ಆ್ಯಪ್ನಗರ

ಬಿಎಸ್‌ವೈ ಸಂಪುಟ ಪುನಾರಚನೆ: ಸ್ಥಾನ ಉಳಿಸಿಕೊಳ್ಳಲು ಸಚಿವರಿಂದ ಹೈಕಮಾಂಡ್‌ ಮೊರೆ!

ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಯ ಬದಲಾಗಿ ಸಂಪುಟ ಪುನಾರಚನೆ ಮಾಡುವ ಯೋಚನೆಯಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಇದ್ದಾರೆ. ಪರಿಣಾಮ ಸಚಿವ ಸ್ಥಾನ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಸಚಿವರು.

Vijaya Karnataka Web 29 Jul 2020, 10:23 am
ಬೆಂಗಳೂರು: ಸರ್ಕಾರ ರಚನೆಯಾಗಿ ಒಂದು ವರ್ಷವಾದ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ ಮಾಡಲು ಬಿಎಸ್‌ವೈ ಮುಂದಾಗಿದ್ದಾರೆ ಎನ್ನಲಾಗಿದೆ. 34 ಸಚಿವ ಸ್ಥಾನಗಳ ಪೈಕಿ ಇನ್ನು ಆರು ಸ್ಥಾನಗಳುಬಾಕಿ ಉಳಿದಿದ್ದು ಆಕಾಂಕ್ಷಿಗಳ ಸಂಖ್ಯೆ ದೊಡ್ಡದಿದೆ. ಈ ನಿಟ್ಟಿನಲ್ಲಿ ಸಂಪುಟ ವಿಸ್ತರಣೆ ಬದಲಾಗಿ ಪುನಾರಚನೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಈ ಸುಳಿವಿನ ಬೆನ್ನಲ್ಲೇ ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ.
Vijaya Karnataka Web bs yeddyurappa press meet


ಸದ್ಯ ಇರುವ ಆರು ಸ್ಥಾನಗಳ ಪೈಕಿ ವಲಸೆ ಬಂದ ಎಂಟಿಬಿ ನಾಗರಾಜ್‌, ಎಚ್‌ ವಿಶ್ವನಾಥ್ ಹಾಗೂ ಆರ್‌. ಶಂಕರ್‌ಗೆ ಮಂತ್ರಿ ಸ್ಥಾನ ನೀಡಬೇಕಾಗಿದೆ. ಇನ್ನು ಮುನಿರತ್ಮ ಹಾಗೂ ಪ್ರತಾಪ್‌ಗೌಡ ಪಾಟೀಲ ಪ್ರಕರಣ ನ್ಯಾಯಾಲಯದಲ್ಲಿದೆ. ಪ್ರಕರಣ ಇತ್ಯರ್ಥವಾದರೆ ಅವರಿಗೂ ಸ್ಥಾನ ಕಾಯ್ದಿರಿಸಬೇಕಾಗಿದೆ. ಹೀಗಾದಲ್ಲೂ ಮೂಲ ಬಿಜೆಪಿಗರಿಗೆ ಉಳಿದಿದ್ದು ಕೇವಲ ಒಂದೇ ಸ್ಥಾನವಾಗಿದೆ.

ದೆಹಲಿ ಭೇಟಿ ಬಗ್ಗೆ ಅನಗತ್ಯ ಪ್ರಚಾರ ಬೇಡ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ! ಸವದಿ ಸ್ಪಷ್ಟನೆ

ಆದರೆ ಮಂತ್ರಿಗಿರಿ ಪಡೆಯಲು ಸಾಕಷ್ಟು ಮಂದಿ ಶಾಸಕರು ಸರದಿ ಸಾಲಲ್ಲಿ ನಿಂತಿದ್ದಾರೆ. ಉಮೇಶ್ ಕತ್ತಿ, ಬಸನಗೌಡ ಪಾಟೀಲ್‌ ಯತ್ನಾಳ್, ರಾಜೂಗೌಡ, ಸಿ.ಪಿ ಯೋಗೀಶ್ವರ್‌ ಸೇರಿದಂತೆ ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದಾರೆ. ಹಲವು ಬಾರಿ ಶಾಸಕರಾಗಿದ್ದು ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಅಸಮಾಧಾನ ಇವರಿಗಿದೆ.

ಕುಮಾರಸ್ವಾಮಿ ಬಿಜೆಪಿ ಬಗ್ಗೆ 'ಮೃದು ಧೋರಣೆ' ಹೊಂದಿಲ್ಲ, ದೇವೇಗೌಡ ಸ್ಪಷ್ಟನೆ

ಈ ನಿಟ್ಟಿನಲ್ಲಿ ಸಂಪುಟ ವಿಸ್ತರಣೆ ಬದಲಾಗಿ ಪುನಾರಾಚನೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾದರೆ ಹಾಲಿ ಸಚಿವರು ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳನ್ನು ಅಲ್ಲಗಳೆಯುವ ಹಾಗಿಲ್ಲ. ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆಗೂ ಕುರ್ಚಿ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಸುಳಿವಿನ ಬೆನ್ನಲ್ಲೇ ದೆಹಲಿಗೆ ತೆರಳಿ ಹೈಕಮಾಂಡ್‌ ಜೊತೆಗೆ ಮಾತುಕತೆಯನ್ನು ನಡೆಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ