ಆ್ಯಪ್ನಗರ

ಗೋ ಹತ್ಯೆ ನಿಷೇಧ ಇಂದಿನಿಂದ ಜಾರಿ: ಉಲ್ಲಂಘನೆ ಮಾಡುವವರಿಗೆ 7 ವರ್ಷ ಜೈಲು, 5 ಲಕ್ಷ ರೂ. ದಂಡ

ಗೋವುಗಳ ಹತ್ಯೆ, ಅಕ್ರಮ ಸಾಗಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಗೋವುಗಳ ಅಕ್ರಮ ಸಾಗಾಟ ಮತ್ತು ವಧೆ ಆಗುತ್ತಿರುವುದು ಗಮನಕ್ಕೆ ತರಬೇಕು. ಈ ಮೂಲಕ ಸಾರ್ವಜನಿಕರು ಕೈ ಜೋಡಿಸಬೇಕು

Vijaya Karnataka Web 18 Jan 2021, 11:03 am
ಬೆಂಗಳೂರು: ರಾಜ್ಯ ಸರಕಾರ ಜಾರಿಗೆ ತಂದಿರುವ ಮಹತ್ವವ ಗೋ ಹತ್ಯೆ ನಿಷೇಧ ಕಾಯಿದೆ ಸೋಮವಾರದಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.
Vijaya Karnataka Web ಗೋವು
ಗೋವು


ಈ ಸಂಬಂಧ ಪಶುಸಂಗೋಪನಾ ಇಲಾಖೆ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ಗೋಹತ್ಯೆ ನಿಷೇಧದ ಹಿನ್ನೆಲೆ ಗೋವುಗಳ ಸಂರಕ್ಷಣೆಗೆ ಬೇಕಾಗುವ ಗೋಶಾಲೆ ಹಾಗೂ ಇನ್ನಿತರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಹಂತ ಹಂತವಾಗಿ ಗೋಶಾಲೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಒಂದು ವೇಳೆ ಗೋ ಹತ್ಯೆ ನಿಷೇಧ ಕಾಯಿದೆ ಉಲ್ಲಂಘನೆ ಮಾಡಿದರೆ ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ, ಐದು ಲಕ್ಷ ರೂಪಾಯಿ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ಅಕ್ರಮವಾಗಿ ಗೋವುಗಳ ಸಾಗಾಟ ಮಾಡುವುದು ಕಂಡುಬಂದರೆ ಕಠಿಣ ಶಿಕ್ಷೆ ವಿಧಿಸಬಹುದಾಗಿದೆ. ಇದಲ್ಲದೇ ಇನ್ನೂ ಹತ್ತು ಹಲವಾರು ಮಾರ್ಗಸೂಚಿಯಲ್ಲಿ ನೀಡಲಾಗಿದೆ.

ಗೋವುಗಳ ಹತ್ಯೆ, ಅಕ್ರಮ ಸಾಗಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಗೋವುಗಳ ಅಕ್ರಮ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು. ಈ ಮೂಲಕ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಮನವಿ ಮಾಡಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ