ಆ್ಯಪ್ನಗರ

ಸಿಎಎ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಕಾಂಗ್ರೆಸ್‌ ನಿರ್ಧಾರ

'ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಜನಜಾಗೃತಿ ಅಭಿಯಾನ ಆರಂಭಿಸುವ ಸಂಬಂಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾರ್ಯಾಗಾರ ನಡೆಸಲಾಗುತ್ತಿದೆ,' ಎಂದು ಉಗ್ರಪ್ಪ ವಿವರಿಸಿದ್ದಾರೆ.

Vijaya Karnataka 14 Jan 2020, 8:55 pm
ಬೆಂಗಳೂರು: ಪೌರತ್ವ ಕಾಯಿದೆ ವಿರುದ್ಧ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ ಕೈಗೆತ್ತಿಕೊಳ್ಳುವ ಸಂಬಂಧ ಕಾಂಗ್ರೆಸ್‌ ಜ. 16 ರಂದು ಪಕ್ಷದ ಮುಖಂಡರಿಗೆ ಕಾರ್ಯಾಗಾರ ನಡೆಸಲಿದೆ.
Vijaya Karnataka Web Congress


ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ವಿಎಸ್‌ ಉಗ್ರಪ್ಪ "ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಜನಜಾಗೃತಿ ಅಭಿಯಾನ ಆರಂಭಿಸುವ ಸಂಬಂಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾರ್ಯಾಗಾರ ನಡೆಸಲಾಗುತ್ತಿದೆ," ಎಂದು ತಿಳಿಸಿದರು.

ಈಗಾಗಲೇ ಬಿಜೆಪಿ ಸಿಎಎ ಪರ ಜಾಗೃತಿ ಆಂದೋಲನ ನಡೆಸುತ್ತಿದೆ. ಇದೀಗ ಕಾಂಗ್ರೆಸ್‌ ಇದರ ವಿರುದ್ಧ ಜಾಗೃತಿ ಅಭಿಯಾನ ನಡೆಸಲಿದೆ.

'ಇಲಿ'ಯಾದ ರಾಜಾ ಹುಲಿ:

'ರಾಜಾ ಹುಲಿ' ಎಂದು ಕರೆಸಿಕೊಳ್ಳುತ್ತಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಈಗ 'ರಾಜಾ ಇಲಿ' ಆಗಿಬಿಟ್ಟಿದ್ದಾರೆ. ಬೆಕ್ಕು ಎದುರುಗೊಂಡಾಗ ಇಲಿಗೆ ಒದಗಿಬರುವ ಸಂಕಟದ ಸ್ಥಿತಿಯಲ್ಲಿ ಬಿಎಸ್‌ವೈ ಇದ್ದಾರೆ. ಸಿಎಂ ಆಗಿ ಅವರಿಗೆ ಅಮಿತ್‌ ಶಾ ಭೇಟಿಗೆ ಅವಕಾಶ ಸಿಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಇದೇ ಸಂದರ್ಭದಲ್ಲಿ ಅವರು, 'ಅನ್ನಭಾಗ್ಯದ ಅಕ್ಕಿ ಪ್ರಮಾಣ ತಗ್ಗಿಸುವ ಪ್ರಯತ್ನ ನಡೆಸಿರುವ ಬಿಜೆಪಿ ಸರಕಾರಕ್ಕೆ ನಾಚಿಕೆಯಾಗಬೇಕು. ಬಡವರ ಕಾರ್ಯಕ್ರಮ ಮೊಟಕುಗೊಳಿಸುವ ತೀರ್ಮಾನ ಮಾಡಿದರೆ ಕಾಂಗ್ರೆಸ್‌ ಬೀದಿಗೆ ಇಳಿಯಲಿದ್ದು, ಸರಕಾರದ ವಿರುದ್ಧ ಜನಾಂದೋಲನ ರೂಪಿಸುತ್ತೇವೆ,' ಎಂದು ಉಗ್ರಪ್ಪ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ