ಆ್ಯಪ್ನಗರ

ಕರ್ನಾಟಕ ಬಂದ್: ಬೆಂಗಳೂರು ಸೇರಿ ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ?

ಈ ಬಾರಿ ಶಾಲೆ-ಕಾಲೇಜುಗಳಿಗೆ ರಜೆ ಇರುವುದರಿಂದ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಬಂದ್‌ ಬಿಸಿ ಇಲ್ಲ. ಬಂದ್‌ಗೆ ಹಲವು ರೈತ ಪರ ಸಂಘಟನೆಗಳ ಜತೆಗೆ ದಲಿತ, ಕನ್ನಡಪರ, ಕಾರ್ಮಿಕ ಸಂಘಟನೆಗಳು ಹಾಗೂ ಪ್ರತಿಪಕ್ಷಗಳು ಬೆಂಬಲ ಸೂಚಿಸಿವೆ. ಹಾಗಾದರೆ ಕರ್ನಾಟಕ ಬಂದ್‌ ಹಿನ್ನೆಲೆ ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ?

Vijaya Karnataka 28 Sep 2020, 8:42 am
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಕೃಷಿ ಕಾಯಿದೆಗಳು ರೈತ ವಿರೋಧಿ ಎಂದು ಆಪಾದಿಸಿ ರೈತಪರ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಆದರೆ ಈ ಬಾರಿ ಶಾಲೆ-ಕಾಲೇಜುಗಳಿಗೆ ರಜೆ ಇರುವುದರಿಂದ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಬಂದ್‌ ಬಿಸಿ ಇಲ್ಲ. ಬಂದ್‌ಗೆ ಹಲವು ರೈತ ಪರ ಸಂಘಟನೆಗಳ ಜತೆಗೆ ದಲಿತ, ಕನ್ನಡಪರ, ಕಾರ್ಮಿಕ ಸಂಘಟನೆಗಳು ಹಾಗೂ ಪ್ರತಿಪಕ್ಷಗಳು ಬೆಂಬಲ ಸೂಚಿಸಿವೆ. ಹಾಗಾದರೆ ಕರ್ನಾಟಕ ಬಂದ್‌ ಹಿನ್ನೆಲೆ ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ?
Vijaya Karnataka Web Farmers protest
ಸಾಂದರ್ಭಿಕ ಚಿತ್ರ


ಹೋಟೆಲ್‌ ಬಂದ್‌ ಇಲ್ಲ

ಹೋಟೆಲ್‌ ಮಾಲೀಕರ ಸಂಘ, ಆಟೋ ಮತ್ತು ಟ್ಯಾಕ್ಸಿ ಯೂನಿಯನ್‌, ಪೆಟ್ರೋಲ್‌ ಬಂಕ್‌ ಮಾಲೀಕರು, ಖಾಸಗಿ ಬಸ್‌ ಮಾಲೀಕರ ಸಂಘ ಹಾಗೂ ಕೆಲ ಸಂಘಟನೆಗಳು ಬಂದ್‌ ಮಾಡದೆ ನೈತಿಕ ಬೆಂಬಲ ಕೊಡುವುದಾಗಿ ತಿಳಿಸಿದ್ದಾರೆ.

ಏನೇನು ಇರುತ್ತವೆ?

ದಿನಪತ್ರಿಕೆ, ಹಾಲು, ಮೆಡಿಕಲ್‌ ಸ್ಟೋರ್ಸ್‌, ಆಸ್ಪತ್ರೆ, ಹೋಟೆಲ್, ಪೆಟ್ರೋಲ್‌ ಬಂಕ್‌, ರೈಲು, ವಿಮಾನ ಸಂಚಾರ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಇರಲಿದೆ.

ಏನೇನು ಇರದು?

ಓಲಾ-ಉಬರ್‌ ವಾಹನ, ಲಾರಿಗಳು. ಪ್ರತಿಭಟನೆಯ ತೀವ್ರತೆ ಆಧರಿಸಿ ಮಾರುಕಟ್ಟೆಗಳು, ಕೆಲವು ಅಂಗಡಿ ಮುಂಗಟ್ಟು, ಮಾಲ್‌ ಬಂದ್‌ ಆಗುವ ಸಾಧ್ಯತೆ ಇದೆ.

ಭಾಗಶಃ ವ್ಯತ್ಯಯ

ಖಾಸಗಿ ಬಸ್‌, ಆಟೋ, ಏರ್‌ಪೋರ್ಟ್‌ ಟ್ಯಾಕ್ಸಿ

ಟೌನ್‌ ಹಾಲ್‌ನಿಂದ ಪ್ರತಿಭಟನೆ

ರೈತ, ದಲಿತ, ಕಾರ್ಮಿಕ ಸಂಘದ ಐಕ್ಯ ಹೋರಾಟ ಸಮಿತಿ ಸೇರಿದಂತೆ ನೂರಾರು ರೈತಪರ ಸಂಘಟನೆಗಳು ಬೆಳಗ್ಗೆ 11 ಗಂಟೆಗೆ ಟೌನ್‌ಹಾಲ್‌ನಿಂದ ಕೆ.ಜಿ. ರಸ್ತೆ, ಮೈಸೂರು ಬ್ಯಾಂಕ್‌ ವೃತ್ತದ ಮಾರ್ಗವಾಗಿ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸಲಿವೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ರಾಜ್ಯದಲ್ಲಿಂದು ಹೆಚ್ಚಿದ ಬಂದ್‌ ಕಾವು: ಕೇಂದ್ರ, ರಾಜ್ಯದ ಕೃಷಿ ನೀತಿ ವಿರೋಧಿಸಿ ಪ್ರತಿಭಟನೆ!

"ಜಿಲ್ಲಾ ಕೇಂದ್ರಗಳು, ತಾಲೂಕು ಕೇಂದ್ರಗಳು ಮತ್ತು ಪ್ರತಿ ಹಳ್ಳಿಹಳ್ಳಿಯಿಂದಲೂ ರೈತರು ಕರ್ನಾಟಕ ಬಂದ್‌ನಲ್ಲಿ ಭಾಗವಹಿಸಲಿದ್ದಾರೆ. ಗ್ರಾಮೀಣ ಭಾಗದಲ್ಲೂ ರೈತರು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆದು ಬಂದ್‌ ಮಾಡಲಿದ್ದಾರೆ," ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದ್ದಾರೆ.

ಸಿಎಂ ಹೇಳಿರುವುದೇನು?

ರಾಜ್ಯದಲ್ಲಿ ಬಂದ್‌ಗೆ ಅವಕಾಶವಿಲ್ಲ. ಬಂದ್‌ ಹೆಸರಿನಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡಿದರೆ ಅವರಿಂದಲೇ ವಸೂಲಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಇನ್ನೊಂದೆಡೆ ಬಂದ್‌ ವಿರುದ್ಧ ಮಾತನಾಡಿರುವ ಕಂದಾಯ ಸಚಿವ ಆರ್‌ ಅಶೋಕ್‌ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಪ್ರದೇಶ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಸಚಿನ್‌ ಮೀಗಾ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ