ಆ್ಯಪ್ನಗರ

ರೈತರ ವಿರುದ್ಧ ದೂರು ದಾಖಲಿಸಬೇಡಿ;ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ರು ಸಿಎಂ

ರೈತರ ವಿರುದ್ಧ ಯಾವುದೇ ಕಾರಣಕ್ಕೂ ದೂರು ದಾಖಲಿಸಬೇಡಿ ಎಂದು ಸಿಎಂ ಬಿಎಸ್‌ವೈ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ನಡೆದ ಸಭೆಯಲ್ಲಿ ರೈತರ ಪರವಾಗಿ ಸರಕಾರ ನಿಲ್ಲಬೇಕು. ಅವರಿಗೆ ಯಾವುದೇ ತೊಂದರೆ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

Vijaya Karnataka Web 31 Oct 2019, 4:10 pm
ಬೆಂಗಳೂರು: ರೈತರ ವಿರುದ್ಧ ದೂರು ದಾಖಲಿಸಬೇಡಿ.ಅರಣ್ಯಭೂಮಿ ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸಬೇಡಿ. ಅವರ ಕೃಷಿ ಚಟುವಟಿಕೆಗೆ ಅವಕಾಶ ಮಾಡಿಕೊಡಬೇಕು. ಹೀಗೆ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸೇಶ್ವರ ಇನಾಮ್ ಭೂಮಿ ಸಾರಗೋಡು ತತ್ಕೋಳ ಮತ್ತು ಮಸಗಲಿ ಮೀಸಲು ಅರಣ್ಯ ಒತ್ತುವರಿ ತೆರವು ಕುರಿತು ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಬಿಎಸ್‌ವೈ ಸೂಚನೆ ನೀಡಿದರು.
Vijaya Karnataka Web cm meeting


ಮೆಡಿಕಲ್ ಕಾಲೇಜು ವಿವಾದ; ಯಡಿಯೂರಪ್ಪರಿಂದ ಸೇಡಿನ ಪಾಲಿಟಿಕ್ಸ್ ಎಂದ್ರು ಡಿಕೆಶಿ

ಇಂದು ಅರಣ್ಯ ಭೂಮಿ ಉಳಿದಿದೆ ಎಂದರೆ ಅದಕ್ಕೆ ರೈತರೇ ಕಾರಣ. ಹೀಗಾಗಿ ಯಾವ ರೈತನನ್ನು ಇನ್ನು ಅರಣ್ಯ ಭೂಮಿಯಿಂದ ಒಕ್ಕಲೆಬ್ಬಿಸಬಾರದು. ಅವರ ಕೃಷಿ ಚಟುವಟಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಮಾತನಾಡಿ, ಕೇರಳ‌ ಮಾದರಿಯಲ್ಲಿ ನಾವು ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಹಾಕಿ ರೈತರ ಜಮೀನು ಉಳಿಸಿಕೊಳ್ಳಬಹುದು. ಅಫಿಡವಿಟ್ ಹಾಕದೇ ಹೋದರೆ ಇಡೀ ಊರಿಗೆ ಊರೇ ಶಿಫ್ಟ್ ಮಾಡಬೇಕಾಗುತ್ತದೆ. ಅದಕ್ಕೆ ಪರ್ಯಾಯ ಜಾಗ ಹುಡುಕುವುದು ಸಹ ಕಷ್ಟ ಮತ್ತು ಶಿಫ್ಟ್ ಮಾಡುವುದು ಸಹ ಕಷ್ಟವಾಗುತ್ತದೆ ಎಂದು ಸಭೆಯಲ್ಲಿ ಸಿಎಂಗೆ ಮನವರಿಕೆ ಮಾಡಿಕೊಟ್ಟರು.

ಅಷ್ಟೇ ಅಲ್ಲದೆ ಈಗಾಗಲೇ ಅರಣ್ಯ ಅಧಿಕಾರಿಗಳು ರೈತರ ಜಮೀನನ್ನು ಅರಣ್ಯ ಭೂಮಿ‌ ಎಂದು ತೆರವು ಗೊಳಿಸುತ್ತಿದ್ದಾರೆ ಎಂಬ ವಿಚಾರವನ್ನು ಸಂಸದೆ ಶೋಭಾ ಕರಂದ್ಲಾಜೆ ಸಭೆಯಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ರೈತರ ಹಿತಾಸಕ್ತಿ ಕಾಪಾಡಬೇಕಾಗಿರುವುದು ನಮ್ಮ ಕರ್ತವ್ಯ. ಇವತ್ತು ಅರಣ್ಯ ಉಳಿದಿದೆ ಅಂದರೆ ಅದಕ್ಕೆ ರೈತರು ಕಾರಣ ಎಂದ ಅವರು, ಯಾವ ರೈತರನ್ನು ಒಕ್ಕಲೆಬ್ಬಿಸಬಾರದು ಅವರ ಕೃಷಿ ಚಟುವಟಿಕೆಗೆ ಅವಕಾಶ ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ಈ ಬಗ್ಗೆ ಕೂಡಲೇ ಅಫಿಡವಿಟ್ ಹಾಕಿ ಅಂತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ರೈತರ ವಿರುದ್ದ ದೂರು ದಾಖಲಿಸಿ ಬೆಂಗಳೂರಿಗೆ ಓಡಾಡಿಸುತ್ತಿದ್ದಾರೆ ಎಂದು ಕೆಲವು ಶಾಸಕರು ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯೆ ‌ನೀಡಿದ ಮುಖ್ಯಮಂತ್ರಿಗಳು ರೈತರ ವಿರುದ್ದ ದೂರು ದಾಖಲಿಸದಂತೆ ತಾಕೀತು ಮಾಡಿದರು. ರಾಜ್ಯದ ರೈತರ ಹಿತದೃಷ್ಟಿಯಿಂದ ರೈತರ ಜಮೀನಿಗೆ ತೊಂದರೆ ಕೊಡಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ