ಆ್ಯಪ್ನಗರ

ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲು ಎರಡು ಎಕರೆ ಜಾಗ ಕೊಡಿ: ಗೋವಾ ಸಿಎಂಗೆ ಬಸವರಾಜ ಬೊಮ್ಮಾಯಿ ಮನವಿ

Kannada Bhavan in Goa: ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರ ಕ್ರಮ ಕೈಗೊಂಡಿದ್ದು, ಮಂಗಳೂರಿನಲ್ಲಿ ಕೊಂಕಣಿ ಅಕಾಡೆಮಿ ನಿರ್ಮಾಣಕ್ಕೆ 3 ಕೋಟಿ ರೂ. ಮಂಜೂರು ಮಾಡಲಾಗಿದೆ. ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಕನಿಷ್ಠ 1ರಿಂದ 2 ಎಕರೆ ಸರ್ಕಾರಿ ಜಾಗ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಅಖಿಲ ಗೋವಾ ಕನ್ನಡ ಮಹಾ ಸಂಘದ ಪ್ರತಿನಿಧಿಗಳನ್ನು ಇತ್ತೀಚಿಗೆ ಭೇಟಿ ಮಾಡಿದ್ದ ಸಿಎಂ ಬೊಮ್ಮಾಯಿ, ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದರು.

Edited byಹೇಮಂತ್ ಕುಮಾರ್ ಎಸ್ | Lipi 28 Sep 2022, 4:38 pm

ಹೈಲೈಟ್ಸ್‌:

  • ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರಿಗೆ ಪತ್ರ ಬರೆದು ಮನವಿ
  • ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರ ಕ್ರಮ
  • ಕನ್ನಡ ಭವನ ನಿರ್ಮಾಣಕ್ಕೆ ಕನಿಷ್ಠ 1ರಿಂದ 2 ಎಕರೆ ಸರಕಾರಿ ಜಾಗ ನೀಡುವಂತೆ ಮನವಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Kannada sahitya parishat Goa team meet CM Basavaraj Bommai.
ಅಖಿಲ ಗೋವಾ ಕನ್ನಡ ಮಹಾ ಸಂಘದ ಪ್ರತಿನಿಧಿಗಳನ್ನು ಇತ್ತೀಚಿಗೆ ಭೇಟಿ ಮಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ

ಕಾರವಾರ (ಉತ್ತರಕನ್ನಡ): ಗೋವಾದಲ್ಲಿ ಕನ್ನಡ ಭವನ (Kannada Bhavan) ನಿರ್ಮಾಣಕ್ಕೆ ಕನಿಷ್ಠ 1ರಿಂದ 2 ಎಕರೆ ಸರಕಾರಿ ಜಾಗ ನೀಡುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಗೋವಾ (Goa) ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರ ಕ್ರಮ ಕೈಗೊಂಡಿದ್ದು, ಮಂಗಳೂರಿನಲ್ಲಿ ಕೊಂಕಣಿ ಅಕಾಡೆಮಿ ನಿರ್ಮಾಣಕ್ಕೆ 3 ಕೋಟಿ ರೂ. ಮಂಜೂರು ಮಾಡಲಾಗಿದೆ. ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಕನಿಷ್ಠ 1ರಿಂದ 2 ಎಕರೆ ಸರಕಾರಿ ಜಾಗ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ನಾಡಗೀತೆಗೆ ಮೈಸೂರು ಅನಂತ ಸ್ವಾಮಿಯವರ ರಾಗ ಸಂಯೋಜನೆ ಅಂತಿಮ: ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತ
ಬೆಂಗಳೂರಿನ ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಅಖಿಲ ಗೋವಾ ಕನ್ನಡ ಮಹಾ ಸಂಘದ ಪ್ರತಿನಿಧಿಗಳನ್ನು ಇತ್ತೀಚಿಗೆ ಭೇಟಿ ಮಾಡಿದ್ದ ಸಿಎಂ ಬೊಮ್ಮಾಯಿ, ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಈ ನಿಯೋಗ ಬೊಮ್ಮಾಯಿಯವರನ್ನ ಭೇಟಿ ಮಾಡಿತ್ತು‌.
ಈ ವೇಳೆ ಸಿಎಂ ಬೊಮ್ಮಾಯಿ, ಉತ್ತರ ಕರ್ನಾಟಕದವರು ಹೆಚ್ಚಿನ ಸಂಖ್ಯೆಯಲ್ಲಿ ಗೋವಾದಲ್ಲಿ ನೆಲೆಸಿದ್ದಾರೆ. ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲು ಸರಕಾರ ಬದ್ಧವಾಗಿದೆ. ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
HL Pushpa | ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾಗಿ ಡಾ.ಎಚ್‌.ಎಲ್‌. ಪುಷ್ಪ ಆಯ್ಕೆ
ಅಖಿಲ ಗೋವಾ ಕನ್ನಡ ಮಹಾಸಂಘದ ಗೌರವಾಧ್ಯಕ್ಷ ಸಿದ್ದಣ್ಣ ಮೇಟಿ ಹಾಗೂ ಇತರ ಪದಾಧಿಕಾರಿಗಳು ನೆರೆ ರಾಜ್ಯದಲ್ಲಿ ನೆಲೆಸಿರುವ ಕನ್ನಡ ಮಾತನಾಡುವ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು. ಸಭೆಯಲ್ಲಿ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರು ಉಪಸ್ಥಿತರಿದ್ದರು.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ