ಆ್ಯಪ್ನಗರ

ರಾಮನಗರಕ್ಕೆ ಚಂದ್ರಶೇಖರ್‌ ಬಿಜೆಪಿ ಅಭ್ಯರ್ಥಿ, ಸೋಮವಾರ ನಾಮಪತ್ರ ಸಲ್ಲಿಕೆ

ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್‌, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹಾಗೂ ಎಲ್‌. ಚಂದ್ರಶೇಖರ್‌ ಅವರ ನಡುವೆ ಪೈಪೋಟಿ ನಡೆದಿತ್ತು. ಯೋಗೇಶ್ವರ್‌ ಅವರು ಸ್ಪರ್ಧೆಗೆ ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಅಂತಿಮವಾಗಿ ರುದ್ರೇಶ್‌ ಹಾಗೂ ಚಂದ್ರಶೇಖರ್‌ ಹೆಸರು ಚಲಾವಣೆಯಲ್ಲಿದ್ದವು.

Vijaya Karnataka Web 13 Oct 2018, 10:29 pm
ಬೆಂಗಳೂರು: ರಾಮನಗರ ವಿಧಾನ ಸಭೆ ಕ್ಷೇತ್ರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಎಲ್‌. ಚಂದ್ರಶೇಖರ್‌ ಹೆಸರು ಅಂತಿಮವಾಗಿದ್ದು, ಸೋಮವಾರ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
Vijaya Karnataka Web Kolkata: BJP workers shout slogans during BJP President Amit Shahs public rally...


ವಿಧಾನ ಪರಿಷತ್‌ ಸದಸ್ಯ ಸಿಎಂ ಲಿಂಗಪ್ಪ ಅವರ ಪುತ್ರರಾಗಿರುವ ಚಂದ್ರಶೇಖರ್‌ ಇತ್ತೀಚೆಗೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್‌, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹಾಗೂ ಎಲ್‌. ಚಂದ್ರಶೇಖರ್‌ ಅವರ ನಡುವೆ ಪೈಪೋಟಿ ನಡೆದಿತ್ತು. ಯೋಗೇಶ್ವರ್‌ ಅವರು ಸ್ಪರ್ಧೆಗೆ ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಅಂತಿಮವಾಗಿ ರುದ್ರೇಶ್‌ ಹಾಗೂ ಚಂದ್ರಶೇಖರ್‌ ಹೆಸರು ಚಲಾವಣೆಯಲ್ಲಿದ್ದವು.

ಅಂತಿಮವಾಗಿ ಚಂದ್ರಶೇಖರ್‌ ಟಿಕೆಟ್‌ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಡಿಯೂರಪ್ಪ ಅವರು ಶನಿವಾರ ರುದ್ರೇಶ್‌ ಕೈಗೆ ಬಿ ಫಾರಂ ನೀಡಿದ್ದು ಸೋಮವಾರ ನಾಮಪತ್ರ ಸಲ್ಲಿಸಲು ಚಂದ್ರಶೇಖರ್‌ಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ