ಆ್ಯಪ್ನಗರ

ನಿಮ್ಮ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿದೆ! ಸಿದ್ದುಗೆ ಬಿಜೆಪಿ ಗುದ್ದು

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಡುವಿನ ವಾಕ್ಷಮರ ತೀವ್ರಗೊಂಡಿದೆ. ನಳಿನ್ ಕುಮಾರ್ ಕಟೀಲ್ ಕಾಡು ಮನುಷ್ಯ ಎಂದು ಸಿದ್ದರಾಮಯ್ಯ ಅಂದಿದ್ದಕ್ಕೆ ಬಿಜೆಪಿ ಕೊಟ್ಟ ಉತ್ತರ ಹೀಗಿದೆ.

Vijaya Karnataka Web 22 Oct 2020, 12:52 pm
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಅವರನ್ನು ಕಾಡು ಮನುಷ್ಯ ಎಂದು ಕರೆದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ. ನಿಮ್ಮ ಮಾತುಗಳೇ ನಿಮ್ಮ ಪಕ್ಷದ ಸಂಸ್ಕೃತಿಯನ್ನು ಬಿಂಬಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
Vijaya Karnataka Web Siddaramaiah


ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಓರ್ವ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಅವರನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ನಳಿನ್ ಕುಮಾರ್ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿರಲು ನಾಲಾಯಕ್! ಸಿದ್ದರಾಮಯ್ಯ ಕೆಂಡಾಮಂಡಲ


ಇದಕ್ಕೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ ರಾಜ್ಯ ಬಿಜೆಪಿ ಜನರ ಭಾವನೆಗೆ ಸ್ಪಂದಿಸದ ನಿಮ್ಮನ್ನು ಸ್ವಕ್ಷೇತ್ರ ಚಾಮುಂಡೇಶ್ವರಿಯ ಮತದಾರರು ʼಬೀದಿಯಲ್ಲಿ ಅಲೆಯುವಂತೆʼ ಮಾಡಿದ್ದಾರೆ ಎಂಬುದನ್ನು ಮರೆಯಬೇಡಿ. ಕಾಂಗ್ರೆಸ್‌ ಪಕ್ಷದಲ್ಲಿ ನಿಮ್ಮ ಸ್ಥಿತಿ ಉಗುರು ಮತ್ತು ಹಲ್ಲು ಇಲ್ಲದ ಹುಲಿಯ ಪರಿಸ್ಥಿತಿಯಂತಾಗಿದೆ.

ನಳಿನ್ ಕುಮಾರ್ ಕಟೀಲ್ ಕುರಿತಾಗಿ ನೀವು ಬಳಸುತ್ತಿರುವ ಪದಗಳೇ ಯಾರು ʼಕಾಡು ಮನುಷ್ಯʼ ಎಂಬುದನ್ನು ಸಾಬೀತು ಪಡಿಸುತ್ತಿದೆ. ಕಾಡುಮನುಷ್ಯ, ನಾಲಾಯಕ್‌, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದವ ಎಂಬ ನಿಮ್ಮ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ನೀವು ವಿದೂಷಕ ಇದ್ದ ಹಾಗೆ ಹಾಗಿದೆ! ಎಂದು ಖಡಕ್‌ ಆಗಿ ಉತ್ತರ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ