ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಅವರು ರಾಜಕೀಯ ಕುರಿತ ಟ್ವೀಟ್ನಲ್ಲಿ ನಟ ಪುನೀತ್ ರಾಜಕುಮಾರ್ ಹೆಸರು ಪ್ರಸ್ತಾಪಿಸಿದ್ದಕ್ಕೆ ನಟ ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿದ್ದಾರೆ. ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ನಟ ಶಿವರಾಜ ಕುಮಾರ್ ಪ್ರಚಾರ ಕುರಿತು ಟ್ವೀಟ್ ಮಾಡಿದ್ದ ಸಂಸದ ಪ್ರತಾಪ್ ಸಿಂಹ ಅವರು ಪುನೀತ್ ರಾಜ್ಕುಮಾರ್ ಹೆಸರು ಪ್ರಸ್ತಾಪಿಸಿದ್ದರು. ಈ ವಿಚಾರಕ್ಕೆ ಅಸಮಾಧಾನಗೊಂಡ ನಟ ಪ್ರಕಾಶ್ ರಾಜ್ ಸಂಸದರನ್ನು ಟ್ಯಾಗ್ ಮಾಡಿ ನೀವು ದೊಡ್ಡ ತಪ್ಪು ಮಾಡುತ್ತಿದ್ದೀರಾ ಎಂದು ಕಿಡಿಕಾರಿದ್ದಾರೆ.
ಪ್ರತಾಪ್ ಸಿಂಹ ಟ್ವೀಟ್ನಲ್ಲಿ ಏನಿದೆ?
" ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವ ಭಾವ ಭಕುತಿಗೆ...'' ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದರು.
Karnataka Elections 2023 : ಛೀ ಛೀ ನಿಮ್ಮ ಹೊಲಸು ರಾಜಕಾರಣಕ್ಕೆ ನಮ್ಮೆಲ್ಲರ ಅಪ್ಪು ಅವರನ್ನ ಯಾಕ್ ಎಳೀತೀರ್ರಿ ಪ್ರತಾಪ್ ಸಿಂಹ - ಪ್ರಕಾಶ್ ರಾಜ್ ಬೇಸರ
Prakash Raj On Pratap Simha : ನಟ ಶಿವರಾಜ್ಕುಮಾರ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತಿರುವ ಕುರಿತು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿ ನಟ ಪುನೀತ್ ರಾಜ್ಕುಮಾರ್ ಹೆಸರನ್ನು ಪ್ರಸ್ತಾಪಿಸಿದ್ದರು. ಇದಕ್ಕೆ ನಟ ಪ್ರಕಾಶ್ ರಾಜ್ ವಿರೋಧ ವ್ಯಕ್ತಪಡಿಸಿ ಟ್ವೀಟ್ ಮಾಡಿ ಈ ತಪ್ಪು ಮಾಡಬೇಡಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಹೈಲೈಟ್ಸ್:
- ಸಂಸದ ಪ್ರತಾಪ್ ಸಿಂಹ ಅವರು ರಾಜಕೀಯ ಕುರಿತ ಟ್ವೀಟ್ನಲ್ಲಿ ನಟ ಪುನೀತ್ ರಾಜಕುಮಾರ್ ಹೆಸರು ಪ್ರಸ್ತಾಪಿಸಿದ್ದಕ್ಕೆ ನಟ ಪ್ರಕಾಶ್ ರಾಜ್ ಬೇಸರ.
- ವರುಣಾ ಕ್ಷೇತ್ರದಲ್ಲಿ ನಟ ಶಿವರಾಜ ಕುಮಾರ್ ಪ್ರಚಾರ ಕುರಿತು ಟ್ವೀಟ್ ಮಾಡಿದ್ದ ಸಂಸದ ಪ್ರತಾಪ್ ಸಿಂಹ ಪುನೀತ್ ಹೆಸರಿನ ಆಸ್ಪತ್ರೆ ಬಗ್ಗೆ ಪ್ರಸ್ತಾಪಿಸಿದ್ದರು.
- ಇದು ತುಂಬಾ ದೊಡ್ಡ ತಪ್ಪು ಮಾಡ್ಬೇಡಿ ಎಂದು ನಟ ಪ್ರಕಾಶ್ ರಾಜ್ ಪ್ರತಾಪ್ ಸಿಂಹ ಅವರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.