ಆ್ಯಪ್ನಗರ

ಮತ ನೀಡದಿದ್ದರೆ ಬಿಎಸ್‌ವೈ ಕೆನ್ನೆಗೆ ಹೊಡೆದಂತೆ: ಮಾಧುಸ್ವಾಮಿ

ವಿಜಯನಗರ ಕ್ಷೇತ್ರದಲ್ಲಿ ಮತ ಯಾಚನೆಯ ಸಂದರ್ಭ ಲಿಂಗಾಯತ ಸಮುದಾಯ ಬಿಜೆಪಿಗೆ ಮತ ನೀಡದಿದ್ದರೆ ಯಡಿಯೂರಪ್ಪ ಅವರ ಕೆನ್ನೆಗೆ ಹೊಡೆದಂತೆ ಎಂಬ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ.

Vijaya Karnataka Web 4 Dec 2019, 10:56 am
ಬೆಂಗಳೂರು: 'ಲಿಂಗಾಯತ ಸಮುದಾಯ ಬಿಜೆಪಿಗೆ ಮತ ನೀಡದಿದ್ದರೆ ಯಡಿಯೂರಪ್ಪ ಅವರ ಕೆನ್ನೆಗೆ ಹೊಡೆದಂತೆ' ಎಂದು ಜಾತಿ ಆಧಾರದ ಮೇಲೆ ಮತಯಾಚಿಸಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧು ಸ್ವಾಮಿ ವಿರುದ್ಧ ಕಾಂಗ್ರೆಸ್‌ ಪಕ್ಷ ಆಯೋಗಕ್ಕೆ ದೂರು ಸಲ್ಲಿಸಿದೆ. ಈ ಸಂಬಂಧ ಮೇಲ್ಮನೆ ಸದಸ್ಯ ಪ್ರಕಾಶ್‌ ರಾಥೋಡ್‌ ನೇತೃತ್ವದ ಕಾಂಗ್ರೆಸ್‌ ನಿಯೋಗ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.
Vijaya Karnataka Web J C Madhuswamy


''ಧರ್ಮ ಮತ್ತು ಜಾತಿ ಆಧಾರದ ಮೇಲೆ ಮತ ಯಾಚಿಸುವುದು ಕಾನೂನುಬಾಹಿರ. ಆದರೆ, ಕಾನೂನು ಸಚಿವ ಎಂಬುದನ್ನೂ ಮರೆತು ಮಾಧುಸ್ವಾಮಿ ಅವರು ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಜಾತಿ ಆಧಾರದಲ್ಲಿಮತ ಯಾಚಿಸಿದ್ದು, ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಜರುಗಿಸಬೇಕು'' ಎಂದು ಕಾಂಗ್ರೆಸ್‌ ನಿಯೋಗ ಆಗ್ರಹಿಸಿತು.

ಜೆಡಿಎಸ್‌-ಕಾಂಗ್ರೆಸ್‌ ಸರಕಾರದ ಪತನಕ್ಕೆ ನಾಂದಿ ಹಾಡಿದ ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ನಡೆದಿದ್ದು, ಕದನ ಕುತೂಹಲ ಕೆರಳಿಸಿದೆ.

ಹನಿಟ್ರ್ಯಾಪ್‌ ಕೇಸ್‌: 'ಮೋಸ'ಕ್ಕೊಳಗಾದ ಯಾವೊಬ್ಬ ಶಾಸಕನೂ ದೂರು ಕೊಡೋಕೆ ಬಂದಿಲ್ಲ!

ಹೊಸಪೇಟೆ ಕೇಂದ್ರವಾಗಿಟ್ಟುಕೊಂಡು ನೂತನ ವಿಜಯನಗರ ಜಿಲ್ಲೆ ರಚಿಸುವಂತೆ ಆಗ್ರಹಿಸಿ ಹಾಗೂ ಜಿಂದಾಲ್‌ ಕಂಪನಿಗೆ ಭೂಮಿ ಪರಭಾರೆ ವಿರೋಧಿಸಿ, ಕಾಂಗ್ರೆಸ್‌ನಲ್ಲಿದ್ದ ಆನಂದ್‌ ಸಿಂಗ್‌ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಕ್ಷೇತ್ರದಲ್ಲಿ ಉಪಚುನಾವಣೆ ಎದುರಾಗಲು ಕಾರಣರಾಗಿದ್ದಾರೆ. ಇದೀಗ ಬಿಜೆಪಿ ಅಭ್ಯರ್ಥಿಯಾಗಿ ಆನಂದ್‌ ಸಿಂಗ್‌, ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಜಮನೆತನದ ವೆಂಕಟರಾವ್‌ ಘೋರ್ಪಡೆ, ಜೆಡಿಎಸ್‌ ಅಭ್ಯರ್ಥಿಯಾಗಿ ಎನ್‌.ಎಂ.ನಬಿ ಸೇರಿ ಒಟ್ಟು 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ವಿಜಯನಗರ ಉಪ ಚುನಾವಣೆ: ಕೈ ಬಿಟ್ಟು ಕಮಲ ಮುಡಿದ ಆನಂದ್‌ ಸಿಂಗ್‌ಗೆ ಬಂಡಾಯದ ಹೊಡೆತ, ಸಹೋದರನ ಸವಾಲು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ