ಆ್ಯಪ್ನಗರ

ಕೋವಿಡ್ ನಿರ್ವಹಣೆಯಲ್ಲಿ ರಾಜ್ಯಕ್ಕೆ 2 ನೇ ಸ್ಥಾನ, ಕೊರೊನಾ ವಾರಿಯರ್ಸ್‌ಗೆ ಧನ್ಯವಾದ ಸಲ್ಲಿಸಿದ ಬಿಎಸ್‌ವೈ

ರಾಜ್ಯದಲ್ಲಿ ಕೊರೊನಾ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸಮೀಕ್ಷೆಯಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಎರಡನೇ ಸ್ಥಾನ ಸಿಕ್ಕಿದೆ. ಈ ಕುರಿತಾಗಿ ಬಿಎಸ್‌ವೈ ಟ್ವಿಟ್ಟರ್‌ನಲ್ಲಿ ಹೇಳಿದ್ದು ಹೀಗೆ.

Vijaya Karnataka Web 10 May 2020, 4:12 pm
ಬೆಂಗಳೂರು: ಕೊರೊನಾ ವೈರಸ್‌ ಹರಡದಂತೆ ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತಾಗಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಬಿಎಸ್‌ ಯಡಿಯೂರಪ್ಪ ಅವರಿಗೆ ಎರಡನೇ ಸ್ಥಾನ ದೊರಕಿದೆ. ಟೈಮ್ಸ್ ನೌ ಸುದ್ದಿವಾಹಿನಿ ಹಾಗೂ ಒಆರ್ ಮ್ಯಾಕ್ಸ್ ಜಂಟಿಯಾಗಿ ಸಮೀಕ್ಷೆ ನಡೆಸಿದ್ದವು.
Vijaya Karnataka Web bs yeddyurappa


ದೇಶದ ಮಟ್ಟದಲ್ಲಿ ನಡೆದ ಈ ಸಮೀಕ್ಷೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್‌ ಮೊದಲ ಸ್ಥಾನ ಪಡೆದುಕೊಂಡರೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ 3 ಸ್ಥಾನದಲ್ಲಿದ್ದಾರೆ. ಪಶ್ಚಿಮ ಬಂಗಾಲದ ಸಿಎಂ ಮಮತಾ ಬ್ಯಾನರ್ಜಿ ಆರನೇ ಸ್ಥಾನದಲ್ಲಿದ್ದಾರೆ.


ಪ್ರಚಾರಕಷ್ಟೇ ಕೊರೊನಾ ಪರಿಹಾರ ಪ್ಯಾಕೇಜ್ ಘೋಷಣೆ! ಬಿಎಸ್‌ವೈ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಸಮೀಕ್ಷೆಯಲ್ಲಿ ಬೆಂಗಳೂರಿನ ಶೇ. 56 ರಷ್ಟು ಜನರು ಕೊರೊನಾ ನಿರ್ವಹಣೆಯಲ್ಲಿ ಬಿಎಸ್‌ವೈ ಪಾತ್ರದ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ ಬಿಎಸ್‌ ಯಡಿಯೂರಪ್ಪ ಕೋವಿಡ್‌ ವಾರಿಯರ್ಸ್‌ಗೆ ಧನ್ಯವಾದ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ! ಇನ್ನಾದರೂ ಎಚ್ಚೆತ್ತುಕೊಳ್ಳುತ್ತಾ ಬಿಎಸ್‌ವೈ ಸರ್ಕಾರ

ಕೋವಿಡ್ ನಿಯಂತ್ರಣದಲ್ಲಿ ಸಚಿವ ಸಂಪುಟದ ಸದಸ್ಯರು, ಎಲ್ಲ ಜನಪ್ರತಿನಿಧಿಗಳು, ಸರ್ಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗ, ಎಲ್ಲ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಪೌರ ಕಾರ್ಮಿಕರು, ಚಾಲಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಎಲ್ಲ ಹಂತದ ಕೊರೊನ ವಾರಿಯರ್ಸ್ ಗಳ ಶ್ರಮಕ್ಕೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಧನ್ಯವಾದ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು ಮೇ 10 ಭಾನುವಾರ ಒಂದೇ ದಿನ 54 ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ಸೋಂಕು ಪ್ರಕರಣ ತೀವ್ರ ಸ್ವರೂಪದಲ್ಲಿ ಏರಿಕೆಯಾಗುತ್ತಿರುವುದು ಆತಂಕ ಮೂಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ