ಆ್ಯಪ್ನಗರ

ನನ್ನ‘ಎದೆ ಬಗೆದರೆ’ ಸಿದ್ದರಾಮಯ್ಯ ಇದ್ದಾರೆ ಎಂದಿದ್ದ ಎಂಟಿಬಿ ಪಾಲಿಗಿಂದು ಸಿದ್ದು ‘ದ್ರೋಹಿಯಂತೆ’!

ನನ್ನ ಎದೆಬಗೆದರೆ ಸಿದ್ದರಾಮಯ್ಯ ಕುರಿತಾಗಿ ಜಪ ಮಾಡುವುದು ಕಾಣಿಸುತ್ತದೆ ಎಂದು ಹಾಡಿ ಹೊಗಳುವ ಮೂಲಕ ಸುದ್ದಿಯಾಗಿದ್ದ ಎಂಟಿಬಿ ನಾಗರಾಜ್ ಇದೀಗ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

Vijaya Karnataka Web 17 Nov 2019, 5:53 pm
ಬೆಂಗಳೂರು: ನನ್ನ ಎದೆ ಬಗೆದರೆ ಸಿದ್ದರಾಮಯ್ಯ ಇದ್ದಾರೆ ಎಂದು ಡೈಲಾಗ್ ಹೊಡೆದು ಸುದ್ದಿಯಾಗಿದ್ದ ಅನರ್ಹ ಶಾಸಕ ಹಾಗೂ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಪಾಲಿಗೆ ಇಂದು ಸಿದ್ದರಾಮಯ್ಯ ದ್ರೋಹಿಯಂತೆ. ಹೌದು, ಬೆಂಗಳೂರಿನಲ್ಲಿ ಮಾತನಾಡಿದ ಅವರು ಒಂದು ಕಾಲದ ಆಪ್ತ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Vijaya Karnataka Web karnataka by election mtb nagaraj slams at siddaramaiah
ನನ್ನ‘ಎದೆ ಬಗೆದರೆ’ ಸಿದ್ದರಾಮಯ್ಯ ಇದ್ದಾರೆ ಎಂದಿದ್ದ ಎಂಟಿಬಿ ಪಾಲಿಗಿಂದು ಸಿದ್ದು ‘ದ್ರೋಹಿಯಂತೆ’!


ಬಿಜೆಪಿ ಹಾಗೂ ಅನರ್ಹರನ್ನು ಸೋಲಿಸುವುದು ನಮ್ಮ ಗುರಿ: ಸಿದ್ದರಾಮಯ್ಯ

ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಎಂಟಿಬಿ ನಾಗರಾಜ್ ಅವರನ್ನು ಉಪಚುನಾವಣೆಯಲ್ಲಿ ಸೋಲಿಸಲು ಸಿದ್ದರಾಮಯ್ಯ ಪಣತೊಟ್ಟಿದ್ದಾರೆ. ಇದಕ್ಕಾಗಿ ತನ್ನ ಶಿಷ್ಯ ಶಾಸಕ ಬೈರತಿ ಸುರೇಶ್ ಪತ್ನಿ ಪದ್ಮಾವತಿ ಅವರನ್ನು ಕಣಕ್ಕಿಳಿಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಮುಖಂಡರು ಎಂಟಿಬಿ ವಿರುದ್ಧ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಎಂಟಿಬಿ ನಾಗರಾಜ್ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ಸಿದ್ದರಾಮಯ್ಯ ದ್ರೋಹಿಯಾಗಿದ್ದು ಕುರುಬ ಸಮುದಾಯಕ್ಕೆ ದ್ರೋಹ ಮಾಡಿದ್ದಾರೆ. ಐದು ವರ್ಷ ಸಿಎಂ ಆಗಿದ್ದಾಗಲೂ ಕುರುಬ ಸಮುದಾಯದ ಯಾರನ್ನೂ ಮಂತ್ರಿ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷವನ್ನು ಸಿದ್ದರಾಮಯ್ಯ ಕಟ್ಟಿಲ್ಲ. ಅವರು ಜೆಡಿಎಸ್ ಮೂಲದಿಂದ ಬಂ ದವರು. ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಸಿದ್ದರಾಮಯ್ಯ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಬಂದರು.

ನಾವು ಕಾಂಗ್ರೆಸ್ ಪಕ್ಷಕ್ಕೆ ಹಣ ಸುರಿದು ಪಕ್ಷ ಕಟ್ಟಿದ್ದೇವೆ. ಸಿದ್ದರಾಮಯ್ಯ ಬಾದಾಮಿ ಚುನಾವಣೆಯಲ್ಲಿ ನನ್ನಿಂದ ದುಡ್ಡು ತೆಗೊಂಡು ವಾಪಸ್ ಕೊಟ್ಟಿಲ್ಲ. ಈ ಕುರಿತಾಗಿ ನನ್ನ ಬಳಿ ದಾಖಲೆಗಳಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕೆಲ ತಿಂಗಳ ಹಿಂದೆ ನೈಸ್ ರಸ್ತೆಯ ಸೋಂಪುರ ಗೇಟ್ ಸಮೀಪದ ಜಟ್ಟಿಗರಹಳ್ಳಿಯಲ್ಲಿ ನಡೆದ ನೂತನ ಕನಕ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನನ್ನ ಎದೆ ಬಗೆದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಇರುತ್ತಾರೆ. ಹನುಮಂತನ ಎದೆ ಬಗೆದರೆ ಹೇಗೆ ರಾಮ ಕಾಣುತ್ತಾನೋ ಹಾಗೇ ನನ್ನ ಎದೆ ಬಗೆದರೆ ಸಿದ್ದರಾಮಯ್ಯ ಜಪ ಕಾಣಿಸುತ್ತದೆ. ನಾನು ಯಾವಾಗಲೂ ಸಿದ್ದರಾಮಯ್ಯ ಅವರ ಜಪ ಮಾಡುತ್ತೇನೆ ಎಂದು ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ