ಆ್ಯಪ್ನಗರ

ಗಾಂಧಿ ಹತ್ಯೆ ಮಾಡಿದ ಗೋಡ್ಸೆಗೂ ಭಾರತ ರತ್ನ ಕೊಡಲಿ ಎಂದ ಸಿದ್ದರಾಮಯ್ಯ !

ಸಾವರ್ಕರ್‌ಗೆ ಭಾರತ ರತ್ನ ನೀಡುವ ಕೇಂದ್ರ ಸರಕಾರದ ನಿಲುವಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಗಾಂಧಿ ಹತ್ಯೆ ಮಾಡಿದ ಗೋಡ್ಸೆಗೂ ಭಾರತ ರತ್ನ ನೀಡಲಿ ಎಂದರು

Vijaya Karnataka Web 18 Oct 2019, 6:26 pm
ಮಂಗಳೂರು: ಸಾವರ್ಕರ್‌ಗೆ ಭಾರತ ರತ್ನ ಕೊಡುವ ಕೇಂದ್ರ ಸರಕಾರದ ಚಿಂತನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಸಾವರ್ಕರ್ ಮಹಾತ್ಮ ಗಾಂಧಿ ಹತ್ಯೆಯ ಸಂಚುಕೋರರಾಗಿದ್ದು ಅಂಥ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಮುಂದಾಗಿದೆ ಎಂದು ಕಿಡಿಕಾರಿದರು.
Vijaya Karnataka Web siddaramyya


ಸಾವರ್ಕರ್‌ಗೆ ಭಾರತ ರತ್ನ ನೀಡುವ ಕುರಿತಾಗಿ ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ. ಸರಕಾರದ ಈ ನಿಲುವಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಇದೇ ವಿಚಾರವಾಗಿ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಾವರ್ಕರ್ ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದವರಲ್ಲಿ ಒಬ್ಬರಾಗಿದ್ದಾರೆ. ಗೋಡ್ಸೆಯ ಹಿಂದೆ ನಿಂತು ಹತ್ಯೆಗೆ ಸಂಚು ರೂಪಿಸಿದ ಆರೋಪವಿದೆ. ಆದರೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಆರೋಪಿಯಾಗಿ ಗುರುತಿಸಲಾಗಲಿಲ್ಲ. ಇಂತಹ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಸರಕಾರ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಾವರ್ಕರ್‌ಗೆ ಭಾರತ ರತ್ನ ಕೊಡುವುದಾದರೆ ಗಾಂಧಿ ಹತ್ಯೆಕೋರ ನಾಥುರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟು ಬಿಡಲಿ ಎಂದು ಸಿದ್ದರಾಮಯ್ಯ ಎಂದು ವ್ಯಂಗ್ಯವಾಡಿದರು. ಇದೇ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಗುಂಡೂರಾವ್, ಸಾವರ್ಕರ್ ವಿವಾದಾತ್ಮಕ ವ್ಯಕ್ತಿಯಾಗಿದ್ದು, ಗಾಂಧೀಜಿ ಹತ್ಯೆಗೆ ಅವರು ಪ್ರಯತ್ನ ಮಾಡಿದ್ದರು. ಗಾಂಧಿ ಕೊಂದ ಗೋಡ್ಸೆಗೆ ಸಹಾಯ ಮಾಡಿರುವುದಲ್ಲದೆ, ಬ್ರಿಟಿಷರ ವಿರುದ್ಧ ಅವರೇನೂ ಹೋರಾಡಿದವರಲ್ಲ ಎಂದು ಆರೋಪಿಸಿದ್ದಾರೆ.

ಗಾಂಧಿಜೀ ಹತ್ಯೆಯ ಸಂಚಿನಲ್ಲಿ ಸಾವರ್ಕರ್ ಕೂಡ ಬಹಳ ಹತ್ತಿರದಲ್ಲಿದ್ದರು. ಇವರ ಪಾತ್ರ ಪ್ರಶ್ನಾತೀತ ಅಲ್ಲ ಅಂತಾ ಹೇಳಲು ಸಾಧ್ಯವಿಲ್ಲದಿರುವುದರಿಂದ ಸಾವರ್ಕರ್‌ಗೆ ಭಾರತರತ್ನ ನೀಡುವುದು ಸರಿಯಲ್ಲ. ಒಂದು ವೇಳೆ ಅವರಿಗೆ ಭಾರತರತ್ನ ಕೊಟ್ಟರೆ ಆ ಪ್ರಶಸ್ತಿಗೆ ಮೌಲ್ಯ ಕಡಿಮೆಯಾಗುತ್ತೆ ಎಂದಿದ್ದಾರೆ ದಿನೇಶ್ ಗುಂಡೂರಾವ್.

ನೀವು ಜಿನ್ನಾಗೆ ಭಾರತ ರತ್ನ ಕೊಡಲು ಶಿಫಾರಸ್ಸು ಮಾಡ್ತಿದ್ದಿರೇನೋ ? - ಸಿದ್ದು ಕಾಳೆಲೆದ ಈಶ್ವರಪ್ಪ

ಸಾವರ್ಕರ್ ಭಾರತರತ್ನ ಕುರಿತಾದ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಕೆ.ಎಸ್ ಕಿಡಿಕಾರಿದ್ದಾರೆ. ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ ಕಾಳೆಲೆದ ಈಶ್ವರಪ್ಪ ನಾವಾಗಿದ್ದಕ್ಕೆ ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡಲು ಶಿಫಾರಸ್ಸು ಮಾಡುತ್ತಿದ್ದೇವೆ. ನೀವಾಗಿದ್ದರೆ ಜಿನ್ನಾಗೆ ಕೊಡಿಸಲು ಶಿಫಾರಸ್ಸು ಮಾಡುತ್ತಿದ್ದೀರೆನೋ ? ಅಲ್ವಾ ಎಂದು ಕಿಚಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ