ಆ್ಯಪ್ನಗರ

ವಿಶ್ವಾಸಮತ ಯಾಚನೆಗೆ ಅಧಿಕೃತ ಪತ್ರವನ್ನೇ ನೀಡದ ಸಿಎಂ ಎಚ್‌ಡಿಕೆ...!

ಸಮ್ಮಿಶ್ರ ಸರಕಾರವನ್ನು ಉಳಿಸಿಕೊಳ್ಳುವ ಯತ್ನಗಳನ್ನು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಎರಡೂ ಪಕ್ಷಗಳ ನಾಯಕರು ಕೈಬಿಟ್ಟಿರುವಂತೆ ತೋರುತ್ತಿದೆ. ಹಾಗಿದ್ದರೂ ವಿಶ್ವಾಸಮತ ಸಾಬೀತುಪಡಿಸುವ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ವಾಸ್ತವದಲ್ಲಿ ಈ ಬಗ್ಗೆ ಅಧಿಕೃತ ಪತ್ರವನ್ನು ವಿಧಾನಸಭೆ ಕಾರ್ಯದರ್ಶಿಗಳಿಗೆ ಇನ್ನೂ ಕೊಟ್ಟಿಲ್ಲ ಎಂದು ತಿಳಿದು ಬಂದಿದೆ.

Vijaya Karnataka Web 15 Jul 2019, 11:22 am
ಬೆಂಗಳೂರು: ವಿಶ್ವಾಸಮತ ಯಾಚನೆಗೆ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅಧಿಕೃತವಾಗಿ ಲಿಖಿತ ಪತ್ರವನ್ನು ವಿಧಾನಸಭೆ ಕಾರ್ಯದರ್ಶಿಗೆ ಕೊಟ್ಟಿಲ್ಲ ಎಂದು ಮೂಲಗಳು ಹೇಳಿವೆ.
Vijaya Karnataka Web HD Kumaraswamy


ಸಮ್ಮಿಶ್ರ ಸರಕಾರವನ್ನು ಉಳಿಸಿಕೊಳ್ಳುವ ಭರವಸೆಯಲ್ಲಿದ್ದ ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸುವುದಾಗಿ ಶುಕ್ರವಾರವೇ ಘೋಷಿಸಿದ್ದರು. ಆದರೆ ಅಧಿಕೃತ ಪತ್ರವನ್ನು ಮಾತ್ರ ಇನ್ನೂ ಕೊಟ್ಟಿಲ್ಲ ಎಂದು ತಿಳಿದು ಬಂದಿದೆ.

ಹೀಗಾಗಿ ಸಿಎಂ ಘೋಷಣೆ ಕೇವಲ ತಂತ್ರಗಾರಿಕೆಯಷ್ಟೇ ಎಂದು ಬಣ್ಣಿಸಲಾಗುತ್ತಿದೆ. ಇದೇ ವೇಳೆ ಬಿಜೆಪಿ, ಇಂದೇ ವಿಶ್ವಾಸಮತ ಸಾಬೀತುಪಡಿಸುವಂತೆ ಒತ್ತಡ ಹೇರಲು ಮುಂದಾಗಿದೆ. ಹೀಗಾದಲ್ಲಿ ಸರಕಾರ ಪತನ ಖಚಿತ ಎಂದು ದೋಸ್ತಿ ಪಕ್ಷಗಳ ಮುಖಂಡರಿಗೆ ಮನವರಿಕೆಯಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರ ಚರ್ಚೆಯಾಗುತ್ತಿದೆ.

ಇಂದೇ ವಿಶ್ವಾಸಮತಕ್ಕೆ ಬಿಜೆಪಿ ಪಟ್ಟು ಹಿಡಿದರೆ ಸರಕಾರ ಪತನ ಖಚಿತ: ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಆತಂಕ


ಅಲ್ಲದೆ ಅತೃಪ್ತ ಶಾಸಕರ ಮನವೊಲಿಕೆಗಾಗಿ ಮುಂಬಯಿಗೆ ತೆರಳುವ ಯತ್ನವನ್ನೂ ಕಾಂಗ್ರೆಸ್, ಜೆಡಿಎಸ್ ಹಿರಿಯ ನಾಯಕರು ಇದೀಗ ಕೈಬಿಟ್ಟಿದ್ದಾರೆ. ತಮಗೆ ಕಾಂಗ್ರೆಸ್ ನಾಯಕರಿಂದ ಬೆದರಿಕೆ ಇದ್ದು ರಕ್ಷಣೆ ನೀಡುವಂತೆ ಅತೃಪ್ತ ಶಾಸಕರು ಮುಂಬಯಿ ಪೊಲೀಸ್ ಆಯಕ್ತರಿಗೆ ಮನವಿ ಸಲ್ಲಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ