ಆ್ಯಪ್ನಗರ

ಕಾಂಗ್ರೆಸ್ ನಾಯಕರಿಂದ ರಕ್ಷಣೆ ನೀಡಿ: ಅತೃಪ್ತ ಶಾಸಕರಿಂದ ಪೊಲೀಸರಿಗೆ ಮೊರೆ

ಮುಂಬಯಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ 14 ಮಂದಿ ಅತೃಪ್ತ ಶಾಸಕರು ತಮಗೆ ಕಾಂಗ್ರೆಸ್‌ನ ಹಿರಿಯ ನಾಯಕರಿಂದ ಬೆದರಿಕೆಯಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ತಾವು ಯಾವ ನಾಯಕರನ್ನೂ ಭೇಟಿಯಾಗುವುದಿಲ್ಲ, ಅವರಿಂದ ರಕ್ಷಣೆ ನೀಡಿ ಎಂದು ಪೊಲೀಸರಿಗೆ ಮೊರೆ ಹೋಗಿದ್ದಾರೆ.

Vijaya Karnataka Web 15 Jul 2019, 9:44 am
ಮುಂಬಯಿ: ಕಾಂಗ್ರೆಸ್‌ನ ಕೆಲವು ಹಿರಿಯ ನಾಯಕರಿಂದ ತಮಗೆ ಬೆದರಿಕೆಯಿದೆ ಎಂದು ಮುಂಬಯಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ 14 ಮಂದಿ ಅತೃಪ್ತ ಶಾಸಕರು ಮುಂಬಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದೇ ವೇಳೆ ಸುಪ್ರೀಂ ಕೋರ್ಟಿನ ಮೊರೆಯನ್ನೂ ಹೊಕ್ಕಿದ್ದಾರೆ.
Vijaya Karnataka Web Karnataka Rebel MLAs


ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್‌ ಸೇರಿದಂತೆ ಹಿರಿಯ ನಾಯಕರು ತಮ್ಮನ್ನು ಭೇಟಿ ಮಾಡಲು ಬರುತ್ತಿದ್ದಾರೆ ಎಂಬ ಸುಳಿವು ಅರಿತು ಅತೃಪ್ತ ಶಾಸಕರು ಈ ನಾಯಕರನ್ನು ತಡೆಯುವಂತೆ ಮನವಿ ಮಾಡಿದ್ದಾರೆ.


ದೋಸ್ತಿ ಪಕ್ಷಗಳ ಯಾವುದೇ ನಾಯಕರನ್ನು ತಾವು ಭೇಟಿ ಮಾಡುವುದಿಲ್ಲ, ರಾಜೀನಾಮೆಯ ತಮ್ಮ ನಿರ್ಧಾರ ಅಚಲ; ಅದನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಅತೃಪ್ತ ಶಾಸಕರು ಪದೇ ಪದೇ ಘೋಷಿಸಿದ್ದಾರೆ.

ನಮಗೆ ಮಲ್ಲಿಕಾರ್ಜುನ ಖರ್ಗೆ ಅಥವಾ ಗುಲಾಂ ನಬಿ ಆಜಾದ್ ಅಥವಾ ಕಾಂಗ್ರೆಸ್‌ನ ಯಾವುದೇ ನಾಯಕರನ್ನು, ಮಹಾರಾಷ್ಟ್ರ ಕಾಂಗ್ರೆಸ್‌ನ ನಿಯೋಜಿತ ನಾಯಕರನ್ನು ಭೇಟಿ ಮಾಡುವ ಯಾವುದೇ ಉದ್ದೇಶವಿಲ್ಲ. ಕಾಂಗ್ರೆಸ್‌ ನಾಯಕರಿಂದ ನಮಗೆ ತೀವ್ರ ಬೆದರಿಕೆಯಿದ್ದು, ಅವರು ನಮ್ಮನ್ನು ಭೇಟಿ ಮಾಡುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ ಎಂದು ಅತೃಪ್ತ ಶಾಸಕರು ಮುಂಬಯಿ ಪೊಲೀಸ್‌ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

ಕಾಂಗ್ರೆಸ್ ಶಾಸಕರ ಜತೆ ಕೊನೇ ಕ್ಷಣದಲ್ಲಿ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮಹತ್ವದ ಸಭೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ