ಆ್ಯಪ್ನಗರ

ಅತೃಪ್ತ ಶಾಸಕರಿಂದ 'ಪಕ್ಷದ್ರೋಹ': ದಿನೇಶ್ ಗುಂಡೂರಾವ್ ಕಿಡಿ

ರಾಜ್ಯದ ರಾಜಕೀಯ ಬಿಕ್ಕಟ್ಟು ಕೈಮೀರಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹತಾಶಗೊಂಡಿದೆ. ಅತೃಪ್ತ ಶಾಸಕರ ಮನವೊಲಿಸುವ ಎಲ್ಲ ಪ್ರಯತ್ನಗಳೂ ವಿಫಲವಾದ ಬಳಿಕ ಕೆಪಿಸಿಸ ಅಧ್ಯಕ್ಷ ದಿನೇಶ್ ಗುಂಡೂರಾವ್‌ ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಪಕ್ಷದ್ರೋಹದ ಆರೋಪ ಮಾಡಿದ್ದಾರೆ.

Vijaya Karnataka Web 14 Jul 2019, 3:33 pm
ಬೆಂಗಳೂರು: ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿ ಕಾರಿದ್ದಾರೆ. ಅತೃಪ್ತ ಶಾಸಕರು ಪಕ್ಷದ್ರೋಹ ಮಾಡಿದ್ದಾರೆ ಎಂದು ಗುಂಡೂರಾವ್ ದೂರಿದ್ದಾರೆ.
Vijaya Karnataka Web Dinesh Gundu Rao


ಪಕ್ಷಕ್ಕೆ ದ್ರೋಹ ಮಾಡಿ ಹೋಗುವವರ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ ಎಂದೂ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೂ ಕಿಡಿ ಕಾರಿರುವ ದಿನೇಶ್, ಮೋದಿ ಪ್ರಜಾಪ್ರಭುತ್ವದ ಕೊಲೆಗಾರ ಎಂದು ಆರೋಪಿಸಿದ್ದಾರೆ. ಪ್ರತಿ ಶಾಸಕರಿಗೆ 50ರಿಂದ 100 ಕೋಟಿ ರೂ ವರೆಗೆ ಆಮಿಷವೊಡ್ಡಿ ಬಿಜೆಪಿಗೆ ಸೆಳೆದುಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರು ಆರೋಪಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿ ಜತೆ ಮಾತನಾಡಿದ ದಿನೇಶ್ ಗುಂಡೂರಾವ್, ಪಕ್ಷದ್ರೋಹ ಮಾಡಿದವರ ವರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಸ್ತುತ ರಾಜಕೀಯ ಬಿಕ್ಕಟ್ಟಿನಲ್ಲಿ ಬಿಜೆಪಿಯ ಕೈವಾಡವಿದೆ. ಆಪರೇಷನ್ ಕಮಲದ ಮೂಲಕ ಪ್ರಜಾಪ್ರಭುತ್ವ ಕೊಲೆ ಮಾಡಲಾಗಿದೆ ಎಂದು ದಿನೇಶ್ ಗುಂಡೂರಾವ್ ದೂಷಿಸಿದ್ದಾರೆ.

ಪ್ರಧಾನಿ ಮೋದಿ ಅವರನ್ನು 'ತುಘಲಕ್ ಮೋದಿ' ಎಂದು ಕೆಪಿಸಿಸಿ ಟ್ವೀಟ್ ಮೂಲಕ ದೂಷಿಸಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ