ಆ್ಯಪ್ನಗರ

ಚುಟುಕು ಸುದ್ದಿ: IMA ವಂಚನೆ ಕೇಸ್ ಸಿಬಿಐಗೆ: ಯಡಿಯೂರಪ್ಪ ಅಭಿನಂದಿಸಿದ ಸೂಫಿ ಮುಖಂಡರು

ಮಂಗಳವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಘಟನೆಯ ಸಂಕ್ಷಿಪ್ತ ವಿವರ ಈ ಕೆಳಗಿನಂತಿವೆ.

Vijaya Karnataka Web 4 Sep 2019, 7:54 pm
ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿರುವ ಕಾರಣ ಹಿಂದೂಸ್ತಾನ್ ಸೂಫಿ ಮೂಮೆಂಟ್ ನೇತೃತ್ವದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಧನ್ಯವಾದ ಅರ್ಪಿಸಿ ಅಭಿನಂದಿಸಿದರು.
Vijaya Karnataka Web cm


ಕೊಡಗು: ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು ತ್ರಿವೇಣಿ ಸಂಗಮ ಕ್ಷೇತ್ರ, ಭಾಗಮಂಡಲ ಮತ್ತೆ ದ್ವೀಪವಾಗುವ ಆತಂಕ ಆರಂಭವಾಗಿದೆ. ಭಾಗಮಂಡಲ- ನಾಪೋಕ್ಲು ರಸ್ತೆ ಮೇಲೆ ಕಾವೇರಿ ನೀರು ಹರಿದು ಬರುತ್ತಿದ್ದು, ಬಹುತೇಕ ಕಡೆ ಜನಜೀವನ ಅಸ್ತವ್ಯಸ್ತವಾಗಿದೆ.


ಮೈಸೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದರು.


ರಾಮನಗರ: ಮಾಜಿ ಸಚಿವ ಡಿ ಕೆ ಶಿವಕುಮಾರ್ ಕ್ಷೇಮವಾಗಿರಲಿ ಎಂದು ಕನಕಪುರದ ಶಕ್ತಿ ದೇವತೆ ಕೆಂಕೇರಮ್ಮ ದೇವಾಲಯದಲ್ಲಿ ಮಹಿಳೆಯರು ಪೂಜೆ ಸಲ್ಲಿಸಿದರು. ಅನಾರೋಗ್ಯ ಹಿನ್ನೆಲೆಯಲ್ಲಿ ಡಿಕೆಶಿ ಅವರಿಗೆ ಆರೋಗ್ಯ ಕರುಣಿಸಲಿ ಎಂದು ಮಹಿಳೆಯರು ವಿಶೇಷ ಪೂಜೆ ನೆರವೇರಿಸಿದರು.

ಡಿಕೆಶಿ ಬಂಧನ ಬಳಿಕ ಕಾಂಗ್ರೆಸ್‌ನಿಂದ ಕಲ್ಲು ತೂರಾಟ ಕೃತ್ಯ: ನಳಿನ್ ಕುಮಾರ್ ಕಟೀಲ್

ಹಾಸನ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮಾರುಕಟ್ಟೆಗೆ ಇಳಿದು ಕಲ್ಲು ತೂರಾಟದಲ್ಲಿ ತೊಡಗಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆರೋಪಿಸಿದ್ದಾರೆ.

'ಬೆಳಗಾವಿ-ವಾಸ್ಕೋ ಡ ಗಾಮಾ' ವಿಶೇಷ ರೈಲು ಸಂಚಾರಕ್ಕೆ ಹಸಿರು ನಿಶಾನೆ

ಬೆಳಗಾವಿ: ಬೆಳಗಾವಿ-ಗೋವಾ ನಡುವಿನ ನೇರ ಸಂಚಾರ ಉದ್ದೇಶದ 'ಬೆಳಗಾವಿ-ವಾಸ್ಕೋಡ ಗಾಮಾ' ವಿಶೇಷ ರೈಲು ಸಂಚಾರಕ್ಕೆ ಬುಧವಾರ ವಾಸ್ಕೋ ರೈಲು ನಿಲ್ದಾಣದಲ್ಲಿ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ ಹಸಿರು ನಿಶಾನೆ ತೋರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ