ಆ್ಯಪ್ನಗರ

ಜುಲೈ 31ಕ್ಕೆ ಸ್ಪೀಕರ್‌ ಚುನಾವಣೆ: ಕೆಜೆ ಬೋಪಯ್ಯ ಆಯ್ಕೆ ಸಾಧ್ಯತೆ

ಕರ್ನಾಟಕ ವಿಧಾನಸಭಾ ಸ್ಪೀಕರ್‌ ಸ್ಥಾನಕ್ಕೆ ರಮೇಶ್‌ ಕುಮಾರ್‌ ರಾಜೀನಾಮೆ ನೀಡಿದ್ದಾರೆ. ಈಗ ನೂತನ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ. ಆದರೆ ಬಹುತೇಕ ಸರ್ವಾನುಮತದ ಆಯ್ಕೆಯಾಗುವ ನಿರೀಕ್ಷೆ ಹೆಚ್ಚಿದೆ.

Vijaya Karnataka Web 29 Jul 2019, 7:38 pm
ಬೆಂಗಳೂರು: ವಿಧಾನಸಭಾ ಸ್ಪೀಕರ್‌ ಚುನಾವಣೆ ಜುಲೈ 31ರಂದು ನಡೆಯಲಿದೆ.
Vijaya Karnataka Web ವಿಧಾನಸೌಧ
ವಿಧಾನಸೌಧ


ಕೆಆರ್‌ ರಮೇಶ್‌ ಕುಮಾರ್‌ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನ ತುಂಬಲು ಚುನಾವಣೆ ನಿಗದಿಪಡಿಸಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ.

ಸೋಮವಾರದಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಮಂಗಳವಾರ ಬೆಳಗ್ಗೆ 12 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ವಿಧಾನಸಭಾ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಬಹುದು ಎಂದು ಉಪ ಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಘೋಷಿಸಿದರು.

ಬುಧವಾರ ಬೆಳಗ್ಗೆ 11 ಗಂಟೆಗೆ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ.

ಯಡಿಯೂರಪ್ಪ ವಿಶ್ವಾಸಮತಯಾಚನೆ, ಧನ ವಿನಿಯೋಗ ವಿಧೇಯಕ ಅಂಗೀಕಾರಗೊಳ್ಳುತ್ತಿದ್ದಂತೆ ಕೆಆರ್‌ ರಮೇಶ್‌ ಕುಮಾರ್‌ ಸ್ಪೀಕರ್‌ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ನೂತನ ಸ್ಪೀಕರ್‌ ಆಗಿ ಬಿಜೆಪಿಯ ಕೆಜೆ ಬೋಪಯ್ಯ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಜಗದೀಶ್‌ ಶೆಟ್ಟರ್‌, ವಿಶ್ವೇಶ್ವರ ಹೆಗಡೆ ಕಾಗೇರಿ, ಸುರೇಶ್‌ ಕುಮಾರ್‌ ಹೆಸರು ಈ ರೇಸ್‌ನಲ್ಲಿ ಕೇಳಿಬಂದಿದೆ. ಆದರೆ ಬುಧವಾರ ಇದು ಅಂತಿಮ ಆಯ್ಕೆಯಾಗುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ