ಆ್ಯಪ್ನಗರ

ಬಿಎಸ್‌ವೈ ಮಣಿಸಲು ಕೈ ಸಿದ್ಧತೆ, ಸಿಎಲ್‌ಪಿ ಸಭೆಯಲ್ಲಿ ತಯಾರಾಗಲಿದೆ ಪ್ಲಾನ್

ಸೋಮವಾರ ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಆಡಳಿತ ಪಕ್ಷವನ್ನು ತರಾಟೆಗೆತೆಗೆದುಕೊಳ್ಳಲು ವಿಪಕ್ಷ ಕಾಂಗ್ರೆಸ್ ಸಜ್ಜಾಗುತ್ತಿದೆ. ಭಾನುವಾರ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ.

Vijaya Karnataka Web 16 Feb 2020, 3:21 pm
ಬೆಂಗಳೂರು: ಸೋಮವಾರ(ಫೆ. 17) ರಂದು ವಿಧಾನಮಂಡಲ ಅಧಿವೇಶದನ ಆರಂಭವಾಗಲಿದ್ದು ಆಡಳಿತ ಪಕ್ಷವಾದ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ. ಪಕ್ಷದ ಕಾರ್ಯತಂತ್ರ ಹಾಗೂ ಸದನದಲ್ಲಿ ನಡೆಸಬೇಕಾದ ಹೋರಾಟಗಳ ಕುರಿತಾಗಿ ಭಾನುವಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ.
Vijaya Karnataka Web karnataka congress plan to target bs yeddyurappa government at assembly session
ಬಿಎಸ್‌ವೈ ಮಣಿಸಲು ಕೈ ಸಿದ್ಧತೆ, ಸಿಎಲ್‌ಪಿ ಸಭೆಯಲ್ಲಿ ತಯಾರಾಗಲಿದೆ ಪ್ಲಾನ್


ಬೆಂಗಳೂರಿನ ಅಶೋಕಾ ಹೋಟೆಲ್‌ನಲ್ಲಿ ಸಿಎಲ್‌ಪಿ ಸಭೆ ನಡೆಯಲಿದ್ದು ದಿನೇಶ್ ಗುಂಡೂರಾವ್‌, ಡಿ.ಕೆ ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಪ್ರಮುಖ ಮುಖಂಡರು ಭಾಗಿಯಾಗಲಿದ್ದಾರೆ.

ಸೋಮವಾರದಿಂದ ನಡೆಯಲಿರುವ ಅಧಿವೇಶದಲ್ಲಿ ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ತಂತ್ರಗಾರಿಕೆ ನಡೆಸುತ್ತಿದೆ.

'ಧರ್ಮ ಕೆಣಕಿದ ಕಾರಣಕ್ಕೇ ಬಿಎಸ್‌ವೈ ಸಿಎಂ ಆದ್ರು': ಶರಣ ಸಮ್ಮೇಳನ ವೇದಿಕೆಯಲ್ಲಿ ಸಿದ್ದು V/S ಸೋಮಣ್ಣ..!

ಆನಂದ್‌ ಸಿಂಗ್ ಖಾತೆ ಬದಲಾವಣೆಗೆ ಪಟ್ಟು

ಸಚಿವ ಆನಂದ್‌ ಸಿಂಗ್‌ಗೆ ಅರಣ್ಯ ಖಾತೆ ನೀಡಿರುವ ವಿಚಾರ ಸದ್ಯ ರಾಜಕೀಯ ಚರ್ಚಾ ವಿಚಾರವಾಗಿ ಮಾರ್ಪಟ್ಟಿದೆ. ಅರಣ್ಯ ಒತ್ತುವರಿ ಸೇರಿದಂತೆ 15 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಆನಂದ್ ಸಿಂಗ್‌ಗೆ ಅರಣ್ಯ ಖಾತೆಯನ್ನು ನೀಡಬಾರದು ಎಂದು ಕಾಂಗ್ರೆಸ್‌ ಪಟ್ಟು ಹಿಡಿದಿದೆ. ಇದೇ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸುವ ಕಾರ್ಯತಂತ್ರವನ್ನು ರೂಪಿಸಿದೆ. ಈ ಮೂಲಕ ಸರ್ಕಾರಕ್ಕೆ ಒತ್ತಡ ಹೇರುವುದು ಕಾಂಗ್ರೆಸ್ ಮುಖಂಡರ ಪ್ಲಾನ್‌ ಆಗಿದೆ.

ಅಪಘಾತದಲ್ಲಿ ಪ್ರಭಾವಿ ಸಚಿವರ ಪುತ್ರನ ಪಾತ್ರದ ತನಿಖೆಗೆ ಒತ್ತಾಯ

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕಾರು ಅಪಘಾತದಲ್ಲಿ ರಾಜ್ಯದ ಪ್ರಭಾವಿ ಸಚಿವರೊಬ್ಬರ ಪುತ್ರನ ಹೆಸರು ಕೇಳಿಬರುತ್ತಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷವನ್ನು ಮುಜುಗರಕ್ಕೀಡು ಮಾಡುವ ತಂತ್ರವನ್ನು ಕಾಂಗ್ರೆಸ್ ಹೂಡಿದೆ. ಅಪಘಾತದಲ್ಲಿ ಪುತ್ರನನ್ನು ಪಾರು ಮಾಡಲು ಪೊಲೀಸರ ದುರ್ಭಳಕೆ ಮಾಡಲಾಗಿದೆ ಎಂದು ಸದನದಲ್ಲಿ ಗದ್ದಲ ಉಂಟುಮಾಡಲು ಕಾಂಗ್ರೆಸ್ ಮುಂದಾಗಿದೆ.

ಉತ್ತರ ಕರ್ನಾಟಕದಲ್ಲಿ ನೆರೆ ಪರಿಹಾರಕ್ಕೆ ಒತ್ತಾಯ

ಚುನಾವಣಾ ಕಣದಿಂದ ಹಿಂದೆ ಸರಿದ ಮೈತ್ರಿ ಅಭ್ಯರ್ಥಿ, ಸವದಿ ಆಯ್ಕೆ ಖಚಿತ

ಉತ್ತರ ಕರ್ನಾಟಕ ಭಾಗದಲ್ಲಿ ನೆರೆಗೆ ಸೂಕ್ತರೀತಿಯ ಪರಿಹಾರವನ್ನು ನೀಡಲು ರಾಜ್ಯ ಸರ್ಕಾರ ವಿಫಲವಾಗಿರುವುದನ್ನು ಮುಂದಿಟ್ಟುಕೊಂಡು ಸದನದಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ. ನೆರೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಅಂಕಿ ಅಂಶಗಳ ಮೂಲಕ ಸರ್ಕಾರನ್ನು ಇಟ್ಟಕ್ಕಿಗೆ ಸಿಲುಕಿಸಲು ಕಾಂಗ್ರೆಸ್ ತಂತ್ರ ಹೂಡಿದೆ.

ರಾಜ್ಯದಲ್ಲಿ ಬಿಎಸ್‌ವೈ ಸರ್ಕಾರದ ಆಡಳಿತ ವೈಫಲ್ಯ

ಪಕ್ಷದ ಗೊಂದಲದಿಂದ ಬಿಎಸ್‌ವೈ ಸರ್ಕಾರ ಆಡಳಿತ ವೈಫಲ್ಯ ಕಾಂಗ್ರೆಸ್ ಪಾಲಿದೆ ವರದಾನವಾಗಿದೆ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಆಡಳಿತ ಪಕ್ಷದ ವಿರುದ್ಧ ಮುಗಿಬೀಳಲು ಕಾಂಗ್ರೆಸ್ ಮುಂದಾಗಿದೆ. ಈಗಾಗಲೇ ಸಿದ್ಧರಾಮಯ್ಯ ಬಿಜೆಪಿ ಹಾಗೂ ಬಿಎಸ್‌ವೈ ವಿರುದ್ಧ ಹರಿಹಾಯ್ದಿದ್ದು ಅತ್ಯಂತ ಕೆಟ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದರು. ಅಲ್ಲದೆ ಬಿಎಸ್‌ವೈ ಅತ್ಯಂತ ದುರ್ಬಲ ಮುಖ್ಯಮಂತ್ರಿ ಎಂದು ಆರೋಪಿಸಿದ್ದರು.

ಹೀಗೆ ಆಡಳಿತ ಪಕ್ಷದ ಪ್ರಮುಖ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಸದನದಲ್ಲಿ ಮುಜುಗರ ಉಂಟುಮಾಡಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದು ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ