ಕಾಂಗ್ರೆಸ್ ಬಂಡುಕೋರರ ಸುಳಿವಿಲ್ಲ; ರಾಜೀನಾಮೆ ಇನ್ನೂ ಅನುಮಾನ
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ನಾಲ್ವರಿಗೆ ಶನಿವಾರ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದರೂ ಇದುವರೆಗೂ ಅದಕ್ಕೆ ಪ್ರತಿಕ್ರಿಯೆ ನೀಡಿಲ್ಲ.
Vijaya Karnataka 20 Jan 2019, 10:28 pm
ಬೆಂಗಳೂರು : ಕಾಂಗ್ರೆಸ್ನಿಂದ ಕಾಲು ಹೊರಗಿಟ್ಟಿರುವ ನಾಲ್ವರು ಬಂಡಾಯ ಶಾಸಕರಾದ ರಮೇಶ್ ಜಾರಕಿಹೊಳಿ, ನಾಗೇಂದ್ರ, ಡಾ.ಉಮೇಶ್ ಜಾಧವ್ ಹಾಗೂ ಮಹೇಶ್ ಕುಮಠಳ್ಳಿ ಅವರ ಚಲನವಲನಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸೋಮವಾರವೂ ಈ ನಾಲ್ವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನುಮಾನವಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ನಾಲ್ವರಿಗೆ ಶನಿವಾರ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದರೂ ಇದುವರೆಗೂ ಅದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬದಲಿಗೆ ಮುಂಬಯಿನಲ್ಲಿಯೇ ವಾಸ್ತವ್ಯ ಹೂಡಿರುವ ಭಿನ್ನಮತೀಯರು ಬೆಂಗಳೂರಿನಲ್ಲಿ ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ಕಣ್ಣಿಟ್ಟಿದ್ದಾರೆ. ರೆಸಾರ್ಟ್ನಿಂದ ಕಾಂಗ್ರೆಸ್ ಶಾಸಕರನ್ನು ಬಿಡುಗಡೆ ಮಾಡಿದ ಬಳಿಕ ಮತ್ತಷ್ಟು ಶಾಸಕರು ಮತ್ತೆ ತಮ್ಮ ಪಾಳಯ ಸೇರುತ್ತಾರೆಂಬ ನಿರೀಕ್ಷೆಯಲ್ಲಿದ್ದಂತೆ ಕಾಣುತ್ತಿದೆ. ಬುಧವಾರದವರೆಗೂ ಇವರು ಬೆಂಗಳೂರಿಗೆ ವಾಪಸಾಗುವ ಸಾಧ್ಯತೆಗಳಿಲ್ಲ.
ಬರ ಅಧ್ಯಯನ
ಈ ಮಧ್ಯೆ ದಿಲ್ಲಿಯ ಗುರುಗ್ರಾಮದಿಂದ ವಾಪಸಾಗಿರುವ ಬಿಜೆಪಿ ಶಾಸಕರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆಯಂತೆ ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಾಲ್ಕೈದು ದಿನಗಳ ಕಾಲ ಬರ ಅಧ್ಯಯನ ನಡೆಸಲಿದ್ದಾರೆ. ಸ್ವತಃ ಯಡಿಯೂರಪ್ಪ ಸಹ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಲಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ನಾಲ್ವರಿಗೆ ಶನಿವಾರ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದರೂ ಇದುವರೆಗೂ ಅದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬದಲಿಗೆ ಮುಂಬಯಿನಲ್ಲಿಯೇ ವಾಸ್ತವ್ಯ ಹೂಡಿರುವ ಭಿನ್ನಮತೀಯರು ಬೆಂಗಳೂರಿನಲ್ಲಿ ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ಕಣ್ಣಿಟ್ಟಿದ್ದಾರೆ. ರೆಸಾರ್ಟ್ನಿಂದ ಕಾಂಗ್ರೆಸ್ ಶಾಸಕರನ್ನು ಬಿಡುಗಡೆ ಮಾಡಿದ ಬಳಿಕ ಮತ್ತಷ್ಟು ಶಾಸಕರು ಮತ್ತೆ ತಮ್ಮ ಪಾಳಯ ಸೇರುತ್ತಾರೆಂಬ ನಿರೀಕ್ಷೆಯಲ್ಲಿದ್ದಂತೆ ಕಾಣುತ್ತಿದೆ. ಬುಧವಾರದವರೆಗೂ ಇವರು ಬೆಂಗಳೂರಿಗೆ ವಾಪಸಾಗುವ ಸಾಧ್ಯತೆಗಳಿಲ್ಲ.
ಬರ ಅಧ್ಯಯನ
ಈ ಮಧ್ಯೆ ದಿಲ್ಲಿಯ ಗುರುಗ್ರಾಮದಿಂದ ವಾಪಸಾಗಿರುವ ಬಿಜೆಪಿ ಶಾಸಕರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆಯಂತೆ ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಾಲ್ಕೈದು ದಿನಗಳ ಕಾಲ ಬರ ಅಧ್ಯಯನ ನಡೆಸಲಿದ್ದಾರೆ. ಸ್ವತಃ ಯಡಿಯೂರಪ್ಪ ಸಹ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಲಿದ್ದಾರೆ.