ಆ್ಯಪ್ನಗರ

ಬಿಜೆಪಿ ಹಿರಿಯ ಸಚಿವರಿಗೆ 'ಬಿಸಿ' ಮುಟ್ಟಿಸಿದ ಪಾಟೀಲ್‌; ದೊಡ್ಡ ಖಾತೆ ಮೇಲೆ ಕಣ್ಣು?

ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಹಲವಾರು ಶಾಸಕರು ಈಗ ಸಚಿವರಾಗುವ ಕನಸು ಕಾಣುತ್ತಿದ್ದಾರೆ. ಹಿರೇಕೆರೂರು ಶಾಸಕ ಬಿಸಿ ಪಾಟೀಲ್‌ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಜತೆ ಚರ್ಚಿಸಿದರು.

Vijaya Karnataka Web 6 Jan 2020, 5:52 pm
ಬೆಂಗಳೂರು: ಹಿರಿಯ ಸಚಿವರು ತಮ್ಮ ಬಳಿಯ ಖಾತೆಗಳನ್ನು ಬಿಟ್ಟು ಕೊಡಲು ಒಪ್ಪುವುದು ಬಿಡುವುದು ಎಂಬ ಪ್ರಶ್ನೆ ಇಲ್ಲಿ ಉದ್ಭವಿಸುವುದಿಲ್ಲ. ಇಲ್ಲಿ ಬಿಟ್ಟು ಕೊಡೋ ಪ್ರಶ್ನೆಯೇ ಇಲ್ಲ.
Vijaya Karnataka Web ಬಿಸಿ ಪಾಟೀಲ್
ಬಿಸಿ ಪಾಟೀಲ್

ಯಾರೂ ಇಲ್ಲಿ ಸೈಕಾಲಜಿ ಓದಿ ಬಂದವರಿಲ್ಲ. ಖಾತೆಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹಿರಿಯ ಸಚಿವರಿಗೆ ಬಿಸಿ ಪಾಟೀಲ್ ಪರೋಕ್ಷವಾಗಿ ಟಾಂಗ್‌ ನೀಡಿದರು.

ಮುಂಬರುವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬಿಸಿ ಪಾಟೀಲರು ದೊಡ್ಡ ದೊಡ್ಡ ಖಾತೆ ಮೇಲೆ ಕಣ್ಣಿಟ್ಟಿದ್ದಾರಾ ಎಂಬ ಬಗ್ಗೆ ವಿಧಾನಸೌಧ ಪಡಸಾಲೆಯಲ್ಲಿ ಗುಸುಗುಸು ಕೇಳಿಬಂದಿದೆ.

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕ್ಷೇತ್ರದ ಅಭಿವೃದ್ಧಿಗ ಸಂಬಂಧಪಟ್ಟಂತೆ ಮುಖ್ಯಮಂತ್ರಿಯವರನ್ನು ಭೇಟಿಯಾಗಲು ಬಂದಿದ್ದೇನೆ. ಸಂಕ್ರಾಂತಿ ಆದ ಬಳಿಕ ಸಂಪುಟ ವಿಸ್ತರಣೆ ಮಾಡೋದಾಗಿ ಸಿಎಂ ಹೇಳಿದ್ರು. ಸಿಎಂ ಮೇಲೆ ನಮಗೆ ಸಂಪೂರ್ಣ ವಿಶ್ವಾಸ ಇದೆ ಎಂದರು.

ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಬೇಕು. ಉಪಚುನಾವಣೆ ಗೆದ್ದವರಲ್ಲಿ ಒಂದಿಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲ್ಲ ಎಂಬ ವಿಚಾರ ನಮಗೆ ಗೊತ್ತಿಲ್ಲ
ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಾನು ಯಾವ ಖಾತೆಯನ್ನೂ ಕೇಳಿಲ್ಲ. ಪೊಲೀಸ್‌ ಇಲಾಖೆಯಲ್ಲಿರುವ ನನ್ನ ಸ್ನೇಹಿತರು ನನ್ನ ಬಳಿ ಬಂದು ಗೃಹ ಸಚಿವರಾಗಿ ಅಂತಾರೆ. ಕೆಲವರು ಇಂಧನ, ಕೆಲವರು ಲೋಕೋಪಯೋಗಿ ಸಚಿವರಾಗಿ ಎಂದು ಆಗ್ರಹಿಸಿದ್ದಾರೆ ಎಂದರು.

ಸಚಿವ ಸಂಪುಟ ವಿಸ್ತರಣೆಗೂ ಮೊದಲೇ ದೊಡ್ಡ ದೊಡ್ಡ ಖಾತೆಗೆ ಕೆಲವು ಶಾಸಕರು ಪರೋಕ್ಷವಾಗಿ ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ