ಆ್ಯಪ್ನಗರ

ನಾಡೋಜ ಮನು ಬಳಿಗಾರ್‌ಗೆ ರಾಷ್ಟ್ರಕವಿ ಕುವೆಂಪು ಪ್ರಶಸ್ತಿ ಪ್ರದಾನ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿಏರ್ಪಡಿಸಿದ್ದ ಕುವೆಂಪು ಅವರ 116ನೇ ಜಯಂತಿ, ಕುವೆಂಪು ಸಾಂಸ್ಕೃತಿಕ ಉತ್ಸವದಲ್ಲಿ'ರಾಷ್ಟ್ರಕವಿ ಕುವೆಂಪು ಪ್ರಶಸ್ತಿ' (25 ಸಾವಿರ ನಗದು ಹಾಗೂ ಸ್ಮರಣಿಕೆ)ಯನ್ನು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌ ಅವರಿಗೆ ಪ್ರದಾನ ಮಾಡಲಾಯಿತು.

Vijaya Karnataka Web 20 Jan 2020, 11:03 pm
ಬೆಂಗಳೂರು: ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಕಲಾನಿಕೇತನ ಸಂಸ್ಥೆಯು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿಏರ್ಪಡಿಸಿದ್ದ ಕುವೆಂಪು ಅವರ 116ನೇ ಜಯಂತಿ, ಕುವೆಂಪು ಸಾಂಸ್ಕೃತಿಕ ಉತ್ಸವದಲ್ಲಿ'ರಾಷ್ಟ್ರಕವಿ ಕುವೆಂಪು ಪ್ರಶಸ್ತಿ' (25 ಸಾವಿರ ನಗದು ಹಾಗೂ ಸ್ಮರಣಿಕೆ)ಯನ್ನು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌ ಅವರಿಗೆ ಪ್ರದಾನ ಮಾಡಲಾಯಿತು.
Vijaya Karnataka Web manu baligar nadoja


''ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಹೆಸರಿನಲ್ಲಿಪ್ರಶಸ್ತಿ ಸ್ವೀಕರಿಸುತ್ತಿರುವುದು ನನ್ನ ಪುಣ್ಯ. ಈ ಪ್ರಶಸ್ತಿಯನ್ನು ಸ್ವೀಕರಿಸುವ ಮೂಲಕ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಕುವೆಂಪು ಅವರ ಜಾತ್ಯತೀತ ನಿಲುವಿನ ಆದರ್ಶಗಳನ್ನು ಪಾಲಿಸುತ್ತೇನೆ'' ಎಂದು ನುಡಿದರು.

ಶಾಸಕ ಕೆ.ಗೋಪಾಲಯ್ಯ ಅವರು ಮಾತನಾಡಿ, ''ಕುವೆಂಪು ಅವರ ಹೆಸರಿನಲ್ಲಿನನ್ನ ಕ್ಷೇತ್ರದಲ್ಲಿಒಂದು ಉದ್ಯಾನ ನಿರ್ಮಿಸಿದ್ದೇನೆ. ಇದು ಆ ಭಾಗದ ಸಹಸ್ರಾರು ಮಂದಿಗೆ ನೆರವಾಗಿದೆ. ಇದೀಗ ಕಾರ್ಯಕ್ರಮಗಳಲ್ಲಿಕುವೆಂಪು ಅವರು ಬರೆದಿರುವ ಪುಸ್ತಕಗಳನ್ನು ಉಚಿತವಾಗಿ ವಿತರಿಸುವ ಮೂಲಕ ಅವರ ಸಾಹಿತ್ಯ, ಕನ್ನಡ ಭಾಷೆ, ನಾಡು, ನುಡಿಯ ಕಾಳಜಿಯನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತೇನೆ'' ಎಂದು ನುಡಿದರು. ಕಾರ್ಯಕ್ರಮದಲ್ಲಿದಲಿತ ಕವಿ ಡಾ. ಸಿದ್ದಲಿಂಗಯ್ಯ, ಕವಿಗಳಾದ ಡಾ. ದೊಡ್ಡರಂಗೇಗೌಡ, ಡಾ. ಕೆ. ಚಿದಾನಂದಗೌಡ, ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ, ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಕಲಾನಿಕೇತನದ ಅಧ್ಯಕ್ಷ ಕುವೆಂಪು ಪ್ರಕಾಶ್‌ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಕುವೆಂಪು ರಚನೆ ನಾಟಕ, ಗೀತ ಗಾಯನ, ನೃತ್ಯ ರೂಪಕಗಳನ್ನು ಪ್ರದರ್ಶಿಸುವ ಮೂಲಕ ಕುವೆಂಪು ಅವರಿಗೆ ಗೌರವ ಸಲ್ಲಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ