ಆ್ಯಪ್ನಗರ

ಸಂಪುಟ ವಿಸ್ತರಣೆ ಕಗ್ಗಂಟು, ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ

ಸಚಿವ ಸಂಪುಟ ವಿಸ್ತರಣೆ ಕಗ್ಗಂಟು ಮುಂದುವರಿದಿದ್ದು ಸಚಿವಾಕಾಂಕ್ಷಿಗಳಲ್ಲಿ ಮತ್ತೆ ನಿರಾಸೆ ಮೂಡಿದೆ. ಬಿಎಸ್‌ ಯಡಿಯೂರಪ್ಪ ಯೋಚನೆಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡದೇ ಇರುದರಿಂದ ವಿಸ್ತರಣೆ ಗೊಂದಲ ಮುಂದುವರಿದಿದೆ.

Vijaya Karnataka Web 20 Sep 2020, 12:15 pm
ಬೆಂಗಳೂರು: ಸಂಪುಟ ವಿಸ್ತರಣೆ ಕಗ್ಗಂಟಾಗಿ ಮಾರ್ಪಟ್ಟಿದ್ದು ಸಚಿವಾಕಾಂಕ್ಷಿಗಳಲ್ಲಿ ನಿರಾಸೆ ಮೂಡಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೆಹಲಿ ಭೇಟಿ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಚಟುವಟಿಕೆಗಳು ಗರಿಗೆದರಿದ್ದವು.
Vijaya Karnataka Web BS Yediyurappa


ಅಧಿವೇಶನಕ್ಕೂ ಮುಂಚೆ ಕ್ಯಾಬಿನೆಟ್ ವಿಸ್ತರಣೆ ಮಾಡುವ ಬಿಎಸ್‌ವೈ ಯೋಚನೆ ಕೊನೆಗೂ ಕೈಗೂಡಲಿಲ್ಲ. ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಗದ ಕಾರಣದಿಂದಾಗಿ ಯಡಿಯೂರಪ್ಪ ಬರಿಗೈನಲ್ಲಿ ವಾಪಸ್‌ ಆಗಿದ್ದಾರೆ. ಪರಿಣಾಮ ಮಂತ್ರಿಯಾಗುವ ಕನಸಿನಲ್ಲಿದ್ದ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.

ಹಿಂದಿ ಹೇರಿಕೆ ಗದ್ದಲ: ರಾಜ್ಯಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಎಚ್‌.ಡಿ ದೇವೇಗೌಡ

ಎಲ್ಲಾ ಅಂದುಕೊಂಡಂತೆ ನಡೆದರೆ ಅಧಿವೇಶನಕ್ಕೂ ಮೊದಲು ನಾಲ್ವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವುದು ಯಡಿಯೂರಪ್ಪ ಯೋಚನೆಯಾಗಿತ್ತು. ಈ ನಿಟ್ಟಿನಲ್ಲಿ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಆಯ್ಕೆಯನ್ನು ವರಿಷ್ಠರ ತೀರ್ಮಾನಕ್ಕೆ ಬಿಡಲಾಗಿತ್ತು.

ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜೊತೆಗೆ ಯಡಿಯೂರಪ್ಪ ಮಾತುಕತೆ ನಡೆಸಿದ್ದರು. ಆದರೆ ವರಿಷ್ಠರು ಕೊನೆಗೂ ಸಮ್ಮತಿ ನೀಡಿಲ್ಲ. ಬಿಎಲ್‌ ಸಂತೋಷ್‌ ಹಾಗೂ ಪ್ರಹ್ಲಾದ್ ಜೋಷಿಯವರ ಅಭಿಪ್ರಾಯವನ್ನು ಪಡೆದಿದ್ದ ಜೆ.ಪಿ ನಡ್ಡಾ ಸದ್ಯ ಸಂಪುಟ ವಿಸ್ತರಣೆ ಬೇಡ ಎಂಬ ಸೂಚನೆಯನ್ನು ಬಿಎಸ್‌ವೈಗೆ ನೀಡಿದ್ದಾರೆ.

ಸಂಸತ್‌ ಅಧಿವೇಶನ : ಲೋಕಸಭೆಯಲ್ಲಿ ಕೇಂದ್ರದ ವೈಫಲ್ಯಗಳ ಬಗ್ಗೆ ಧ್ವನಿ ಎತ್ತಿದ ಡಿ.ಕೆ ಸುರೇಶ್

ಬಿಜೆಪಿ ಮೂಲಗಳ ಮಾಹಿತಿ ಪ್ರಕಾರ ಒಂದು ವೇಳೆ ಸಂಪುಟ ವಿಸ್ತರಣೆ ಆಗುದಾದರೆ ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಸಂಪುಟ ವಿಸ್ತರಣೆ ಬದಲಾಗಿ ಪುನರಾಚನೆ ಆಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಅದೇನೇ ಇದ್ದರೂ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಹುಮ್ಮಸ್ಸಿನಲ್ಲಿದ್ದ ಎಂಟಿಬಿ ನಾಗರಾಜ್, ಆರ್‌. ಶಂಕರ್‌, ಎಚ್‌. ವಿಶ್ವನಾಥ್, ಉಮೇಶ್ ಕತ್ತಿ ಸೇರಿದಂತೆ ಆಕಾಂಕ್ಷಿಗಳಿಗೆ ಮತ್ತೊಮ್ಮೆ ನಿರಾಸೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ