ಆ್ಯಪ್ನಗರ

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್ ಪಕ್ಷ ಎಂದಾದರೂ ಗೌರವ ನೀಡಿದೆಯೇ? ಬಿಜೆಪಿ ಪ್ರಶ್ನೆ

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್ ಪಕ್ಷ ಎಂದಾದರೂ ಗೌರವ ನೀಡಿದೆಯೇ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಗಣರಾಜ್ಯೋತ್ಸವದ ದಿನದಂದು ಬಿಜೆಪಿ ಟ್ವೀಟ್ ಮಾಡಿ ಕಾಂಗ್ರೆಸ್‌ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದೆ.

Vijaya Karnataka Web 26 Jan 2022, 5:42 pm
ಬೆಂಗಳೂರು: ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್ ಪಕ್ಷ ಎಂದಾದರೂ ಗೌರವ ನೀಡಿದೆಯೇ? ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ,ದಲಿತರು ಹಾಗೂ ಹಿಂದುಳಿದ ವರ್ಗದವರಿಗೆ ಕಾಂಗ್ರೆಸ್ ಪಕ್ಷ ಮಾಡಿದ ನಿರಂತರ ದ್ರೋಹಗಳ‌ ಬಗ್ಗೆ ಪಟ್ಟಿ ಮಾಡಿದರೆ ಅವುಗಳ ಸಂಖ್ಯೆ ಅಗಣಿತ ಎಂದಿದೆ.
Vijaya Karnataka Web karnataka bjp tweet on congress
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್ ಪಕ್ಷ ಎಂದಾದರೂ ಗೌರವ ನೀಡಿದೆಯೇ? ಬಿಜೆಪಿ ಪ್ರಶ್ನೆ


ಪದ್ಮ ಭೂಷಣ ಪ್ರಶಸ್ತಿ ತಿರಸ್ಕರಿಸಿದ ಪಶ್ಚಿಮ ಬಂಗಾಳದ ಕಮ್ಯುನಿಷ್ಟ್ ನಾಯಕ ಬುದ್ಧದೇವ್‌ ಭಟ್ಟಾಚಾರ್ಯ


ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿದ ಐತಿಹಾಸಿಕ ಅನ್ಯಾಯ ನೆನಪಿಸಬೇಕೇ? ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್ ಪಕ್ಷ ಎಂದಾದರೂ ಗೌರವ ನೀಡಿದೆಯೇ? ನೀಡಿದ್ದರೆ ಕರ್ನಾಟಕ ಎಂದೋ ದಲಿತ ಮುಖ್ಯಮಂತ್ರಿಯನ್ನು ಕಾಣುತ್ತಿತ್ತು. ಆದರೆ ಕಾಂಗ್ರೆಸ್ ಈ ವಿಚಾರದಲ್ಲಿ ಸಂವಿಧಾನಕ್ಕೆ ದ್ರೋಹ ಎಸಗುತ್ತಲೇ ಬಂದಿದೆ ಎಂದು ಆರೋಪ ಮಾಡಿದೆ.

ನೆಹರೂ ಅವರು ಎಲ್ಲಾ ದೇಶಗಳ ಜೊತೆ ಉತ್ತಮ ಬಾಂಧವ್ಯ ಇಟ್ಕೊಂಡಿದ್ದರು. ಆದ್ರೆ ಇಂದು ನಮ್ಮ ದೇಶದ ಜೊತೆ ಬಾಂಧವ್ಯ ಕಡಿಮೆಯಾಗುತ್ತಿದೆ ನಮ್ಮ ರಾಷ್ಟ್ರದ ಗಡಿಯನ್ನ ಕಾಪಾಡಿಕೊಳ್ಳಲು ಆಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪ ಮಾಡಿದ್ದರು.

ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕೆ


ಪಿಎಸ್‌ಐ ನೇಮಕಾತಿಯಲ್ಲಿ ಭಾರಿ ಅಕ್ರಮವಾಗಿದೆ ಎಂದು ಹಲವು ಅಭ್ಯರ್ಥಿಗಳು ದೂರಿದ್ದಾರೆ. ಈ 40% ಸರ್ಕಾರದಲ್ಲಿ ಎಲ್ಲೆದರಲ್ಲೂ ಭ್ರಷ್ಟಾಚಾರ ಕೇಳಿಬರುತ್ತಿದೆ.

ಇಷ್ಟೆಲ್ಲಾ ನಡೆದರೂ ಗೃಹಮಂತ್ರಿಗಳಿಗೆ ಮಾಹಿತಿಯೇ ಇಲ್ಲವಂತೆ! ಎಂದು ಕಾಂಗ್ರೆಸ್ ಕಿಡಿಕಾರಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ, ಇದು ನಿಮ್ಮ ನಿರ್ಲಕ್ಷ್ಯವೇ ಅಥವಾ ಅಕ್ರಮದಲ್ಲಿ ತಮ್ಮದೂ ಪಾಲಿದೆಯೇ? ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ