ಆ್ಯಪ್ನಗರ

ಸಂಪುಟ ಸಂಕಷ್ಟ: ದೆಹಲಿ ಯಾತ್ರೆಗೆ ಮುಂದಾದ ಅತೃಪ್ತರು

ರಾಜ್ಯ ಬಿಜೆಪಿಯಲ್ಲಿ ಅತೃಪ್ತರ ಬಂಡಾಯ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸ್ಥಾನ ಸೇರಿದಂತೆ ಇನ್ನಿತರ ವಿಚಾರಗಳಿಂದ ಅತೃಪ್ತರಾಗಿರುವ ಶಾಸಕರು ಇದೀಗ ದೆಹಲಿ ಯಾತ್ರೆಗೆ ಮುಂದಾಗಿದ್ದಾರೆ. ಈ ಕುರಿತಾದ ಮತ್ತಷ್ಟು ಮಾಹಿತಿ ಇಲ್ಲಿದೆ.

Vijaya Karnataka Web 18 Jan 2021, 9:26 am
ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡದಂತ್ತಿದ್ದ ಅಸಮಾಧಾನ ಸ್ಫೋಟಗೊಂಡಿದೆ. ರಾಜ್ಯಕ್ಕೆ ಅಮಿತ್ ಶಾ ಆಗಮಿಸಿದ ಸಂದರ್ಭದಲ್ಲಿ ದೂರನ್ನು ನೀಡಲು ಮುಂದಾಗಿದ್ದ ಕೆಲ ಶಾಸಕರು ಇದೀಗ ದೆಹಲಿ ಯಾತ್ರೆಗೆ ಮುಂದಾಗಿದ್ದಾರೆ.
Vijaya Karnataka Web bjp


ಶಾಸಕರಾದ ಎಂಪಿ ರೇಣುಕಾಚಾರ್ಯ, ಅರವಿಂದ್ ಬೆಲ್ಲದ್ ಸೇರಿದಂತೆ ಕೆಲವು ಅತೃಪ್ತ ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಅತೃಪ್ತಿಯನ್ನು ಹೊರಹಾಕಲಿದ್ದಾರೆ. ಈಗಾಗಲೇ ಹಲವು ಶಾಸಕರು ತಮ್ಮ ನೋವನ್ನು ಬಹಿರಂಗವಾಗಿ ತೋಡಿಕೊಂಡಿದ್ದು ಇದೀಗ ದೆಹಲಿ ಯಾತ್ರೆಗೆ ಸಜ್ಜಾಗುತ್ತಿದ್ದಾರೆ.

ಜೆಡಿಎಸ್‌ ಜತೆ ಮೈತ್ರಿ ಪ್ರಸ್ತಾಪ ಇಲ್ಲ ಎಂದ್ರಾ ಅಮಿತ್‌ ಶಾ?

ಕೆಲವು ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ನೋವಿನ ಜೊತೆಗೆ ನಾಯಕತ್ವದ ಬಗ್ಗೆ ಕೂಡಾ ವರಿಷ್ಠರಲ್ಲಿ ದೂರು ಕೊಡುವ ಉದ್ದೇಶವಿದೆ. ಮತ್ತೆ ಕೆಲವರು ಬಿಎಸ್‌ವೈ ವಿರುದ್ಧ ನಡೆಯುತ್ತಿರುವ ಪಿತೂರಿಯ ಬಗ್ಗೆ ವರಿಷ್ಠರ ಗಮನ ಸೆಳೆಯುವ ಉದ್ದೇಶ ಹೊಂದಿದ್ದಾರೆ.

ಸಿ.ಡಿ ವಿಚಾರವಾಗಿ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತಿದೆ. ಇದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪರಿಣಾಮ ಬೀರಬಹುದು. ಪಕ್ಷದ ಶಾಸಕರೇ ಬಹಿರಂಗವಾಗಿ ಸರ್ಕಾರದ ಹಾಗೂ ಸಿಎಂ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಆದರೆ ಪಕ್ಷ ಅವರ ವಿರುದ್ಧ ಏನೂ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾದರೆ ತಪ್ಪು ಸಂದೇಶ ರವಾನೆ ಆಗುತ್ತದೆ ಎಂಬುವುದು ಬಿಎಸ್‌ವೈ ಪರ ಇರುವ ಶಾಸಕರ ವಾದ.

ಈ ನಿಟ್ಟಿನಲ್ಲಿ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವ ಮೂಲಕ ದೂರು ಕೊಡುವ ಯೋಚನೆಯಲ್ಲಿದ್ದಾರೆ. ಅಷ್ಟೇ ಅಲ್ಲದೆ ಸಿ.ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಿರುವುದು ಹಲವರು ಆಕ್ರೋಶಕ್ಕೆ ಕಾರಣವಾಗಿದ್ದು ಇದನ್ನು ಕೂಡಾ ವರಿಷ್ಠರ ಗಮನಕ್ಕೆ ತರಲಿದ್ದಾರೆ.

ರಾಜ್ಯಕ್ಕೆ ಶನಿವಾರ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಉದ್ದೇಶವನ್ನು ಅತೃಪ್ತರು ಹೊಂದಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಈ ನಿಟ್ಟಿನಲ್ಲಿ ದೆಹಲಿಗೆ ತೆರಳಿ ತಮ್ಮ ಅತೃಪ್ತಿಯನ್ನು ಹೊರಹಾಕುವುದು ಕೆಲವು ಶಾಸಕರು ಯೋಚನೆ ಆಗಿದೆ. ಎಂಪಿ ರೇಣುಕಾಚಾರ್ಯ, ಅರವಿಂದ್ ಬೆಲ್ಲದ್ ದೆಹಲಿ ಯಾತ್ರೆ ಫಿಕ್ಸ್ ಆಗಿದ್ದು ಇವರಿಗೆ ಮತ್ತಷ್ಟು ಶಾಸಕರು ಸಾಥ್ ನೀಡುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ