ಆ್ಯಪ್ನಗರ

ಮೇಕೆದಾಟು: ತಮಿಳುನಾಡು ಕ್ಯಾತೆಗೆ ಸೊಪ್ಪು ಹಾಕಬೇಕಾಗಿಲ್ಲ ಎಂದ ಸಿದ್ದರಾಮಯ್ಯ

ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡಿನ ಕ್ಯಾತೆಗೆ ಸೊಪ್ಪು ಹಾಕುವ ಅವಶ್ಯಕತೆ ಇಲ್ಲ. ಕೇಂದ್ರಕ್ಕೆ ರಾಜಕೀಯ ಇಚ್ಛಾಶಕ್ತಿ ಇರಬೇಕು. ಈ ಹಿಂದೆಯೇ ನಮಗೆ ಅನುಮತಿ ಕೊಡಬೇಕಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಅನುಮತಿ ಪಡೆಯುವುದಾಗಿ ಹೇಳಿದ್ದಾರೆ

Vijaya Karnataka Web 21 Mar 2022, 5:02 pm
ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸರಕಾರ ರಾಜಕೀಯ ಕಾರಣಕ್ಕೆ ಕ್ಯಾತೆ ಮಾಡುತ್ತಿದೆ. ತಮಿಳುನಾಡಿನ ಕ್ಯಾತೆಗೆ ಸೊಪ್ಪು ಹಾಕಬೇಕಾಗಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
Vijaya Karnataka Web ಸಿದ್ದರಾಮಯ್ಯ
ಸಿದ್ದರಾಮಯ್ಯ


ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಜಾರಿ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರದ ಬಗ್ಗೆ ಮಾತನಾಡಿ, ತಮಿಳುನಾಡು ಸರಕಾರ ರಾಜಕೀಯ ಕಾರಣಕ್ಕೆ ಕ್ಯಾತೆ ಮಾಡುತ್ತಿದೆ ಎಂದರು.

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆ ನಿರ್ಣಯ: ಎಚ್. ಕೆ. ಪಾಟೀಲ್ ಆಕ್ರೋಶ

ಕೇಂದ್ರ ಸರಕಾರ ಒಕ್ಕೂಟ ವ್ಯವಸ್ಥೆಯನ್ನು ಪಾಲನೆ ಮಾಡಬೇಕು. ಈಗಾಗಲೇ ಸುಪ್ರೀಂಕೋರ್ಟ್ ನೀರಿನ ಬಳಕೆ ಸಂಬಂಧ ತೀರ್ಪು ಕೊಟ್ಟಿದೆ. ತಮಿಳುನಾಡಿಗೆ ಹೆಚ್ಚುವರಿ ನೀರು ಹರಿದು ಹೋಗುತ್ತಿದೆ. ಹೀಗಿರುವಾಗ ಕೇಂದ್ರದ ಪರಿಸರ ಇಲಾಖೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂದು ಒತ್ತಾಯಿಸಿದರು.

ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡಿನ ಕ್ಯಾತೆಗೆ ಸೊಪ್ಪು ಹಾಕುವ ಅವಶ್ಯಕತೆ ಇಲ್ಲ. ಕೇಂದ್ರಕ್ಕೆ ರಾಜಕೀಯ ಇಚ್ಛಾಶಕ್ತಿ ಇರಬೇಕು. ಈ ಹಿಂದೆಯೇ ನಮಗೆ ಅನುಮತಿ ಕೊಡಬೇಕಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಅನುಮತಿ ಪಡೆಯುವುದಾಗಿ ಹೇಳಿದ್ದಾರೆ ಎಂದರು.

ಬಿಜೆಪಿ ವೋಟ್ ಬ್ಯಾಂಕ್ ಕಾರಣಕ್ಕೆ ನಾಟಕವಾಡುತ್ತಿದೆ. ರಾಜ್ಯದ ಬಿಜೆಪಿ ನಾಯಕರು ಕೂಡಲೇ ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 16/02/2018 ರಲ್ಲಿ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದೆ. ಒಂದು ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ನೀರು ತಮಿಳುನಾಡಿಗೆ ಬಿಡುವಂತೆ ಆದೇಶ ಮಾಡಿದೆ. ಇದರ ನಿರ್ವಹಣೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಸ್ತಿತ್ವದಲ್ಲಿದೆ. ಇಷ್ಟು ಪ್ರಮಾಣದ ನೀರು ಪಡೆಯುವುದು ಮಾತ್ರ ತಮಿಳುನಾಡಿಗಿರುವ ಹಕ್ಕು. ಈ ತೀರ್ಪು ಬಂದ ಮೇಲೆ ಸುಮಾರು 400 ಟಿಎಂಸಿಗೂ ಅಧಿಕ ನೀರು ಹೆಚ್ಚುವರಿಯಾಗಿ ತಮಿಳುನಾಡಿಗೆ ಹರಿದು ಹೋಗಿದೆ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ಪರಿಸರ ಅನುಮತಿ ಕೊಡಬೇಕು. ಇದು ನಮ್ಮ ಪಾಲಿನ ನೀರು, ವ್ಯರ್ಥವಾಗಿ ತಮಿಳುನಾಡಿಗೆ ಹೋಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಪಾವಗಡ ಅಪಘಾತದಲ್ಲಿ ಮೃತರ ಕುಟುಂಬಕ್ಕೆ 25 ಲಕ್ಷ, ಗಾಯಾಳುಗಳಿಗೆ 10 ಲಕ್ಷ ಪರಿಹಾರ ನೀಡಲು ಯು.ಟಿ ಖಾದರ್ ಆಗ್ರಹ

ಮೇಕೆದಾಟು ಯೋಜನೆ ಜಾರಿಗೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಪಕ್ಷಗಳ ಒಮ್ಮತದಿಂದ ನಿರ್ಣಯ ಅಂಗೀಕಾರ ಮಾಡಲಾಗಿದೆ. ರಾಜ್ಯದಲ್ಲಿ ಸರ್ವಪಕ್ಷಗಳ ಸಭೆಯ ಬೆನ್ನಲ್ಲೇ ತಮಿಳುನಾಡು ವಿಧಾನಸಭೆ ನಿರ್ಣಯ ಅಂಗೀಕಾರ ಮಾಡಿರುವುದು ಚರ್ಚೆಗೆ ಗ್ರಾಸವಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ