ಆ್ಯಪ್ನಗರ

ಕಾಲು ಸಂಕ, ಗ್ರಾಮೀಣ ರಸ್ತೆ ನಿರ್ವಹಣೆ, ದುರಸ್ತಿಗೆ 122.66 ಕೋಟಿ ಬಿಡುಗಡೆ

ರಾಜ್ಯದ ಕಾಲು ಸಂಕಗಳು, ಗ್ರಾಮೀಣ ರಸ್ತೆ ನಿರ್ವಹಣೆ, ದುರಸ್ತಿ ಹಾಗೂ ಅಭಿವೃದ್ಧಿಯ ತುರ್ತು ಕಾಮಗಾರಿಗಳಿಗೆ ರಾಜ್ಯ ಸರಕಾರವು 12266 ಕೋಟಿ ರೂ...

Vijaya Karnataka 21 Jul 2018, 7:58 am
ಬೆಂಗಳೂರು: ರಾಜ್ಯದ ಕಾಲು ಸಂಕಗಳು, ಗ್ರಾಮೀಣ ರಸ್ತೆ ನಿರ್ವಹಣೆ, ದುರಸ್ತಿ ಹಾಗೂ ಅಭಿವೃದ್ಧಿಯ ತುರ್ತು ಕಾಮಗಾರಿಗಳಿಗೆ ರಾಜ್ಯ ಸರಕಾರವು 122.66 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
Vijaya Karnataka Web BNG-SMR-9TTH3


ಈ ಸಂಬಂಧ ಶಾಸಕರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಕಾರ್ಯಪಡೆ ಮೂಲಕ 2018-19ನೇ ಸಾಲಿಗೆ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಈ ಅನುದಾನವನ್ನು ತಾಲೂಕುವಾರು ಹಂಚಿಕೆ ಮಾಡಿದ್ದು, ಎಲ್ಲಾ ಜಿಲ್ಲಾ ಪಂಚಾಯಿತಿಗಳಿಗೆ ಹಣ ಬಿಡುಗಡೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಯೋಜನೆ ಅನುಷ್ಠಾನಕ್ಕೆ ಒಟ್ಟು 23 ಷರತ್ತುಗಳನ್ನು ವಿಧಿಸಲಾಗಿದೆ. ಇತ್ತೀಚೆಗೆ ಕರಾವಳಿ ಹಾಗೂ ಮಲೆನಾಡ ಭಾಗದಲ್ಲಿ ಸುರಿದ ಭಾರೀ ಮಳೆಯಿಂದ ಗ್ರಾಮೀಣ ರಸ್ತೆಗಳು ಹಾಳಾಗಿವೆ. ಜತೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ತಾಯಿಯೊಂದಿಗೆ ನಡೆದು ಹೋಗುತ್ತಿದ್ದ ಬಾಲಕಿಯೊಬ್ಬಳು ಕಾಲುಸಂಕದಲ್ಲಿ ಕಾಲುಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡ ಹಿನ್ನೆಲೆಯಲ್ಲಿ ಕಾಲುಸಂಕಗಳ ದುರಸ್ತಿಗೆ ವಿಶೇಷ ಆದ್ಯತೆ ನೀಡಲಾಗಿದೆ.

ಕ್ರಿಯಾ ಯೋಜನೆ ರೂಪಿಸುವಾಗ ಪ್ರಕೃತಿ ವಿಕೋಪದಿಂದ ತಾಲೂಕಿನ ವ್ಯಾಪ್ತಿಯಲ್ಲಿ ಹಾಳಾಗಿರುವ ರಸ್ತೆ, ಚರಂಡಿ ಮತ್ತು ಕಾಲುಸಂಕಗಳು, ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ, ನಮ್ಮ ಗ್ರಾಮ ನಮ್ಮ ರಸ್ತೆ, ನಬಾರ್ಡ್‌ ಯೋಜನೆಯಡಿ ನಿರ್ಮಿಸಿ ನಿರ್ವಹಣಾ ಅವಧಿಯು ಮುಕ್ತಾಯವಾದ ನಂತರ ಹಾಳಾದ ರಸ್ತೆಗಳ ದುರಸ್ತಿಯನ್ನು ಆದ್ಯತೆ ಮೇಲೆ ಆಯ್ಕೆ ಮಾಡಿಕೊಳ್ಳಬೇಕು ಹಾಗೂ ದುರಸ್ತಿಗಾಗಿ ಹಂಚಿಕೆ ಮಾಡಿದ ಅನುದಾನದಲ್ಲಿ ಹೊಸ ಕಾಮಗಾರಿಗಳನ್ನು ಕೈಗೊಳ್ಳಬಾರದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಪ್ರಮುಖ ಷರತ್ತು


ಜಿಲ್ಲೆಗಳಿಗೆ ಬಿಡುಗಡೆ ಮಾಡಿರುವ ಹಣ


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ