ಬೆಂಗಳೂರು: ಮರಾಠ ಅಭಿವೃದ್ದಿ ನಿಗಮ ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸಿ ಕನ್ನಡ ಪರ ಸಂಘಟನೆಗಳು ನೀಡಿದ ಕರೆಗೆ ರಾಜ್ಯದಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ, ಸರಕಾರದ ವಿರುದ್ಧ ಅಕ್ರೋಶ ಭುಗಿಲೆದ್ದಿದೆ.
ಇನ್ನು ಪ್ರತಿಭಟನೆ ನಡೆಸುತ್ತಿದ್ದ ಅನೇಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆಯು ನಡೆದಿದೆ ಕೊರೊನಾ ನಡುವೆ ಇದೀಗ ಪ್ರತಿಭಟನೆ ನಡೆಯುತ್ತಿರುವುದರಿಂದ, ಕೊರೊನಾ ನಿಯಮಗಳನ್ನು ಪಾಲಿಸುವುದು ಮುಖ್ಯವಾಗಿರುತ್ತದೆ. ಆದರೆ ಎಲ್ಲೂ ಕೂಡ ಕೊರೊನಾ ನಿಯಮ ಪಾಲನೆಯಾಗದೆ ಇರುವುದು ಪ್ರತಿಭಟನೆಗಳನ್ನು ಗಮನಿಸಿದಾಗ ಕಂಡು ಬರುತ್ತಿದೆ. ಹಲವು ಪ್ರತಿಭಟನೆ, ರಸ್ತೆ ತಡೆಯಲ್ಲಿ ಯಾರು ಕೂಡ ಮಾಸ್ಕ್ ಧರಿಸಿಲ್ಲ. ಅಲ್ಲದೆ ಸಾಮಾಜಿಕ ಅಂತರವೂ ಕಾಣಿಸಿಲ್ಲ. ಕೊರೊನಾ ನಿಯಮ ಸಂಪೂರ್ಣ ಗಾಳಿಗೆ ತೂರಲಾಗಿತ್ತು. ಹೀಗಾಗಿ ನೆಟ್ಟಿಗರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ!
ಬಂದ್ ಆಚರಿಸುವವರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್ ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರಕಾರಕ್ಕೆ ಶುಕ್ರವಾರ ಹೈ ಕೋರ್ಟ್ ನಿರ್ದೇಶನ ನೀಡಿತ್ತು. ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆಗೆ ತಿದ್ದುಪಡಿ ತಂದಿದೆ.
ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ: ವಾಟಾಳ್ ನಾಗರಾಜ್-ಕರವೇ ನಾರಾಯಣ ಗೌಡ-ಸಾರಾ ಗೋವಿಂದು ಪೊಲೀಸ್ ವಶಕ್ಕೆ!
ಆ ಪ್ರಕಾರ ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಹೈ ಕೋರ್ಟ್ ಹೇಳಿದೆ. ಹೀಗಾಗಿ ಇದೀಗ ಪ್ರತಿಭಟನೆ ಆಯೋಜಿಸಿದ ಆಯೋಜಕರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆಯಡಿಯಲ್ಲಿ ಪೊಲೀಸರು ಕೇಸ್ ದಾಖಲಿಸುವ ಸಾಧ್ಯತೆ ಇದೆ. ದಂಡ ಅಥವಾ ಶಿಕ್ಷೆ ನೀಡುವ ಅವಕಾಶ ಈ ಕಾನೂನಿಡಿಯಲ್ಲಿದೆ. ಇನ್ನೊಂದೆಡೆ ಕರ್ನಾಟಕ ಬಂದ್ಗೆ ಅನುಮತಿ ನೀಡಿಲ್ಲ, ಎಲ್ಲದರೂ ಪ್ರತಿಭಟನೆ ಹೆಸರಲ್ಲಿ ಜನರಿಗೆ, ವ್ಯಾಪಾರ, ವಹಿವಾಟಿಗೆ ತೊಂದರೆ ತಂದರೆ ಅಂತಹವರಿಗೆ ತಕ್ಕ ಕಾನೂನು ಪಾಠ ಕಲಿಸುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಸಿದ್ದರು.
ಇನ್ನು ಪ್ರತಿಭಟನೆ ನಡೆಸುತ್ತಿದ್ದ ಅನೇಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆಯು ನಡೆದಿದೆ ಕೊರೊನಾ ನಡುವೆ ಇದೀಗ ಪ್ರತಿಭಟನೆ ನಡೆಯುತ್ತಿರುವುದರಿಂದ, ಕೊರೊನಾ ನಿಯಮಗಳನ್ನು ಪಾಲಿಸುವುದು ಮುಖ್ಯವಾಗಿರುತ್ತದೆ. ಆದರೆ ಎಲ್ಲೂ ಕೂಡ ಕೊರೊನಾ ನಿಯಮ ಪಾಲನೆಯಾಗದೆ ಇರುವುದು ಪ್ರತಿಭಟನೆಗಳನ್ನು ಗಮನಿಸಿದಾಗ ಕಂಡು ಬರುತ್ತಿದೆ. ಹಲವು ಪ್ರತಿಭಟನೆ, ರಸ್ತೆ ತಡೆಯಲ್ಲಿ ಯಾರು ಕೂಡ ಮಾಸ್ಕ್ ಧರಿಸಿಲ್ಲ. ಅಲ್ಲದೆ ಸಾಮಾಜಿಕ ಅಂತರವೂ ಕಾಣಿಸಿಲ್ಲ. ಕೊರೊನಾ ನಿಯಮ ಸಂಪೂರ್ಣ ಗಾಳಿಗೆ ತೂರಲಾಗಿತ್ತು. ಹೀಗಾಗಿ ನೆಟ್ಟಿಗರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ!
ಬಂದ್ ಆಚರಿಸುವವರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್ ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರಕಾರಕ್ಕೆ ಶುಕ್ರವಾರ ಹೈ ಕೋರ್ಟ್ ನಿರ್ದೇಶನ ನೀಡಿತ್ತು. ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆಗೆ ತಿದ್ದುಪಡಿ ತಂದಿದೆ.
ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ: ವಾಟಾಳ್ ನಾಗರಾಜ್-ಕರವೇ ನಾರಾಯಣ ಗೌಡ-ಸಾರಾ ಗೋವಿಂದು ಪೊಲೀಸ್ ವಶಕ್ಕೆ!
ಆ ಪ್ರಕಾರ ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಹೈ ಕೋರ್ಟ್ ಹೇಳಿದೆ. ಹೀಗಾಗಿ ಇದೀಗ ಪ್ರತಿಭಟನೆ ಆಯೋಜಿಸಿದ ಆಯೋಜಕರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆಯಡಿಯಲ್ಲಿ ಪೊಲೀಸರು ಕೇಸ್ ದಾಖಲಿಸುವ ಸಾಧ್ಯತೆ ಇದೆ. ದಂಡ ಅಥವಾ ಶಿಕ್ಷೆ ನೀಡುವ ಅವಕಾಶ ಈ ಕಾನೂನಿಡಿಯಲ್ಲಿದೆ. ಇನ್ನೊಂದೆಡೆ ಕರ್ನಾಟಕ ಬಂದ್ಗೆ ಅನುಮತಿ ನೀಡಿಲ್ಲ, ಎಲ್ಲದರೂ ಪ್ರತಿಭಟನೆ ಹೆಸರಲ್ಲಿ ಜನರಿಗೆ, ವ್ಯಾಪಾರ, ವಹಿವಾಟಿಗೆ ತೊಂದರೆ ತಂದರೆ ಅಂತಹವರಿಗೆ ತಕ್ಕ ಕಾನೂನು ಪಾಠ ಕಲಿಸುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಸಿದ್ದರು.