ಜಿಲ್ಲೆ ಕುಂದಾಪುರಕ್ಕೆ ಸಿವಿಲ್‌ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಆದರೆ, ಕರ್ನಾಟಕ ನ್ಯಾಯಾಂಗ ಸೇವೆ (ಪ್ರೊಬೇಷನ್‌) ನಿಯಮ 1977ರ ನಿಯಮ 6 (1) ಪ್ರಕಾರ ಅವರನ್ನು ಸಿವಿಲ್‌ ನ್ಯಾಯಾಧೀಶ ಸೇವೆಯಿಂದ ಹೈಕೋರ್ಟ್‌ ಬಿಡುಗಡೆಗೊಳಿಸಿತ್ತು.

ಇದನ್ನು ಪ್ರಶ್ನಿಸಿ ಶಿವಬೀರಯ್ಯ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಮಧ್ಯೆ ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ನೇಮಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಶಿವಬೀರಯ್ಯ ಅರ್ಜಿ ಹಾಕಿದ್ದರು. ಆದರೆ, ಸಿವಿಲ್‌ ನ್ಯಾಯಾಧೀಶರ ಸೇವೆಯಿಂದ ಬಿಡುಗಡೆಗೊಂಡಿದ್ದಾರೆಂಬ ಕಾರಣಕ್ಕೆ ಅವರ ಅರ್ಜಿ ತಿರಸ್ಕರಿಸಲಾಗಿತ್ತು.

ಹೈಕೋರ್ಟ್‌, ಶಿವಬೀರಯ್ಯಗೆ ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು ಎಂದು ಏಕಸದಸ್ಯ ನ್ಯಾಯಪೀಠ ಹೇಳಿ, ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿತ್ತು.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.

ನಾಲ್ಕು ವರ್ಷಗಳ ಏಕಸದಸ್ಯಪೀಠದಲ್ಲಿ ಅರ್ಜಿ ವಿಚಾರಣೆ ನಡೆದು, ಶಿವಬೀರಯ್ಯ ಅವರನ್ನು ಸಿವಿಲ್‌ ನ್ಯಾಯಾಧೀಶರ ಸೇವೆಯಿಂದ ಬಿಡುಗಡೆಗೊಳಿಸಿ ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸಿರುವ ನ್ಯಾಯಪೀಠ, ಮುಂದಿನ ಪ್ರಕ್ರಿಯೆ ಕೈಗೊಳ್ಳುವಂತೆ ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ