ಆ್ಯಪ್ನಗರ

‘ಎಚ್‌ಡಿಕೆಯಿಂದ ಮುಸ್ಲಿಮರ ದಾರಿ ತಪ್ಪಿಸುವ ಪ್ರಯತ್ನ’ : ಬಿಎಸ್‌ವೈ ಕಿಡಿ

ಮಂಗಳೂರು ಗೋಲಿಬಾರ್‌ಗೆ ರಾಜ್ಯ ಸರಕಾರ ಹಾಗೂ ಸಿಎಂ ಬಿಎಸ್‌ವೈ ಕಾರಣ ಎಂದು ಆರೋಪಿಸಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿಗೆ ಸಿಎಂ ಬಿಎಸ್‌ವೈ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೇಳಿದ್ದು ಹೀಗೆ.

Vijaya Karnataka Web 22 Dec 2019, 4:29 pm
ಬೆಂಗಳೂರು: ಮಾಜಿ ಸಿಎಂ ಎಚ್‌. ಡಿ ಕುಮಾರಸ್ವಾಮಿ ಅಲ್ಪಸಂಖ್ಯಾತ ಸಮುದಾಯದ ಜನರ ದಾರಿತಪ್ಪಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ದುರುದ್ದೇಶದಿಂದ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.
Vijaya Karnataka Web cm bsy 1


ಮಂಗಳೂರಿನಲ್ಲಿ ಮಾತನಾಡಿದ್ದ ಎಚ್‌ಡಿಕೆ, ರಾಜ್ಯ ಸರಕಾರ ಹಾಗೂ ಸಿಎಂ ಬಿಎಸ್‌ವೈ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಮಂಗಳೂರಿನಲ್ಲಿ ಜನರು ಪ್ರತಿಭಟನೆಗೆ ಬಂದಿದ್ರು, ಯುದ್ದಕ್ಕೆ ಬಂದಿರಲಿಲ್ಲ.ಕೇರಳದವರು ಮನುಷ್ಯರಲ್ವಾ, ಅವರು ಪ್ರತಿಭಟಿಸಬಾರದಾ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಆದರೆ ಮಂಗಳೂರಿನಲ್ಲಿ ಕಲ್ಲು ತೂರಾಟ ಮಾಡಿದ್ದು ಹೊರಗಿನವರು. ಪೊಲೀಸ್ ಶಸ್ತ್ರಾಸ್ತ್ರಗಾರಕ್ಕೆ ನುಗ್ಗಲು ಪ್ರಯತ್ನ ಮಾಡಿದ್ದು ಅದೇ ಪ್ರತಿಭಟನಾಕಾರರು. ಕುಮಾರಸ್ವಾಮಿ ದುರುದ್ದೇಶದಿಂದ ಮಾತನಾಡುತ್ತಿದ್ದಾರೆ. ಅಲ್ಪಸಂಖ್ಯಾತರ ದಾರಿ‌ತಪ್ಪಿಸುವ ಕೆಲಸ ಕುಮಾರಸ್ವಾಮಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಿಎಎ, ಎನ್ ಆರ್ ಸಿ‌ಯ ಉದ್ದೇಶಗಳನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಜನರಿಗೆ ಮೊದಲು ತಿಳಿಸಲಿ. ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಹುಟ್ಟಿಸಲಿ. ಆದರೆ ಇದೇನೂ ಮಾಡದೇ ಜನರಲ್ಲಿ ಗೊಂದಲ ಹುಟ್ಟಿಸುವುದನ್ನು ನಾನು‌ ಖಂಡಿಸುತ್ತೇನೆ ಎಂದರು.

ಮಂಗಳೂರು ಗೋಲಿಬಾರ್ : ಪೊಲೀಸರ ಕ್ರಮ ಅನಾಗರಿಕ ಎಂದು ಎಚ್‌ಡಿಕೆ ವಾಗ್ದಾಳಿ

ಮಂಗಳೂರಿನಲ್ಲಿ ಮುಸ್ಲಿಂ ಮುಖಂಡರು, ಧರ್ಮ ಗುರುಗಳ ಜೊತೆ ಮಾತಾಡಿದೆ. ಯಾರೂ ಕಾಯ್ದೆ ವಿರೋಧಿಸಿ ಮಾತಾಡಲಿಲ್ಲ . ಕಾಯ್ದೆಯಿಂದ ಮುಸ್ಲಿಮರಿಗೆ ತೊಂದರೆ ಇಲ್ಲ ಎಂದು ಇದೇ ವೇಳೆ ಸಿಎಂ ಹೇಳಿದ್ದಾರೆ.

ಯಡಿಯೂರಪ್ಪ ಅಧಿಕಾರದಲ್ಲಿ ಎಷ್ಟು ದಿನ ಇರ್ತಾರೆ ನೋಡೋಣ ಅಂತ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.ಆದರೆ ಇನ್ನು ಮೂರೂವರೆ ವರ್ಷ ನನ್ನನ್ನು ಏನೂ ಮಾಡಕ್ಕಾಗಲ್ಲ . ನೀವು ಈಗಲೇ ಅಡ್ರೆಸ್ ಇಲ್ಲದಂತಾಗಿದ್ದೀರಿ. ಮೂರುವರೆ ವರ್ಷ ಆದ ಮೇಲೆ ನಿಮ್ಮ‌ ಪರಿಸ್ಥಿತಿ ಹೇಗಾಗಿರುತ್ತದೋ ಎಂಬುವುದು ಗೊತ್ತಿಲ್ಲ ಎಂದು ತಿರುಗೇಟು

ವಿಡಿಯೋ: ಮಂಗಳೂರು ಗಲಭೆಯಲ್ಲಿ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ಮಂಗಳೂರು ಗೋಲಿಬಾರ್ ಘಟನೆಯ ಕುರಿತು ಯಾವ ತನಿಖೆ ಅಂತ ಇನ್ನೂ ನಿರ್ಧರಿಸಿಲ್ಲ. ಗೃಹ ಸಚಿವರು ಚಿಕ್ಕಮಗಳೂರಿಗೆ ಹೋಗಿದಾರೆ . ಗೃಹಸಚಿವರು ಬಂದ ಮೇಲೆ ಚರ್ಚಿಸಿ ತೀರ್ಮಾನ ಕೈಗೊಳ್ತೇವೆ. ಕಾಯ್ದೆ ಈಗಾಗಲೇ ಜಾರಿಯಾಗಿದೆ. ರಾಜ್ಯದಲ್ಲಿ ಕಾಯ್ದೆ ಜಾರಿಗೆ ಅಂತ ಸಿದ್ಧತೆ ಅಂತ ಏನಿಲ್ಲ. ದೇಶದ ಇತರ ಕಡೆ ಕಾಯ್ದೆ ಜಾರಿಯಾದ ಮೇಲೆ ನಮ್ಮಲ್ಲೂ ಆಗುತ್ತೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ