ಆ್ಯಪ್ನಗರ

ಕನ್ನಡದಲ್ಲಿ ಕರಡು ವಿಧೇಯಕ -ಸಿಎಸ್‌ ಸೂಚನೆ

ಸಚಿವ ಸಂಪುಟದ ಅನುಮೋದನೆಗೆ ಮಂಡನೆ ಮಾಡುವ ಕರಡು ವಿಧೇಯಕ, ನಿಯಮಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಇರಬೇಕು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಬುಧವಾರ ಆದೇಶಿಸಿದ್ದಾರೆ.

Vijaya Karnataka 18 Jul 2019, 5:00 am
ಬೆಂಗಳೂರು : ಸಚಿವ ಸಂಪುಟದ ಅನುಮೋದನೆಗೆ ಮಂಡನೆ ಮಾಡುವ ಕರಡು ವಿಧೇಯಕ, ನಿಯಮಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಇರಬೇಕು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಬುಧವಾರ ಆದೇಶಿಸಿದ್ದಾರೆ.
Vijaya Karnataka Web kannada notification c s directon
ಕನ್ನಡದಲ್ಲಿ ಕರಡು ವಿಧೇಯಕ -ಸಿಎಸ್‌ ಸೂಚನೆ


ಈ ಸಂಬಂಧ ಎಲ್ಲ ಇಲಾಖಾ ಮುಖ್ಯಸ್ಥರಿಗೆ ಸುತ್ತೋಲೆ ರವಾನಿಸಿರುವ ಅವರು ಸಚಿವ ಸಂಪುಟ ಸಭೆಗೆ ಟಿಪ್ಪಣಿಗಳನ್ನು ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲಿ ಮಂಡನೆ ಮಾಡಲಾಗುತ್ತಿದೆ. ಆದರೆ, ಟಿಪ್ಪಣಿಗೆ ಲಗತ್ತಿಸುವ ಕರಡು ವಿಧೇಯಕ ಮತ್ತು ನಿಯಮಗಳು ಆಂಗ್ಲಭಾಷೆಯಲ್ಲಿ ಇರುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಇನ್ನುಮುಂದೆ ಕನ್ನಡ ಭಾಷೆಯಲ್ಲಿ ಕರಡು ವಿಧೇಯಕ ಮತ್ತು ನಿಯಮಗಳನ್ನು ಸಲ್ಲಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ