ಆ್ಯಪ್ನಗರ

ಕೊರೊನಾ ಎಫೆಕ್ಟ್: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಯುವಕರ ನಡೆ ‘ದುಷ್ಕೃತ್ಯ’ ಎಂದ ಸುಧಾಕರ್!

ಕೊರೊನಾ ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಯುವಕರ ನಡೆಯನ್ನು ದುಷ್ಕೃತ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka Web 6 Jul 2020, 10:23 am
ಬೆಂಗಳೂರು: ಕೊರೊನಾ ನಿರ್ವಹಣೆ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ವೆಚ್ಚದ ಕುರಿತಾಗಿ ಸರ್ಕಾರದ ನಡೆಯನ್ನು ತರಾಟೆಗೆ ತೆಗೆದುಕೊಂಡಿದ್ದ ಯುವಕರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಪರ ವಿರೋಧ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಯುವಕರ ನಡೆಯನ್ನು ದುಷ್ಕೃತ್ಯ ಎಂದಿದ್ದಾರೆ.
Vijaya Karnataka Web sudhakar new


ಬೆಂಗಳೂರಿನಲ್ಲಿ ಉದ್ಯೋಗ ಕಳೆದುಕೊಂಡು ವೇತನವೂ ಸಿಗದೆ ಸಾಕಷ್ಟು ಜನರು ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ನೆಲಮಂಗಳ ಟೋಲ್‌ ಗೇಟ್‌ ಬಳಿ ತಮ್ಮ ಊರಿಗೆ ಜೀಪ್‌ನಲ್ಲಿ ತೆರಳುತ್ತಿದ್ದ ಯುವಕರು ಮಾಧ್ಯಮವೊಂದಕ್ಕೆ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಕೊರೊನಾ ಎಫೆಕ್ಟ್: ಉದ್ಯೋಗವಿಲ್ಲ, ವೇತನವಿಲ್ಲ! ಬೆಂಗಳೂರಿಗೆ ಗುಡ್‌ಬೈ ಹೇಳಲು ಕಾರಣವಿದು


ವಿಡಿಯೋದಲ್ಲಿ ಯುವಕರು ತಾವು ಉದ್ಯೋಗ ಕಳೆದುಕೊಂಡಿರುವುದಾಗಿಯೂ ಹಾಗೂ ಖಾಸಗಿ ಆಸ್ಪತ್ರೆಯಲ್ಲಿಕೊರೊನಾ ಚಿಕಿತ್ಸೆಗಾಗಿ ದುಬಾರಿ ವೆಚ್ಚದ ಬಗ್ಗೆಯೂ ಉಲ್ಲೇಖಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಕಾರಣಕ್ಕಾಗಿ ಬೆಂಗಳೂರಿನ ಸಹವಾಸ ಸಾಕು ಎಂದಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಯುವಕರು ಒಂದು ಪಕ್ಷದ ಕಾರ್ಯಕರ್ತರು ಹಾಗೂ ಅವರು ಕೆಲವು ಮುಖಂಡರ ಜೊತೆಗೆ ಇರುವ ಫೋಟೋಗಳು ಹರಿದಾಡುತ್ತಿವೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ಡಾ. ಸುಧಾಕರ್ ‘ಕೊರೊನಾ ವಿರುದ್ಧದ ಈ ಹೋರಾಟದಲ್ಲಿ ನಾವೆಲ್ಲರೂ ಯೋಧರೇ. ಕ್ಷುಲ್ಲಕ ರಾಜಕಾರಣಕ್ಕಾಗಿ ಸುಳ್ಳು ಸುದ್ದಿ ಹರಡುವ, ಇಡೀ ಸಮಾಜ ಒಗ್ಗಟ್ಟಿನಿಂದ ಇರಬೇಕಾದ ಈ ಸಂದರ್ಭದಲ್ಲಿ ಒಡಕು ಮೂಡಿಸಲು ಪ್ರಯತ್ನಿಸುವ, ಹಗಲಿರುಳು ದುಡಿಯುತ್ತಿರುವ ಸರ್ಕಾರ ಮತ್ತು ಕೊರೊನಾ ಯೋಧರಿಗೆ ಮಸಿ ಬಳಿಯುವ ಈ ದುಷ್ಕೃತ್ಯವನ್ನು ಜನ ಎಂದಿಗೂ ಕ್ಷಮಿಸುವುದಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ