ಬೆಂಗಳೂರು: ರಾಜ್ಯದಲ್ಲಿ 438 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಕ್ಕೆ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ, 15ನೇ ಹಣಕಾಸು ಆಯೋಗದ ಅನುದಾನದಡಿಯಲ್ಲಿ ಒಟ್ಟು ರೂ. 103.73 ಕೋಟಿಗಳ ವೆಚ್ಚದಲ್ಲಿ 'ನಮ್ಮ ಕ್ಲಿನಿಕ್' (NC)ಗಳನ್ನು ಸ್ಥಾಪಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು. 438 ನರ್ಸ್, 438 ವೈದ್ಯರು ಹಾಗೂ 438 ಎರಡನೇ ದರ್ಜೆಯ ಗುಮಾಸ್ತರ ಹುದ್ದೆಯನ್ನು ಸೃಷ್ಟಿ ಮಾಡಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು. ಸಂಪುಟ ಸಭೆಯ ಇತರ ನಿರ್ಧಾರಗಳು
ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಮಾಸಿಕ 2,000 ರೂ. ಸಂಕಷ್ಟ ಭತ್ಯೆಯನ್ನು (Hardship Allowance) ನೀಡಲು ಅನುಮೋದನೆ. ಪೌರಕಾರ್ಮಿಕರು ಈಗಾಗಲೇ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಸರ್ಕಾರ ಪೌರಕಾರ್ಮಿಕರಿಗೆ ಸಂಕಷ್ಟ ಭತ್ಯೆ ನೀಡಿದೆ.
ಹಟ್ಟಿ ಚಿನ್ನದ ಗಣಿ ಕಂಪನಿ ಸರ್ಕಾರದಿಂದ ಗುತ್ತಿಗೆ ಪಡೆದ ಭೂಮಿಯ ಉತ್ತರ ಭಾಗದಲ್ಲಿ ಚಿನ್ನದ ನಿಕ್ಷೇಪಕ್ಕೆ decline ಮೂಲಕ ಭೂ ಕೆಳ ಮೈಗೆ ಮುಕ್ತ ಪ್ರದೇಶವನ್ನು ಕಲ್ಪಿಸುವ ರೂ. 307.95 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಚಿತ್ರದುರ್ಗದ ಶ್ರೀ ಮುರುಘಾಮಠದ ಆವರಣದಲ್ಲಿ 325 ಅಡಿ ಎತ್ತರದ ಶ್ರೀ ಜಗಜ್ಯೋತಿ ಬಸವೇಶ್ವರರ ಕಂಚಿನ ಪ್ರತಿಮೆಯನ್ನು ರೂ. 30ಕೋಟಿಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸುವ ಬಗ್ಗೆ ರೂ. 20 ಕೋಟಿಗಳನ್ನು ಈಗಾಗಲೇ ಬಿಡುಗಡೆ ಮಾಡಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಿದೆ.
ಯಾದಗಿರಿ ಜಿಲ್ಲೆಗೆ
ಜಲ ಜೀವನ್ ಮಿಷನ್ ಯೋಜನೆಯಡಿ ಯಾದಗಿರಿ ಜಿಲ್ಲೆಯ ಎಲ್ಲಾ ಗ್ರಾಮೀಣ ಜನವಸತಿಗಳಿಗೆ ಹಾಗೂ 3 ನಗರ ಸ್ಥಳೀಯ ಸಂಸ್ಥೆಗಳಾದ ಕಕ್ಕೆರಾ, ಕಂಭಾವಿ ಮತ್ತು ಹುಣಸಗಿ ಪಟ್ಟಣಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ರೂ.2054 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.
ತುಮಕೂರು ಜಿಲ್ಲೆಗೆ
ಜಲ ಜೀವನ್ ಮಿಷನ್ ಯೋಜನೆಯಡಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬೋರನಕಣಿವೆ ಅಣೆಕಟ್ಟಿನಿಂದ ಗಾಣದಾಳು, ಹೊಯ್ಸಳಕಟ್ಟೆ, ಕೆಂಕೆರೆ, ಬರಕನಾಳು, ದೊಡ್ಡಬಿದರ ಮತ್ತು ದಸೂಡಿ ಗ್ರಾಮ ಪಂಚಾಯಿತಿಗಳ 147 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು DBOT ಆಧಾರದ ಮೇಲೆ ರೂ. 115 ಕೋಟಿಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ. ತಿಪಟೂರು ತಾಲ್ಲೂಕಿನ ಹೇಮಾವತಿ ನದಿಯಿಂದ 398 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು DBOT ಆಧಾರದ ಮೇಲೆ 435 ಕೋಟೆಗಳ ಅಂದಾಜು ವಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ವಿಜಯಪುರ ಜಿಲ್ಲೆಗೆ
ಜಲ ಜೀವನ್ ಮಿಷನ್ ಯೋಜನೆಯಡಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತ್ತು ಸಿಂದಗಿ ತಾಲ್ಲೂಕುಗಳಲ್ಲಿನ ಎಲ್ಲಾ ಗ್ರಾಮೀಣ ಜನವಸತಿಗಳು ಹಾಗೂ ಮುದ್ದೇಬಿಹಾಳ ಮತ್ತು ಸಿಂದಗಿ ಟೌನ್ಗಳು ಹಾಗೂ ಇತರೆ 4 ನಗರ ಸ್ಥಳೀಯ ಸಂಸ್ಥೆಗಳಾದ ದೇವರ ಹಿಪ್ಪರಗಿ, ಆಲ್ಮೇಲ್, ತಾಳಿಕೋಟೆ ಮತ್ತು ನಲತವಾಡ್ (ಯೋಜನೆ-2) ಒಳಗೊಂಡಂತೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು DBOT ಆಧಾರದ ಮೇಲೆ ರೂ. 1,385 ಕೋಟಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಅನುಮೋದನೆ ನೀಡುವ ಸಾಧ್ಯತೆ ಇದೆ.
ಸಂಪುಟದ ಇತರೆ ನಿರ್ಧಾರಗಳು
ಹಲವು ಜಿಲ್ಲೆಗಳಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅನುದಾನ
ಬೆಳಗಾವಿ ಚಿಕ್ಕೋಡಿಯಲ್ಲಿ ಕೋರ್ಟ್ ಗೆ 22 ಕೋಟಿ ಅನುದಾನ. ಮೂಡಿಗೆರೆ ನ್ಯಾಯಾಲಯ 11 ಕೋಟಿ ಅನುದಾನ. ಕೋಲಾರದಲ್ಲಿ ಹೊಸ ಕೋರ್ಟ್ ಸ್ಥಾಪನೆಗೆ ₹25 ಕೋಟಿ. ಶ್ರೀನಿವಾಸಪುರ ಕೋರ್ಟ್ಗೆ ₹15 ಕೋಟಿ. ರಾಯಚೂರು ಜಿಲ್ಲೆ ಹೊಸ ನ್ಯಾಯಾಲಯಕ್ಕೆ ₹27.1ಕೋಟಿ, ದಾವಣಗೆರೆ ಕುಂದವಾಡ ನ್ಯಾಯಾಲಯ ಕಟ್ಟಡಕ್ಕೆ ₹22 ಕೋಟಿ ಹಣ ಮಂಜೂರಿಗೆ ಅನುಮೋದನೆ ನೀಡಲಾಗಿದೆ ಎಂದರು.
ರಾಜಣ್ಣ ಹಾಗೆ ಮಾತನಾಡಬಾರದಿತ್ತು!
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಕುರಿತಾಗಿ ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ ಜೆ.ಸಿ. ಮಾಧುಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ರಾಜಕೀಯ ಏನೇ ಇದ್ದರೂ ರಾಜಣ್ಣ ಹಾಗೆ ಮಾತನಾಡಬಾರದಿತ್ತು ಎಂದರು.
ಆಗಸ್ಟ್ ತಿಂಗಳಲ್ಲಿ ಅಧಿವೇಶನ
ವಿಧಾನಮಂಡಲ ಮಳೆಗಾಲದ ಅಧಿವೇಶನ ಜುಲೈ ತಿಂಗಳಲ್ಲಿ ನಡೆಸುವುದಿಲ್ಲ. ಬದಲಾಗಿ ಆಗಸ್ಟ್ ತಿಂಗಳಲ್ಲಿ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮಾಧುಸ್ವಾಮಿ ತಿಳಿಸಿದರು.
ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಮಾಸಿಕ 2,000 ರೂ. ಸಂಕಷ್ಟ ಭತ್ಯೆಯನ್ನು (Hardship Allowance) ನೀಡಲು ಅನುಮೋದನೆ. ಪೌರಕಾರ್ಮಿಕರು ಈಗಾಗಲೇ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಸರ್ಕಾರ ಪೌರಕಾರ್ಮಿಕರಿಗೆ ಸಂಕಷ್ಟ ಭತ್ಯೆ ನೀಡಿದೆ.
ಹಟ್ಟಿ ಚಿನ್ನದ ಗಣಿ ಕಂಪನಿ ಸರ್ಕಾರದಿಂದ ಗುತ್ತಿಗೆ ಪಡೆದ ಭೂಮಿಯ ಉತ್ತರ ಭಾಗದಲ್ಲಿ ಚಿನ್ನದ ನಿಕ್ಷೇಪಕ್ಕೆ decline ಮೂಲಕ ಭೂ ಕೆಳ ಮೈಗೆ ಮುಕ್ತ ಪ್ರದೇಶವನ್ನು ಕಲ್ಪಿಸುವ ರೂ. 307.95 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಚಿತ್ರದುರ್ಗದ ಶ್ರೀ ಮುರುಘಾಮಠದ ಆವರಣದಲ್ಲಿ 325 ಅಡಿ ಎತ್ತರದ ಶ್ರೀ ಜಗಜ್ಯೋತಿ ಬಸವೇಶ್ವರರ ಕಂಚಿನ ಪ್ರತಿಮೆಯನ್ನು ರೂ. 30ಕೋಟಿಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸುವ ಬಗ್ಗೆ ರೂ. 20 ಕೋಟಿಗಳನ್ನು ಈಗಾಗಲೇ ಬಿಡುಗಡೆ ಮಾಡಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಿದೆ.
ಯಾದಗಿರಿ ಜಿಲ್ಲೆಗೆ
ಜಲ ಜೀವನ್ ಮಿಷನ್ ಯೋಜನೆಯಡಿ ಯಾದಗಿರಿ ಜಿಲ್ಲೆಯ ಎಲ್ಲಾ ಗ್ರಾಮೀಣ ಜನವಸತಿಗಳಿಗೆ ಹಾಗೂ 3 ನಗರ ಸ್ಥಳೀಯ ಸಂಸ್ಥೆಗಳಾದ ಕಕ್ಕೆರಾ, ಕಂಭಾವಿ ಮತ್ತು ಹುಣಸಗಿ ಪಟ್ಟಣಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ರೂ.2054 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.
ತುಮಕೂರು ಜಿಲ್ಲೆಗೆ
ಜಲ ಜೀವನ್ ಮಿಷನ್ ಯೋಜನೆಯಡಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬೋರನಕಣಿವೆ ಅಣೆಕಟ್ಟಿನಿಂದ ಗಾಣದಾಳು, ಹೊಯ್ಸಳಕಟ್ಟೆ, ಕೆಂಕೆರೆ, ಬರಕನಾಳು, ದೊಡ್ಡಬಿದರ ಮತ್ತು ದಸೂಡಿ ಗ್ರಾಮ ಪಂಚಾಯಿತಿಗಳ 147 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು DBOT ಆಧಾರದ ಮೇಲೆ ರೂ. 115 ಕೋಟಿಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ. ತಿಪಟೂರು ತಾಲ್ಲೂಕಿನ ಹೇಮಾವತಿ ನದಿಯಿಂದ 398 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು DBOT ಆಧಾರದ ಮೇಲೆ 435 ಕೋಟೆಗಳ ಅಂದಾಜು ವಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ವಿಜಯಪುರ ಜಿಲ್ಲೆಗೆ
ಜಲ ಜೀವನ್ ಮಿಷನ್ ಯೋಜನೆಯಡಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತ್ತು ಸಿಂದಗಿ ತಾಲ್ಲೂಕುಗಳಲ್ಲಿನ ಎಲ್ಲಾ ಗ್ರಾಮೀಣ ಜನವಸತಿಗಳು ಹಾಗೂ ಮುದ್ದೇಬಿಹಾಳ ಮತ್ತು ಸಿಂದಗಿ ಟೌನ್ಗಳು ಹಾಗೂ ಇತರೆ 4 ನಗರ ಸ್ಥಳೀಯ ಸಂಸ್ಥೆಗಳಾದ ದೇವರ ಹಿಪ್ಪರಗಿ, ಆಲ್ಮೇಲ್, ತಾಳಿಕೋಟೆ ಮತ್ತು ನಲತವಾಡ್ (ಯೋಜನೆ-2) ಒಳಗೊಂಡಂತೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು DBOT ಆಧಾರದ ಮೇಲೆ ರೂ. 1,385 ಕೋಟಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಅನುಮೋದನೆ ನೀಡುವ ಸಾಧ್ಯತೆ ಇದೆ.
ಸಂಪುಟದ ಇತರೆ ನಿರ್ಧಾರಗಳು
- ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ತಾಲ್ಲೂಕಿನ ಮಾಗಡಿ ಹ್ಯಾಂಡ್ಪೋಸ್ಟ್ನಿಂದ ಜಾವಗಲ್ಗೆ ಸೇರುವ ರಸ್ತೆಯ ಕಿ.ಮೀ. 7.00 ರಿಂದ 22.20 ಕಿ.ಮೀ. ವರೆಗೆ ಅಭಿವೃದ್ಧಿ ಕಾಮಗಾರಿಗಳನ್ನು ರೂ. 25 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
- ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅನುಷ್ಠಾನಗೊಳಿಸುತ್ತಿರುವ ಉಳ್ಳಾಲ ನಗರಸಭಾ ವ್ಯಾಪ್ತಿ, ಕೋಟೆಕಾರ್ ಪಟ್ಟಣ ಪಂಚಾಯಿತಿ, ಸೋಮೇಶ್ವರ ಪುರಸಭೆ ಹಾಗೂ ಮಾರ್ಗ ಮಧ್ಯೆ ಬರುವ 24 ಗ್ರಾಮಗಳ ಕುಡಿಯುವ ನೀರು ಸರಬರಾಜು ಯೋಜನೆಯ ರೂ. 249.48 ಕೋಟಿಗಳ ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.
- ಚಳ್ಳಕೆರೆ ತಾಲ್ಲೂಕಿನ ಮೈಲನಹಳ್ಳಿ ಗ್ರಾಮದ ಹತ್ತಿರ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ರೂ. 19.90 ಕೋಟಿ ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
- ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ರಾಷ್ಟ್ರೋತ್ಥಾನ ಸಂಸ್ಥೆಗೆ ನೀಡಿದ ಜಮೀನು ಶುಲ್ಕ 25% ವಿನಾಯಿತಿ
- ಶಿವಮೊಗ್ಗ ವಿಮಾನ ನಿಲ್ದಾಣ ಅಭಿವೃದ್ಧಿ ಗೆ ನೈಟ್ ಲ್ಯಾಂಡಿಂಗ್ ಗೆ ವ್ಯವಸ್ಥೆ. ಇದಕ್ಕಾಗಿ 65.5 ಕೋಟಿ ಹೆಚ್ಚುವರಿ ಅನುದಾನ
ಹಲವು ಜಿಲ್ಲೆಗಳಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅನುದಾನ
ಬೆಳಗಾವಿ ಚಿಕ್ಕೋಡಿಯಲ್ಲಿ ಕೋರ್ಟ್ ಗೆ 22 ಕೋಟಿ ಅನುದಾನ. ಮೂಡಿಗೆರೆ ನ್ಯಾಯಾಲಯ 11 ಕೋಟಿ ಅನುದಾನ. ಕೋಲಾರದಲ್ಲಿ ಹೊಸ ಕೋರ್ಟ್ ಸ್ಥಾಪನೆಗೆ ₹25 ಕೋಟಿ. ಶ್ರೀನಿವಾಸಪುರ ಕೋರ್ಟ್ಗೆ ₹15 ಕೋಟಿ. ರಾಯಚೂರು ಜಿಲ್ಲೆ ಹೊಸ ನ್ಯಾಯಾಲಯಕ್ಕೆ ₹27.1ಕೋಟಿ, ದಾವಣಗೆರೆ ಕುಂದವಾಡ ನ್ಯಾಯಾಲಯ ಕಟ್ಟಡಕ್ಕೆ ₹22 ಕೋಟಿ ಹಣ ಮಂಜೂರಿಗೆ ಅನುಮೋದನೆ ನೀಡಲಾಗಿದೆ ಎಂದರು.
ರಾಜಣ್ಣ ಹಾಗೆ ಮಾತನಾಡಬಾರದಿತ್ತು!
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಕುರಿತಾಗಿ ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ ಜೆ.ಸಿ. ಮಾಧುಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ರಾಜಕೀಯ ಏನೇ ಇದ್ದರೂ ರಾಜಣ್ಣ ಹಾಗೆ ಮಾತನಾಡಬಾರದಿತ್ತು ಎಂದರು.
ಆಗಸ್ಟ್ ತಿಂಗಳಲ್ಲಿ ಅಧಿವೇಶನ
ವಿಧಾನಮಂಡಲ ಮಳೆಗಾಲದ ಅಧಿವೇಶನ ಜುಲೈ ತಿಂಗಳಲ್ಲಿ ನಡೆಸುವುದಿಲ್ಲ. ಬದಲಾಗಿ ಆಗಸ್ಟ್ ತಿಂಗಳಲ್ಲಿ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮಾಧುಸ್ವಾಮಿ ತಿಳಿಸಿದರು.